Homeಅಂಕಣಗಳುಜನಪರ ವಿದ್ವಾಂಸ, ರಾಜಕಾರಣಿ ಅಶೋಕ್ ಮಿತ್ರ

ಜನಪರ ವಿದ್ವಾಂಸ, ರಾಜಕಾರಣಿ ಅಶೋಕ್ ಮಿತ್ರ

- Advertisement -
- Advertisement -

ಕಳೆದ ಮೇ ಒಂದರಂದು ಅಶೋಕ್ ಮಿತ್ರ ಅವರು ತೀರಿಕೊಂಡರು. ಅವರದು ಡಿeಟಿಚಿissಚಿಟಿಛಿe (ಪುನರುಜ್ಜೀವನ)ದ ಬಹುಮುಖೀ ವ್ಯಕ್ತಿತ್ವ ಎನ್ನಬಹುದು. ಬಂಗಾಳಿ ಭಾಷೆಯ ಲೇಖಕರಾಗಿದ್ದ ಅವರು ತಮ್ಮ ಪ್ರಬಂಧಗಳ ಅನೇಕ ಸಂಪುಟಗಳನ್ನು ಪ್ರಕಟಿಸಿದ್ದಾರೆ. ಅವರಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಕೂಡ ಲಭಿಸಿದೆ. ಇಛಿoಟಿomiಛಿ ತಿeeಞಟಥಿ (ಈಗ eಛಿoಟಿomiಛಿ ಚಿಟಿಜ ಠಿoಟiಣiಛಿಚಿಟ ತಿeeಞಟಥಿ, ಇPW), ಖಿhe ಖಿeಟegಡಿಚಿಠಿh ಪತ್ರಿಕೆಗಳಿಗೆ ಅಂಕಣಕಾರರಾಗಿದ್ದ ಅವರು ಸಾವಿರಾರು ಓದುಗರನ್ನು ಗಳಿಸಿದ್ದರು.ತೀಕ್ಷ್ಣಮತಿಯ ಅರ್ಥಶಾಸ್ತ್ರಜ್ಞರಾಗಿದ್ದ ಅವರು ಆ ವಿಷಯದಲ್ಲಿ ಎರಡು ವಿಶೇಷವಾದ ಕೃತಿಗಳನ್ನೂ ರಚಿಸಿದ್ದಾರೆ, ಖಿhe Shಚಿಡಿe oಜಿ Wಚಿges iಟಿ ಓಚಿಣioಟಿಚಿಟ Iಟಿಛಿome ಚಿಟಿಜ ಖಿeಡಿms oಜಿ ಖಿಡಿಚಿಜe ಮತ್ತು ಅಟಚಿss ಖeಟಚಿಣioಟಿs, ಈ ಎರಡು ಕೃತಿಗಳು ಇಂದಿಗೂ ಪ್ರಸ್ತುತ.
ಅರ್ಥಶಾಸ್ತ್ರಜ್ಞರಾಗಿ ಪಶ್ಚಿಮ ಬಂಗಾಳದ ಸರಕಾರದೊಂದಿಗೆ ಕೆಲಸ ಮಾಡಿದ್ದ ಅವರು ಕೃಷಿ ಬೆಲೆ ಆಯೋಗದ ಅಧ್ಯಕ್ಷರೂ ಆಗಿದ್ದರು; ವಿತ್ತ ಸಚಿವಾಲಯದ ಮುಖ್ಯ ಸಲಹೆಗಾರರೂ ಆಗಿದ್ದರು. ತಮ್ಮ ಜೀವನದುದ್ದಕ್ಕೂ ಕಮ್ಯುನಿಸ್ಟರಾಗಿದ್ದ ಅವರು ತಮ್ಮ ಸೈದ್ಧಾಂತಿಕ ನಿಲುವುಗಳಲ್ಲಿ ಅತ್ಯಂತ ಪಾರದರ್ಶಕವಾಗಿದ್ದರು. ಭಾರತದ ಎಡಪಂಥೀಯ ಬುದ್ಧಿಜೀವಿಗಳಲ್ಲಿ ಅಶೋಕ್ ಮಿತ್ರ ಪ್ರಮುಖ ಹೆಸರು.
1977ರಲ್ಲಿ ಪಶ್ಚಿಮ ಬಂಗಾಳದ ಮೊದಲ ಕಮ್ಯುನಿಸ್ಟ್ ಸರಕಾರದಲ್ಲಿ ವಾಣಿಜ್ಯ, ಅಭಿವೃದ್ಧಿ ಹಾಗೂ ಯೋಜನಾ ಸಚಿವರಾಗಿದ್ದರು. 1986ರವರೆಗೆ ಆ ಸ್ಥಾನದಲ್ಲಿ ಕಾರ್ಯನಿರ್ವಹಿಸಿ ರಾಜೀನಾಮೆ ನೀಡಿದರು. ಈ ಎಲ್ಲ ಕ್ಷೇತ್ರಗಳಲ್ಲಿ ಅವರ ಸಾಧನೆ ಅಗಾಧವಾದ್ದು. ಹೀಗೆ ತಮ್ಮ ಚಿಂತನೆ, ಬರವಣಿಗೆ ಹಾಗೂ ನಿರ್ವಹಿಸಿದ ಕಾರ್ಯಗಳ ಕಾರಣಕ್ಕಾಗಿ ಅವರು ಸ್ವಾತಂತ್ರ್ಯೋತ್ತರ ಭಾರತದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರೆನಿಸಿಕೊಂಡಿದ್ದಾರೆ.
ಇಂದಿನ ಬಾಂಗ್ಲಾದೇಶದಲ್ಲಿ 1928ರ ಏಪ್ರಿಲ್ 10 ರಂದು ಜನಿಸಿದ ಅಶೋಕ್ ಮಿತ್ರ, ಢಾಕಾದ ಅರ್ಮನಿಟೋಲ ಸರಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದು ಉನ್ನತ ಶಿಕ್ಷಣಕ್ಕಾಗಿ ಢಾಕಾ ವಿಶ್ವವಿದ್ಯಾಲಯಕ್ಕೆ ಹೋದರು. ಆದರೆ ಅವರು ಅರ್ಥಶಾಸ್ತ್ರದಲ್ಲಿ ಎಂಎ ಪರೀಕ್ಷೆ ಕಟ್ಟಬೇಕೆನ್ನುವಷ್ಟರಲ್ಲಿ ದೇಶ ವಿಭಜನೆಯಾಗಿ ಢಾಕಾ ಬಿಡಬೇಕಾಗಿ ಬಂತು. ಆಗ ಅವರು ತಮ್ಮ ಗುರು ಎ.ಕೆ.ದಾಸಗುಪ್ತ ಅವರನ್ನು ಹಿಂಬಾಲಿಸಿ ಬನಾರಸ್ ಹಿಂದು ವಿಶ್ವವಿದ್ಯಾಲಯಕ್ಕೆ ಬಂದು ಸೇರಿ, ಅಲ್ಲಿ ತಮ್ಮ ಎಂಎ ಡಿಗ್ರಿ ಮುಗಿಸಿದರು. ಆ ಪರೀಕ್ಷೆಯ ಭಾಗವಾಗಿ ಬರೆದ ಪ್ರಬಂಧವನ್ನು ಓದಿದ ಪರೀಕ್ಷಕರಾಗಿದ್ದ ಡಿ.ಪಿ. ಮುಖರ್ಜಿಯವರು ಆ ಪ್ರಬಂಧದ ಆಧಾರದ ಮೇಲೆಯೇ ಅಶೋಕ್ ಮಿತ್ರ ಅವರನ್ನು ಲಖನೌ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡಲು ಆಹ್ವಾನಿಸಿದರು. ಹೀಗೆ ಅಶೋಕ್ ಮಿತ್ರ ಅವರು ಲಖನೌನಲ್ಲಿ ಉಪನ್ಯಾಸಕರಾಗಿ ಕೆಲಕಾಲ ಕೆಲಸ ಮಾಡಿ, ನಂತರ ದೆಹಲಿ ಸ್ಕೂಲ್ ಆಫ್ ಎಕನಾಮಿಕ್ಸ್ ಸೇರಿದರು. ನ್ಯಾಷನಲ್ ಕೌನ್ಸಿಲ್ ಫಾರ್ ಅಪ್ಲೈಡ್ ಎಕನಾಮಿಕ್ ರಿಸರ್ಚ್‍ನಲ್ಲಿಯೂ ಕೆಲವು ವರ್ಷ ದುಡಿದಿದ್ದರು.
ನೆದರ್ಲ್ಯಾಂಡ್ ನಲ್ಲಿ ನೋಬೆಲ್ ಪುರಸ್ಕøತ ಪ್ರಖ್ಯಾತ ಅರ್ಥಶಾಸ್ತ್ರಜ್ಞ ಜಾನ್ ಟಿನ್ಬರ್ಗೆನ್ ಅವರ ಮೇಲ್ವಿಚಾರಣೆಯಲ್ಲಿ ಅಶೋಕ್ ಮಿತ್ರ ತಮ್ಮ ಡಾಕ್ಟೋರಲ್ ಪ್ರಬಂಧವನ್ನು ಬರೆದು ಮಂಡಿಸಿದರು. ಆ ಪ್ರಬಂಧದಲ್ಲಿ ಅಂತರರಾಷ್ಟ್ರೀಯ ಖ್ಯಾತಿಯ ಅರ್ಥಶಾಸ್ತ್ರಜ್ಞ ಮೈಕಲ್ ಕಲೆಕೀ ಅವರು ಪ್ರತಿಪಾದಿಸಿದ ವಿತರಣೆಯ ಸಿದ್ಧಾಂತಕ್ಕೆ ತಿದ್ದುಪಡಿಗಳನ್ನು ಸೂಚಿಸಿದ್ದರು. ಈ ಪ್ರಬಂಧ ಮಿತ್ರ ಅವರಿಗೆ ಅಂತರರಾಷ್ಟ್ರೀಯ ಖ್ಯಾತಿ ತಂದುಕೊಟ್ಟಿತು. ಭಾರತಕ್ಕೆ ಮರಳಿದ ನಂತರ ಕೊಲ್ಕೋತದಲ್ಲಿರುವ ಇಂಡಿಯನ್ ಇನ್ಸ್‍ಟಿಟ್ಯೂಟ್ ಆಫ್ ಮ್ಯಾನೇಜ್‍ಮೆಂಟ್ (IIಒ) ಜೊತೆಗೆ ಸೇರಿಕೊಂಡು, ಆ ಸಂಸ್ಥೆಯನ್ನು ಸಾಮಾಜಿಕ ವಿಜ್ಞಾನದ ದೇಶದ ಒಂದು ಅತ್ಯುನ್ನತ ಸಂಸ್ಥೆಯಾಗಿ ರೂಪಿಸುವ ಮಹತ್ಕಾರ್ಯದಲ್ಲಿ ಭಾಗಿಯಾದರು.
ಐಐಎಂನ ನಂತರದಲ್ಲಿ ಅಶೋಕ್ ಸರಕಾರವನ್ನು ಸೇರಿಕೊಂಡರು, ತುರ್ತುಪರಿಸ್ಥಿತಿ ಹೇರಿದಾಗ ಕೆಲಕಾಲ ವಿದೇಶದಲ್ಲಿ ಅಜ್ಞಾತವಾಸದಲ್ಲಿ ಕಳೆದು, 1977ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಶಾಸಕರಾದರು; ಜ್ಯೋತಿ ಬಸು ಸರಕಾರದಲ್ಲಿ ಸಚಿವರೂ ಆದರು. ಅವರು ಸಚಿವರಾಗಿದ್ದ ಕಾಲದಲ್ಲಿಯೇ ಪಶ್ಚಿಮ ಬಂಗಾಳದ ಗ್ರಾಮೀಣ ಭಾಗದಲ್ಲಿ ಅತ್ಯದ್ಭುತ ಬದಲಾವಣೆಗಳಾದವು ಹಾಗೂ ಈ ಬದಲಾವಣೆಗಳಲ್ಲಿ ಅಶೋಕ್ ಮಿತ್ರ ಅವರ ಪಾತ್ರ ನಿರ್ಣಾಯಕವಾದುದು. ಈ ಅವಧಿಯನ್ನು ‘ಆಪರೇಷನ್ ಬರ್ಗಾ’ ಎಂದು ಕರೆಯಲಾಗುತ್ತದೆ. ಆಗ ಭೂಮಿ ಹಂಚಿಕೆಯ ಪ್ರಕ್ರಿಯೆಯನ್ನು ಪುನರಾರಂಭಿಸಲಾಯಿತು ಮತ್ತು ಹೆಚ್ಚಿನ ಸಂಪನ್ಮೂಲಗಳ ಒಡೆತನವನ್ನು ಮತ್ತು ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಪಂಚಾಯತಿಗಳಿಗೇ ವಹಿಸಲಾಯಿತು. ಅದರೊಂದಿಗೆ ಕೃಷಿ, ನೀರಾವರಿ ಹಾಗೂ ಗ್ರಾಮೀಣ ಮೂಲಸೌಕರ್ಯಗಳ ಯೋಜನೆಗಳನ್ನು ಅಭಿವೃದ್ಧಿಪಡಿಸಲಾಯಿತು. ಈ ಎಲ್ಲ ಕ್ರಮಗಳು ಪಶ್ಚಿಮ ಬಂಗಾಳದಲ್ಲಿ ಅನೇಕ ದಶಕಗಳಿಂದ ಕೃಷಿ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದ ಜಡತೆಯನ್ನು ಹೋಗಲಾಡಿಸಿ, ಗ್ರಾಮೀಣ ಆರ್ಥಿಕತೆಗೆ ಹೊಸ ಜೀವ ತುಂಬಿದವು
ಅತ್ಯಂತ ಸೌಜನ್ಯ, ಅಸೀಮ ಧೈರ್ಯ ಹಾಗೂ ಪ್ರಾಮಾಣಿಕತೆಯನ್ನು ಹೊಂದಿದ್ದ ಅಶೋಕ್ ಮಿತ್ರ, ಅತ್ಯಂತ ನೇರನಡೆಯವರು, ನಿಷ್ಠುರ ಮಾತುಗಳಿಗೆ ಹೆಸರಾಗಿದ್ದವರು, ಸ್ನೇಹಪೂರ್ಣ ನಡವಳಿಕೆಯ ಜೊತೆಜೊತೆಗೇ ತಮ್ಮ ನೇರಾನೇರ ಟೀಕೆಗಳಿಗೂ ಖ್ಯಾತರಾಗಿದ್ದರು. (ಈ ಮಾತನ್ನು ನಾನು ಅನುಭವದಿಂದ ಹೇಳುತ್ತಿದ್ದೇನೆ). ಪಕ್ಷಕ್ಕೆ ಸಂಪೂರ್ಣವಾಗಿ ಬದ್ಧರಾಗಿದ್ದರೂ ಕೂಡ ಪಕ್ಷದ ಕ್ರಮಗಳು ತಪ್ಪೆಂದು ಕಂಡಾಗ ಕಟುವಾದ ಟೀಕೆಗಳಿಗೆ ಒಳಪಡಿಸುತ್ತಿದ್ದರು. ಆದರೆ ಅವರ ನಿಷ್ಕಲ್ಮಷ ಮನಸ್ಸನ್ನು ಎಲ್ಲರೂ ಬಲ್ಲವರಾದುದರಿಂದ ಯಾರೂ ಬೇಸರಿಸಿಕೊಳ್ಳುತ್ತಿದ್ದಿಲ್ಲ.
ತಾತ್ವಿಕ ಭಿನ್ನಾಭಿಪ್ರಾಯದಿಂದ ಎಡಪಕ್ಷದ ಸರಕಾರಕ್ಕೆ ರಾಜೀನಾಮೆ ನೀಡಿ ಹೊರಬಂದರೂ, ಸಿಪಿಎಂ ಪಕ್ಷ ಅವರನ್ನು ರಾಜ್ಯಸಭೆಗೆ ನಾಮಿನೇಟ್ ಮಾಡಿತು. ದೇಶದಲ್ಲಿ ನವಉದಾರೀಕರಣದ ನೀತಿಗಳನ್ನು ಜಾರಿಗೊಳಿಸಲು ಪ್ರಾರಂಭಿಸಿದ್ದ ಸಮಯ ಅದು. ರಾಜ್ಯಸಭೆಯ ಸದಸ್ಯರಾಗಿ ಅವರು ಕೈಗಾರಿಕೆ ಮತ್ತು ವಾಣಿಜ್ಯದ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡರು. ಅಲ್ಲಿದ್ದುಕೊಂಡು ಆ ಸಮಯದಲ್ಲಿ ಡಬ್ಲುಟಿಒ ಮುಖಾಂತರ ಅಮೆರಿಕ, ಮತ್ತು ಇತರ ಮುಂದುವರೆದ ರಾಷ್ಟ್ರಗಳ ಬೆಂಬಲದಿಂದ ಹೇರಲಾಗುತ್ತಿದ್ದ ಬೌದ್ಧಿಕ ಆಸ್ತಿ ಹಕ್ಕುಗಳ  ಆಧಿಪತ್ಯವನ್ನು ತಡೆಗಟ್ಟಲು ಹೋರಾಡಿದರು.
ಅಶೋಕ್ ಮಿತ್ರ ಅವರನ್ನು ಎಲ್ಲಕ್ಕಿಂತ ಹೆಚ್ಚಾಗಿ ನೆನಪಿಸಿಕೊಳ್ಳುವುದು ರಾಜ್ಯಗಳ ಹಕ್ಕುಗಳಿಗಾಗಿ ಹೋರಾಟ ಮಾಡಿದ ಕಾರಣಕ್ಕಾಗಿ. ಕೇಂದ್ರ ಸರ್ಕಾರದಲ್ಲಿದ್ದ ಅಧಿಕಾರ ಮತ್ತು ಸಂಪನ್ಮೂಲಗಳ ಅಪಾರ ಕೇಂದ್ರೀಕರಣವನ್ನು ಬಯಲು ಮಾಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು. ಇಂತಹ ಕೇಂದ್ರೀಕರಣದ ವ್ಯವಸ್ಥೆ ಯಾರ ಗಮನಕ್ಕೂ ಬರದಂತೆ ಸಾಗುತ್ತಿತ್ತು. ದೇಶದ ಒಕ್ಕೂಟ ವ್ಯವಸ್ಥೆಗೆ ಮಹತ್ವ ನೀಡುವಂತೆ ಅವರು ದೇಶದ ಎಡಪಕ್ಷಗಳಿಗೆ ಮನವರಿಕೆ ಮಾಡಿಕೊಟ್ಟರು. ಜ್ಯೋತಿಬಸು ಜೊತೆಗೂಡಿ ಎಲ್ಲ ವಿರೋಧ ಪಕ್ಷಗಳು ಮತ್ತು ಸರಕಾರಗಳನ್ನು ಒಕ್ಕೂಟದ ವೇದಿಕೆಯಡಿಯಲ್ಲಿ ಒಗ್ಗೂಡಿಸಲು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಿದರು. ಅವರ ಪರಿಶ್ರಮದ ಫಲವಾಗಿ ಕಾಂಗ್ರೆಸೇತರ ಮುಖ್ಯಮಂತ್ರಿಗಳ ಹಲವಾರು ಸಭೆಗಳು ನಡೆದು, ಶ್ರೀನಗರದಲ್ಲಿ ಒಂದು ಭಾರೀ ಸಭೆಯೊಂದಿಗೆ ಅಂತಿಮ ರೂಪ ತಳೆದಿತ್ತು.
ಎಂಬತ್ತರ ದಶಕದ ಮಧ್ಯದ ನಂತರ ಇಡೀ ದೇಶದ ಗಮನ ಬೇರೆಡೆ ಹೊರಳಿದರೂ ಅಶೋಕ್ ಮಿತ್ರ ಅವರು ದೇಶದ ಒಕ್ಕೂಟ ತತ್ವದ ಬಗ್ಗೆ ತಮಗಿದ್ದ ಬದ್ಧತೆ ಬಿಟ್ಟು ಕದಲಲಿಲ್ಲ. ಅವರು ಸರಕು ಮತ್ತು ಸೇವಾ ತೆರಿಗೆಯನ್ನು ಸಂಪೂರ್ಣವಾಗಿ ವಿರೋಧಿಸಿದ್ದರು, ಅದು ರಾಜ್ಯಗಳ ಹಿತಾಸಕ್ತಿಗಳ ವಿರುದ್ಧವಿದ್ದು, ರಾಜ್ಯಗಳ ಹಕ್ಕುಗಳ ಮೇಲೆ ಉSಖಿ ಗಂಭೀರ ಅತಿಕ್ರಮಣ ಮಾಡುತ್ತದೆಂದು ಅವರು ವಾದಿಸಿದರು. ತಮ್ಮ ಆರೋಗ್ಯ ಹದಗೆಡುತ್ತಿದ್ದರೂ ಅವರು ಈ ವಿಷಯದ ಬಗ್ಗೆ ನಿರಂತರವಾಗಿ ಬರೆದರು ಹಾಗೂ ಅಂತಿಮವಾಗಿ ರಾಜ್ಯಗಳು ಉSಖಿ ವ್ಯವಸ್ಥೆಗೆ ಸಮ್ಮತಿ ನೀಡಿದಾಗ ಸಹಜವಾಗಿಯೇ ನಿರಾಶೆಗೊಂಡಿದ್ದರು.
ಹೀಗೆ, ತಮ್ಮ ಜೀವನದುದ್ದಕ್ಕೂ ಹಲವಾರು ರಂಗಗಳಲ್ಲಿ ದಣಿವರಿಯದೆ ದುಡಿದ ಮೇರು ವ್ಯಕ್ತಿ ಅಶೋಕ್ ಮಿತ್ರ. ಅವರ ನಿಧನದೊಂದಿಗೆ, ನಮ್ಮ ದೇಶ ಸದಾ ದುಡಿವ ವರ್ಗಗಳ ಜನರ ಹಕ್ಕುಗಳ ಬಗ್ಗೆಯೇ ಚಿಂತಿಸುತ್ತಿದ್ದ ಒಬ್ಬ ಶ್ರೇಷ್ಠ ಜ್ಞಾನಿಯನ್ನು ಕಳೆದುಕೊಂಡಿದೆ.

ಇಂಗ್ಲಿಷ್ ಮೂಲ : ಪ್ರಭಾತ್ ಪಟ್ನಾಯಕ್
ಕನ್ನಡಕ್ಕೆ : ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...