HomeUncategorizedಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

ಮಾತು ಕೇಳದ ಮಾಜಿ ಚುನಾವಣಾಧಿಕಾರಿ ಅಶೋಕ್ ಲಾವಾಸಾ ಮೇಲೆ ಕೇಂದ್ರದ ಕೆಂಗಣ್ಣು.

- Advertisement -
- Advertisement -

ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರು 2009 ರಿಂದ 2013 ರವರೆಗೆ ಚುನಾವಣಾ ಆಯೋಗದ ವಿಶೇಷ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಅಶೋಕ್ ಅವರ ಕೆಲಸದ ಅವಧಿಯಲ್ಲಿ ಇತರರ ಮೇಲೆ ಪ್ರಭಾವ ಬೀರಿದ್ದರಾ..?, ತಮ್ಮ ಹುದ್ದೆಯನ್ನು ಬಳಸಿಕೊಂಡು ಬೇರೆ ಲಾಭ ಪಡೆಯಲು ಯತ್ನಿಸಿದ್ದರಾ..? ಎಂಬ ಬಗ್ಗೆ ಪರಿಶೀಲನೆ ನಡೆಸುವಂತೆ ಭಾರತ ಸರ್ಕಾರ, 11 ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಪತ್ರ ಬರೆದಿದೆ.

ಪ್ರಕರಣ ಹೊರಬರುತ್ತಿದ್ದಂತೆಯೇ ಅಶೋಕ್‌ ಲಾವಾಸರವರು ಕಳೆದ ಚುನಾವಣೆಯಲ್ಲಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ಮಾತಾಡಿದ್ದಕ್ಕೆ ಈಗ ಶಿಕ್ಷೆ ಅನುಭವಿಸಬೇಕಾಗಿದೆ. ಮೋದಿ ಮತ್ತು ಶಾರನ್ನು ಎದುರಾಕಿಕೊಂಡ ಎಲ್ಲರಿಗೂ ಇದೇ ಗತಿ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.

ಐಎಎಸ್ ಅಧಿಕಾರಿಯಾಗಿದ್ದ ಅಶೋಕ್ ಲಾವಾಸಾ, ಸೆಪ್ಟೆಂಬರ್ 2009 ರಿಂದ ಡಿಸೆಂಬರ್ 2013 ರವರೆಗೆ ಜೆಎಸ್ ಹೆಚ್ಚುವರಿ ಕಾರ್ಯದರ್ಶಿ / ವಿಶೇಷ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಈ ವೇಳೆ ಕೆಲ ಕಂಪನಿಗಳು ಮತ್ತು ಸಹಾಯಕ ಕಂಪನಿಗಳಿಗೆ ಲಾಭವಾಗುವಂತೆ ಅನಗತ್ಯ ಪ್ರಭಾವ ಬೀರಲು ತಮ್ಮ ಅಧಿಕೃತ ಸ್ಥಾನವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆ ಅಶೋಕ್ ಲಾವಾಸಾ ಬಗ್ಗೆ ಹಾಗೂ ದಾಖಲೆಗಳ ಪರಿಶೀಲನೆ ನಡೆಸುವಂತೆ ಪಿ.ಎಸ್.ಯು ಗಳ ಮುಖ್ಯ ವಿಜಿಲೆನ್ಸ್ ಅಧಿಕಾರಿಗಳಿಗೆ ತಿಳಿಸಿದೆ.

ಪಿ.ಎಸ್.ಯುನಲ್ಲಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಎನ್‌ಎಚ್‌ಪಿಸಿ ಲಿಮಿಟೆಡ್ ಅಥವಾ ಹಿಂದಿನ ರಾಷ್ಟ್ರೀಯ ಜಲವಿದ್ಯುತ್ ನಿಗಮ, ಆರ್‌ಇಸಿ ಲಿಮಿಟೆಡ್, ಗ್ರಾಮೀಣ ವಿದ್ಯುದ್ದೀಕರಣ ನಿಗಮ ಮತ್ತು ವಿದ್ಯುತ್ ಫೈನಾನ್ಸ್ ಕಾರ್ಪೊರೇಷನ್ ವಿಭಾಗಗಳು ಸೇರಿವೆ.

ಮುಖ್ಯವಾಗಿ ಮೋದಿ ಮತ್ತು ಅಮಿತ್‌ ಶಾರವರು ಲೋಕಸಭಾ ಚುನಾವಣೆಗೂ ಮೊದಲು ನಡೆದ ರ್‍ಯಾಲಿಗಳಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದವು. ದೂರುಗಳ ವಿಚಾರಣೆ ಸಂದರ್ಭದಲ್ಲಿ ಅಶೋಕ್‌ ಲಾವಾಸರವರು 10 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಮೋದಿ ಮತ್ತು ಅಮಿತ್‌ ಶಾ ಅಪರಾಧಿಗಳು ಎಂದು ಅಭಿಪ್ರಾಯಪಟ್ಟರೆ ಉಳಿದ ಇಬ್ಬರು ಚುನಾವಣಾಧಿಕಾರಿಗಳು ಮೋದಿ ಮತ್ತು ಅಮಿತ್‌ ಶಾ ಪರವಾಗಿ ವಾದಿಸಿ ಅವರಿಗೆ ಕ್ಲಿನ್‌ಚಿಟ್‌ ನೀಡಿದ್ದರು. ಇದರಿಂದ ಕುಪಿತಗೊಂಡ ಅಶೋಕ್‌ ಲಾವಾಸ ತೀರ್ಪಿನಲ್ಲಿ ನನ್ನ ಅಲ್ಪಸಂಖ್ಯಾತ ಅಭಿಪ್ರಾಯವನ್ನು ದಾಖಲಿಸಬೇಕೆಂದು ಒತ್ತಾಯಿಸಿ ಸಭೆಗಳಿಂದ ದೂರವುಳಿದಿದ್ದರು. ಇದು ಮೋದಿ ಮತ್ತು ಅಮಿತ್‌ ಶಾ ರವರಿಗೆ ಸಾಕಷ್ಟು ಮುಜುಗರ ತಂದಿತ್ತು.

ಆ ಸೇಡನ್ನು ತೀರಿಸಿಕೊಳ್ಳಲು ಈಗ ಹಳೆಯ ಕೇಸುಗಳಲ್ಲಿ ಅಶೋಕ್‌ ಲಾವಾಸ ರವರ ಮೇಲೆ ಮೋದಿ ಮತ್ತು ಅಮಿತ್‌ ಶಾ ದ್ವೇಷ ಸಾಧಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಾತ್ರವಲ್ಲದೇ.

ಅಲ್ಲದೇ ಲಾವಾಸರವರ ಪತ್ನಿ ನಾವೆಲ್‌ ಸಿಂಗ್ಹಾಲ್‌ ಲಾವಾಸರವರು ವಿರುದ್ಧ ಐಟಿ ಇಲಾಖೆಯು ನೋಟಿಸ್ ಜಾರಿ ಮಾಡಿದೆ. ಆಕೆಯು ಹಲವಾರು ಕಂಪನಿಗಳ ನಿರ್ದೇಶಕರಾಗಿದ್ದ ಅವಧಿಯಲ್ಲಿ ಸಮರ್ಪಕವಾಗಿ ಐಟಿ ರಿರ್ಟನ್ಸ್‌ ಸಲ್ಲಿಸಿಲ್ಲ ಎಂದು ಆರೋಪಿಸಿದೆ.

ಜೊತೆಗೆ ಲಾವಾಸರವರ ಸಹೋದರಿ ಶಕುಂತಲಾ ಲಾವಾಸರವರ ಮೇಲೆಯೂ ಐಟಿ ನೋಟಿಸ್‌ ನೀಡಿದೆ. ಲಾವಾಸರವರ ಪುತ್ರ ಅಬಿರ್‌ ಲಾವಾಸರವರು ತೊಡಗಿಸಿಕೊಂಡಿರುವ ಬುಕ್ಸ್ ಕಂಪನಿಗಳ ಮೇಲೆಯೂ ಐಟಿ ಇಲಾಖೆಯ ಕೆಂಗಣ್ಣು ಬಿದ್ದಿದೆ. 2009-10 ಸಾಲಿನ ಹಳೆಯ ವಿಚಾರಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರ ಕಿರುಕುಳ ಕೊಡಲು ಮುಂದಾಗಿದೆ. ಆದರೆ ನಾವು ಹೆದರುವುದಿಲ್ಲ ಏಕೆಂದರೆ ಎಲ್ಲಾ ವ್ಯವಹಾರಗಳನ್ನು ಕಾನೂನಾತ್ಮಕವಾಗಿಯೇ ಮಾಡಿದ್ದೇವೆ ಎಂದು ಲಾವಾಸ ಕುಟುಂಬ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕಾನೂನಾತ್ಮಕವಾಗಿ ಅಥವಾ ನ್ಯಾಯಯುತವಾಗಿ ಕೆಲಸ ಕಾರ್ಯ ನಿರ್ವಹಿಸುವ ಯಾವುದೇ ಅಧಿಕಾರಿಗಳಿಗೂ ಎಲ್ಲಾ ಸಕಾ೯ರಗಳೂ ಕೂಡ ಯಾವುದೇ ರೀತಿಯಲ್ಲಿ ಶಿಕ್ಷಿಸಲು ಹೊಂಚು ಹಾಕುತ್ತವೆ.

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...