Homeಕರ್ನಾಟಕಅಪರೂಪದ ಇರುವೆಗಳನ್ನು ಪತ್ತೆ ಮಾಡಿದ ’ಏಟ್ರಿ’: ಇರುವೆಗೆ ಬರಹಗಾರ ಗಣೇಶಯ್ಯ ಹೆಸರು

ಅಪರೂಪದ ಇರುವೆಗಳನ್ನು ಪತ್ತೆ ಮಾಡಿದ ’ಏಟ್ರಿ’: ಇರುವೆಗೆ ಬರಹಗಾರ ಗಣೇಶಯ್ಯ ಹೆಸರು

- Advertisement -
- Advertisement -

“ಅಶೋಕ ಟ್ರಸ್ಟ್ ಫಾರ್‌ ರೀಸರ್ಚ್‌ ಇನ್‌ ಇಕಾಲಜಿ ಆ್ಯಂಡ್‌ ಎನ್ವಿರಾನ್‌ಮೆಂಟ್‌” (ATREE ) ಎಂಬ ಬೆಂಗಳೂರಿನ ಸಂಶೋಧನ ಕೇಂದ್ರದ ಕೀಟಶಾಸ್ತ್ರಜ್ಞರು ಎರಡು ಹೊಸ ಅಪರೂಪದ ಇರುವೆಗಳನ್ನು Eaglenest wild life santuary (EWS) ಎಂಬ ವನ್ಯಜೀವಿ ಅಭಯಾರಣ್ಯದಿಂದ ಕಂಡುಹಿಡಿದ್ದಾರೆ.

ಏಟ್ರಿ ಸಂಸ್ಥೆಯ ಸ್ಥಾಪಕರಲ್ಲಿ ಒಬ್ಬರು ಹಾಗೂ ATREE ಸಂಶೋಧನ ಕೇಂದ್ರದಲ್ಲಿ ಕೀಟವರ್ಗಿಕರಣ ಮತ್ತು ಸಂರಕ್ಷಣ (Insect taxonomy and conservation) ಪ್ರಯೋಗಲಾಯ ತೆರೆಯುವುದರಲ್ಲಿ ಮುಖ್ಯ ಕಾರಣಕರ್ತರಾದ ಪ್ರೊ. ಕೆ. ಎನ್.ಗಣೇಶಯ್ಯರವರ ಹೆಸರನ್ನು ಒಂದು ಇರುವೆಗೆ ಇಡಲಾಗಿದೆ.

ಎರಡು ಹೊಸ ಇರುವೆಯಲ್ಲಿ ಒಂದು ಇರುವೆಗೆ “ಪ್ಯಾರಸಿಸ್ಸಿಯ ಗಣೇಶಯ್ಯಯಿ” ಎಂದು ಇಡಲಾಗಿದೆ. ಮತ್ತೊಂದು ಇರುವೆಯು ಭಾರತ ದೇಶದಲ್ಲಿ ಮೊದಲು ದಾಖಲಾಗಿರುವ ಕಾರಣ ಭಾರತದೇಶವನ್ನು ಉಲ್ಲೇಖಿಸಿ “ಸಿಸ್ಸಿಯ ಇಂಡಿಕ’ ಎಂದು ಹೆಸರಿಸಲಾಗಿದೆ.

ಈಗಾಗಲೇ ಅಂಡಮಾನ್‌ಲ್ಲಿನ ಒಂದು ಸಸ್ಯಕ್ಕೆ centotheca ganeshaiahiana ಎಂದು ಆಂಧ್ರ ಪ್ರದೇಶದ ಒಂದು ಸಸ್ಯಕ್ಕೆ Tripogan umaganeshii ಎಂದು ಹೆಸರಾದ ಕೃಷಿ ವಿಜ್ಞಾನಿ ಹಾಗೂ ಸಸ್ಯ ಪ್ರಪಂಚದಲ್ಲಿ ಅಪಾರ ಸಂಶೋಧನೆ ನಡೆಸಿರುವ ಅಂತರರಾಷ್ಟ್ರೀಯ ಮಟ್ಟದ ಪರಿಸರ ವಿಜ್ಞಾನಿ, ಚಿಂತಕ ಮತ್ತು ಬರಹಗಾರರು ಗಣೇಶಯ್ಯ.

ಇದನ್ನೂ ಓದಿ: ದಲಿತರಿಗೆ ವಸತಿ ಮಂಜೂರು ಮತ್ತು ಆತ್ಮವಿಶ್ವಾಸ ತುಂಬುತ್ತಿದ್ದ ಗಣಪಯ್ಯನವರ ಕುಟುಂಬ

ಅರುಣಾಚಲಪ್ರದೇಶದ ವೆಸ್ಟ್ ಕಾಮೆಂಗ್ ಜಿಲ್ಲೆಯ ಹಿಮಾಚಲದ ತಪ್ಪಲಿನಲ್ಲಿ ಪಕ್ಕೆ ಟೈಗರ್ ರಿಸರ್ವ್ ಮತ್ತು ಟೆಂಗ್ ಆರ್ಮಿ ಕಂಟೋನ್ಮೆಂಟ್ ಪ್ರದೇಶಗಳ ಮರೆಯಲ್ಲಿರುವ ಈಗಲ್‍ನೆಸ್ಟ್ ವನ್ಯಜೀವಿ ಅಭಯಾರಣ್ಯವು ಪರಿಸರ ವಿಜ್ಞಾನಿಗಳಿಗೆ ಮತ್ತು ಪ್ರಕೃತಿ ಉತ್ಸಾಹಿಗಳಿಗೆ ಸ್ವರ್ಗವಾಸಿಯಾಗಿದೆ. 218 ಚದರ ಕಿಲೋಮೀಟರ್‍ಗಳಷ್ಟು ವ್ಯಾಪಿಸಿರುವ ಅರಣ್ಯಪ್ರದೇಶವು ಸಮುದ್ರಮಟ್ಟದಿಂದ 500 ಮೀ ನಿಂದ 3250 ಮೀ ಎತ್ತರದ ನಡುವೆ ಅನೇಕ ಅಚ್ಚರಿಗಳನ್ನು ಒಳಗೊಂಡಿದೆ.

ಅಶೋಕ ಸಂಶೋಧನ ಕೇಂದ್ರದ ಕೀಟಶಾಸ್ರಜ್ಞರು ಈಗಲ್‍ನೆಸ್ಟ್ ಅಭಯಾರಣ್ಯದಿಂದ 200 ಕ್ಕೂ ಹೆಚ್ಚು ಜಾತಿಯ (Species) ಇರುವೆಗಳು ಒಟ್ಟಾರೆ ಭಾರತದ ಇರುವೆಗಳ ಸರಾಸರಿ 25% ರಷ್ಟು ಇರುವೆಗಳನ್ನು ಸಂಗ್ರಹಿಸಿದ್ದಾರೆ.  ಸಂಶೋಧಕರ ತಂಡ ಡಾ. ಪ್ರಿಯದರ್ಶನನ್ ಧರ್ಮರಾಜನ್ (Senior fellow ) ಅಸ್ವಜ್ ಪುನ್ನಥ್ ಸಹನಶ್ರೀ (ATREE Bangalore ) ಹಾಗೂ ಡಾ. ಅನಿರುದ್ದ ಮರಾತೆ (IISC Bangalore) ಅವರುಗಳು ಆಸಕ್ತಿದಾಯಕ ಇರುವೆಗಳನ್ನು ಸಂಗ್ರಹಿಸಿದ್ದಾರೆ.

“ಪ್ಯಾರಸಿಸ್ಸಿಯ ಗಣೇಶಯ್ಯಯಿ” ಇರುವೆಯು ಹಳದಿ ಮಿಶ್ರಿತ ಕಂದು ಬಣ್ಣದ ಸಣ್ಣ ಗಾತ್ರದ ಇರುವೆ ಮತ್ತು ಮೇಲ್ಮೈ ಭಾಗವು ಮೈಕ್ರೂಪಂಕ್ಚರ್ಸ್‍ಗಳಿಂದ ಕೂಡಿರುವ ಈ ಇರುವೆಯು ತನ್ನ ಗೂಡನ್ನು ಕೊಳೆತ ದಿಂಬಿಗಳಲ್ಲಿ ಅಥವಾ ಕಲ್ಲುಗಳ ಅಡಿಯಲ್ಲಿ ನಿರ್ಮಿಸುತ್ತದೆ. ಇದನ್ನು ದಟ್ಟ ಅರಣ್ಯದ ಜನನಿಬಿಡ ಪ್ರದೇಶದಲ್ಲಿ ಸಮುದ್ರಮಟ್ಟದಿಂದ 1400ಮೀ ಎತ್ತರದಲ್ಲಿ ಸಂಗ್ರಹಿಸಲಾಗಿದೆ. ಭಾರತದಲ್ಲಿ ಒಟ್ಟು ಏಳು ಪ್ಯಾರಸಿಸ್ಸಿಯ ಇರುವೆಗಳಿದ್ದು ಅದರಲ್ಲಿ ಆರು ಇರುವೆಗಳು ಸ್ಥಳೀಯ (Endemic ) ಎಂದು ಗುರುತಿಸಲಾಗಿದೆ.

ಸಿಸ್ಸಿಯ ಜೀನಸ್ ಇರುವೆಗಳು ಕೂಡ ಅಪರೂಪದ ಇರುವೆಗಳು ಎಲೆಯ ತರಗು (leaf litter ) ಕೊಳೆತಮರ ಹಾಗೂ ಮಣ್ಣಿನಲ್ಲಿ ವಾಸಿಸುವ ಇರುವೆಗಳಾಗಿವೆ ಈ ಮೊದಲು ಚೀನಾ, ಜಪಾನ್ ಶ್ರೀಲಂಕ ಹಾಗೂ ಥೈಲಾಂಡ್ ದೇಶಗಳಲ್ಲಿ ದಾಖಲೆಗೊಂಡಿದ್ದು ಭಾರತದಲ್ಲಿ ಸೂಕ್ತವಾದ ದಾಖಲೆಯ ಕೊರತೆಯಿಂದ ಪ್ರಸ್ತುತ ದಾಖಲೆಯನ್ನು ಭಾರತಕ್ಕೆ ಮೊದಲ ದಾಖಲೆಯಾಗಿ ಪರಿಗಣಿಸಲಾಗಿದೆ.

“ಸಿಸ್ಸಿಯ ಇಂಡಿಕ” ಇರುವೆಯು ಕೆಂಪುಮಿಶ್ರಿತ ಕಂದು ಬಣ್ಣಹೊಂದಿದ್ದು ಮೇಲ್ಮೈ ಭಾಗವು ಚಿಕ್ಕ ಚಿಕ್ಕ ಪಂಕ್ಚರ್ಸ್ ಇದ್ದು ಕುರುಡು ಇರುವೆಯಾಗಿದೆ ಈ ಇರುವೆಯನ್ನು ಅರಣ್ಯದ ಒಳಭಾಗದಲ್ಲಿ ಸಮುದ್ರ ಮಟ್ಟದಿಂದ 1600 ಮೀ ಎತ್ತರದಲ್ಲಿ ಸಂಗ್ರಹಿಸಲಾಗಿದೆ.

ಬಹಸಂಖ್ಯಾ ಇರುವೆಗಳು ಕ್ರಿಪ್ಟೋ ಬಯೋಟಿಕ್ ಜೀವನ ಶೈಲಿಯನ್ನು ಒಳಗೂಡಿಸಿಕೊಂಡು ದಟ್ಟಅರಣ್ಯದಲ್ಲಿ ಉದುರಿರುವ ಎಲೆಗಳಲ್ಲಿ ಮಣ್ಣಿನ ಅಡಿಯಲ್ಲಿ ಮರೆಯಾಗಿ ಜೀವಿಸುತ್ತಿರುತ್ತವೆ. ಇದರಲ್ಲಿ ಬಹಳಷ್ಟು ವಿಜ್ಞಾನಕ್ಕೆ ಅಪರಿಚತವಾಗಿರುವ ಇರುವೆಗಳಿದ್ದಾವೆ ಹೊಸ ದಾಖಲೆಯಾದ ಪ್ಯಾರಸಿಸ್ಸಿಯ ಹಾಗೂ ಸಿಸ್ಸಿಯ ಇರುವೆಗಳು ಕೂಡ ಬಹುಅಪರೂಪದ ಸುಲಭವಾಗಿ ದೊರಕದ ಇರುವೆಗಳಾಗಿದೆ ಆದ್ದರಿಂದ ಈ ರೀತಿಯ ಇರುವೆಗಳನ್ನು ಸಂಗ್ರಹಿಸಲು Non-conventional ವಿಧಾನವಾದ Winkler extraction ಅನ್ನು ಬಳಸಲಾಗುತ್ತದೆ. ಮುಂಬರುವ ಸಂಶೋಧನೆಯಲ್ಲಿ ಈಸ್ಟ್ರನ್ ಹಿಮಾಲಯದ ಪ್ರದೇಶಗಳನ್ನು ವ್ಯಾಪಕವಾಗಿ ಅನ್ವೇಷಿಸಿದರೆ ಅದರಲ್ಲೂ Non-conventional ವಿಧಾನಗಳ ಕೀಟ ಸಂಗ್ರಹಣ ಬಳಕೆಯಿಂದ ಇನ್ನು ಅಪರೂಪವಾದ ವಿಭಿನ್ನವಾದ ಹೊಸ ಹೊಸ ಇರುವೆಗಳು ದೊರೆಯಬಹುದು ಎಂದು ತಿಳಿಸಿದೆ.

ಈ ಸಂಶೋಧನೆಯನ್ನು Department of biotechnology (DBT Government of India) and National Mission on Himalayan Studies (MOEF & CC, Government of India) and the John D and Catherine T.Mac Arthur ಫೌಂಡೆಶನ್ ಬೆಂಬಲಿಸಿದ್ದಾರೆ.

* ಚಿದಾನಂದ್, ಯುವ ಸಂಚಲನ


ಇದನ್ನೂ ಓದಿ: ಬಹುಜನ ಭಾರತ; ಫಿರೋಜ್ ಗಾಂಧೀ ಎಂಬ ನೆಹರೂ ಅಳಿಯ ಹೀಗಿದ್ದರು…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...