Homeಮುಖಪುಟಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

- Advertisement -
- Advertisement -

ಕಳೆದ ವಾರ ಉನ್ನತ ಶಿಕ್ಷಣ ತಜ್ಞರಾದ  ಪ್ರೊ. ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅಶೋಕ ವಿವಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ, ವಿವಿಯ ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿದೆ ಎಂದು ಸೋನಿಪತ್‌ನ ಅಶೋಕ ವಿಶ್ವವಿದ್ಯಾಲಯವು ಒಪ್ಪಿಕೊಂಡಿದೆ.

ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಸುಬ್ರಮಣಿಯನ್ ಮತ್ತು ಖ್ಯಾತ ರಾಜಕೀಯ ಶಾಸ್ತ್ರಜ್ಞ ಹಾಗೂ ವಿಶ್ಲೇಷಕ  ಪ್ರತಾಪ್ ಭಾನು ಮೆಹ್ತಾ ಇಬ್ಬರು ಶೈಕ್ಷಣಿಕ ಅಭಿವ್ಯಕ್ತಿ ಮತ್ತು ಸ್ವಾತಂತ್ರ್ಯಕ್ಕೆ ಅಲ್ಲಿ ಈಗ ಅವಕಾಶ ದೊರಕುತ್ತಿಲ್ಲ ಎಂದು ಉಲ್ಲೇಖಿಸಿ ಅಶೋಕ ವಿವಿಗೆ ರಾಜೀನಾಮೆ ನೀಡಿದ್ದರು.

ತಜ್ಞರ ರಾಜೀನಾಮೆಗೆ ಕಾರಣವಾದ ಅಶೋಕ ವಿವಿಯ ನಡವಳಿಕೆಯನ್ನು, ಆರ್‌ಬಿಐ ಮಾಜಿ ಗವರ್ನರ್ ರಾಜನ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರು ಟೀಕಿಸಿದ್ದರು.

ಖಾಸಗಿ ಅನುದಾನಿತ ಸಂಸ್ಥೆಯಾದ ಅಶೋಕ ವಿಶ್ವ ವಿದ್ಯಾಲಯವು “ಈ ಲೋಪಗಳನ್ನು” ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಸರಿಪಡಿಸಲು ಕೆಲಸ ಮಾಡುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಸ್ವತಂತ್ರ ಮಾಧ್ಯಮಗಳನ್ನು ನಿಯಂತ್ರಿಸುವುದು ಹೇಗೆ?: ಪತ್ರಕರ್ತರೊಂದಿಗಿನ ಕೇಂದ್ರ ಸರ್ಕಾರದ ಗುಪ್ತ ಸಭೆಗಳ ವರದಿ ಸೋರಿಕೆ!

“ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿವೆ ಎಂದು ನಾವು ಒಪ್ಪಿಕೊಳ್ಳುತ್ತೇವೆ, ಅದು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಸರಿಪಡಿಸಲು ನಾವು ಕೆಲಸ ಮಾಡುತ್ತೇವೆ. ಇದು ಅಶೋಕ ವಿಶ್ವವಿದ್ಯಾಲಯದ ಆದರ್ಶಗಳ ಕೇಂದ್ರಬಿಂದುವಾಗಿರುವ ಶೈಕ್ಷಣಿಕ ಸ್ವಾಯತ್ತತೆ ಮತ್ತು ಸ್ವಾತಂತ್ರ್ಯದ ಬಗೆಗಿನ ನಮ್ಮ ಬದ್ಧತೆಯನ್ನು ದೃಢ ಪಡಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿವಿಯ ಜಂಟಿ ಹೇಳಿಕೆಗೆ ಕುಲಪತಿ ರುದ್ರಂಗ್‌ಶು ಮುಖರ್ಜಿ, ಉಪಕುಲಪತಿ ಮಲಬಿಕಾ ಸರ್ಕಾರ್, ಮೆಹ್ತಾ, ಸುಬ್ರಮಣಿಯನ್ ಮತ್ತು ವಿಶ್ವವಿದ್ಯಾಲಯದ ಟ್ರಸ್ಟಿಗಳ ಮಂಡಳಿಯ ಅಧ್ಯಕ್ಷ ಆಶಿಶ್ ಧವನ್ ಸಹಿ ಹಾಕಿದ್ದಾರೆ.

ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಸರ್ಕಾರದ ವಿಮರ್ಶಕ ಮೆಹ್ತಾ ಅವರು ಜುಲೈ 2019 ರಲ್ಲಿ ಅಶೋಕ ವಿಶ್ವವಿದ್ಯಾಲಯದ ಉಪಕುಲಪತಿ ಸ್ಥಾನದಿಂದ ಹೊರಬಂದರೂ ಪ್ರಾಧ್ಯಾಪಕರಾಗಿ ಉಳಿದಿದ್ದರು. ಆದರೆ, ಮಂಗಳವಾರ, ಅವರು ಹಠಾತ್ತನೆ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

“ವಿಶ್ವವಿದ್ಯಾಲಯದೊಂದಿಗಿನ ಒಡನಾಟವನ್ನು ರಾಜಕೀಯ ಹೊಣೆಗಾರಿಕೆ ಎಂದು ಪರಿಗಣಿಸಬಹುದು” ಎಂದು ಹೇಳಿದ್ದರು. ಎರಡು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ಮಾಜಿ ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಮಣಿಯನ್ ಅವರು ಮೆಹ್ತಾ ಅವರ ನಿರ್ಗಮನದ ಬಗ್ಗೆ ಬೇಸರ ವ್ಯಕ್ತಪಡಿಸಿ ಅಧ್ಯಾಪಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಾನವಿಕ ಶಾಸ್ತ್ರಗಳಿಗೆ ಮೀಸಲಾಗಿರುವ ಭಾರತದ ಮೊದಲ ಖಾಸಗಿ-ಧನಸಹಾಯ ಆಶ್ರಯಿತ ಉನ್ನತ ಶಿಕ್ಷಣ ಸಂಸ್ಥೆಯೆಂದು ಹೇಳಲಾದ ಅಶೋಕ ವಿವಿಗೆ ಇಬ್ಬರು ರಾಜೀನಾಮೆ ನೀಡಿದ್ದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ  ಪ್ರತಿಭಟನೆ ಹುಟ್ಟುಹಾಕಿತ್ತು.

ಮೆಹ್ತಾ ಮತ್ತು ಸುಬ್ರಮಣಿಯನ್ ರಾಜೀನಾಮೆಗೆ ಕಾರಣವಾದ ವಿವಿ ವಿರುದ್ಧ ದನಿ ಎತ್ತಿದವರಲ್ಲಿ, ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮತ್ತು ಹಾರ್ವರ್ಡ್, ಆಕ್ಸ್‌ಫರ್ಡ್ ಮತ್ತು ಬ್ರೌನ್ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರು ಮತ್ತು ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಧ್ಯಾಪಕರು ಸೇರಿದ್ದಾರೆ.


ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೇ ಮುಂದುವರೆದಿದೆ, ಭಾರತದಲ್ಲಿ ಸತ್ಯ ಹೇಳುವವರಿಗೆ ಜಾಗವೇ ಇಲ್ಲದಂತೆ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...