Homeಮುಖಪುಟಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

ಪಿ.ಬಿ ಮೆಹ್ತಾ, ಅರವಿಂದ್ ಸುಬ್ರಮಣಿಯನ್ ರಾಜೀನಾಮೆ: ಲೋಪಗಳನ್ನು ಒಪ್ಪಿಕೊಂಡ ಅಶೋಕ ವಿವಿ!

- Advertisement -
- Advertisement -

ಕಳೆದ ವಾರ ಉನ್ನತ ಶಿಕ್ಷಣ ತಜ್ಞರಾದ  ಪ್ರೊ. ಪ್ರತಾಪ್ ಭಾನು ಮೆಹ್ತಾ ಮತ್ತು ಅರವಿಂದ್ ಸುಬ್ರಮಣಿಯನ್ ಅಶೋಕ ವಿವಿಗೆ ರಾಜೀನಾಮೆ ನೀಡಿದ ಬೆನ್ನಲ್ಲೇ, ವಿವಿಯ ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿದೆ ಎಂದು ಸೋನಿಪತ್‌ನ ಅಶೋಕ ವಿಶ್ವವಿದ್ಯಾಲಯವು ಒಪ್ಪಿಕೊಂಡಿದೆ.

ಖ್ಯಾತ ಅರ್ಥಶಾಸ್ತ್ರಜ್ಞ ಅರವಿಂದ್ ಸುಬ್ರಮಣಿಯನ್ ಮತ್ತು ಖ್ಯಾತ ರಾಜಕೀಯ ಶಾಸ್ತ್ರಜ್ಞ ಹಾಗೂ ವಿಶ್ಲೇಷಕ  ಪ್ರತಾಪ್ ಭಾನು ಮೆಹ್ತಾ ಇಬ್ಬರು ಶೈಕ್ಷಣಿಕ ಅಭಿವ್ಯಕ್ತಿ ಮತ್ತು ಸ್ವಾತಂತ್ರ್ಯಕ್ಕೆ ಅಲ್ಲಿ ಈಗ ಅವಕಾಶ ದೊರಕುತ್ತಿಲ್ಲ ಎಂದು ಉಲ್ಲೇಖಿಸಿ ಅಶೋಕ ವಿವಿಗೆ ರಾಜೀನಾಮೆ ನೀಡಿದ್ದರು.

ತಜ್ಞರ ರಾಜೀನಾಮೆಗೆ ಕಾರಣವಾದ ಅಶೋಕ ವಿವಿಯ ನಡವಳಿಕೆಯನ್ನು, ಆರ್‌ಬಿಐ ಮಾಜಿ ಗವರ್ನರ್ ರಾಜನ್ ಸೇರಿದಂತೆ ಹಲವಾರು ಶಿಕ್ಷಣ ತಜ್ಞರು ಟೀಕಿಸಿದ್ದರು.

ಖಾಸಗಿ ಅನುದಾನಿತ ಸಂಸ್ಥೆಯಾದ ಅಶೋಕ ವಿಶ್ವ ವಿದ್ಯಾಲಯವು “ಈ ಲೋಪಗಳನ್ನು” ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಸರಿಪಡಿಸಲು ಕೆಲಸ ಮಾಡುತ್ತದೆ” ಎಂದು ಹೇಳಿದೆ.

ಇದನ್ನೂ ಓದಿ: ಸ್ವತಂತ್ರ ಮಾಧ್ಯಮಗಳನ್ನು ನಿಯಂತ್ರಿಸುವುದು ಹೇಗೆ?: ಪತ್ರಕರ್ತರೊಂದಿಗಿನ ಕೇಂದ್ರ ಸರ್ಕಾರದ ಗುಪ್ತ ಸಭೆಗಳ ವರದಿ ಸೋರಿಕೆ!

“ಸಾಂಸ್ಥಿಕ ಪ್ರಕ್ರಿಯೆಗಳಲ್ಲಿ ಕೆಲವು ನ್ಯೂನತೆಗಳು ಕಂಡುಬಂದಿವೆ ಎಂದು ನಾವು ಒಪ್ಪಿಕೊಳ್ಳುತ್ತೇವೆ, ಅದು ಎಲ್ಲಾ ಮಧ್ಯಸ್ಥಗಾರರೊಂದಿಗೆ ಸಮಾಲೋಚಿಸಿ ಸರಿಪಡಿಸಲು ನಾವು ಕೆಲಸ ಮಾಡುತ್ತೇವೆ. ಇದು ಅಶೋಕ ವಿಶ್ವವಿದ್ಯಾಲಯದ ಆದರ್ಶಗಳ ಕೇಂದ್ರಬಿಂದುವಾಗಿರುವ ಶೈಕ್ಷಣಿಕ ಸ್ವಾಯತ್ತತೆ ಮತ್ತು ಸ್ವಾತಂತ್ರ್ಯದ ಬಗೆಗಿನ ನಮ್ಮ ಬದ್ಧತೆಯನ್ನು ದೃಢ ಪಡಿಸುತ್ತದೆ” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ವಿವಿಯ ಜಂಟಿ ಹೇಳಿಕೆಗೆ ಕುಲಪತಿ ರುದ್ರಂಗ್‌ಶು ಮುಖರ್ಜಿ, ಉಪಕುಲಪತಿ ಮಲಬಿಕಾ ಸರ್ಕಾರ್, ಮೆಹ್ತಾ, ಸುಬ್ರಮಣಿಯನ್ ಮತ್ತು ವಿಶ್ವವಿದ್ಯಾಲಯದ ಟ್ರಸ್ಟಿಗಳ ಮಂಡಳಿಯ ಅಧ್ಯಕ್ಷ ಆಶಿಶ್ ಧವನ್ ಸಹಿ ಹಾಕಿದ್ದಾರೆ.

ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಸರ್ಕಾರದ ವಿಮರ್ಶಕ ಮೆಹ್ತಾ ಅವರು ಜುಲೈ 2019 ರಲ್ಲಿ ಅಶೋಕ ವಿಶ್ವವಿದ್ಯಾಲಯದ ಉಪಕುಲಪತಿ ಸ್ಥಾನದಿಂದ ಹೊರಬಂದರೂ ಪ್ರಾಧ್ಯಾಪಕರಾಗಿ ಉಳಿದಿದ್ದರು. ಆದರೆ, ಮಂಗಳವಾರ, ಅವರು ಹಠಾತ್ತನೆ ಆ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

“ವಿಶ್ವವಿದ್ಯಾಲಯದೊಂದಿಗಿನ ಒಡನಾಟವನ್ನು ರಾಜಕೀಯ ಹೊಣೆಗಾರಿಕೆ ಎಂದು ಪರಿಗಣಿಸಬಹುದು” ಎಂದು ಹೇಳಿದ್ದರು. ಎರಡು ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿಯವರ ಮಾಜಿ ಮುಖ್ಯ ಆರ್ಥಿಕ ಸಲಹೆಗಾರರಾದ ಅರವಿಂದ್ ಸುಬ್ರಮಣಿಯನ್ ಅವರು ಮೆಹ್ತಾ ಅವರ ನಿರ್ಗಮನದ ಬಗ್ಗೆ ಬೇಸರ ವ್ಯಕ್ತಪಡಿಸಿ ಅಧ್ಯಾಪಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮಾನವಿಕ ಶಾಸ್ತ್ರಗಳಿಗೆ ಮೀಸಲಾಗಿರುವ ಭಾರತದ ಮೊದಲ ಖಾಸಗಿ-ಧನಸಹಾಯ ಆಶ್ರಯಿತ ಉನ್ನತ ಶಿಕ್ಷಣ ಸಂಸ್ಥೆಯೆಂದು ಹೇಳಲಾದ ಅಶೋಕ ವಿವಿಗೆ ಇಬ್ಬರು ರಾಜೀನಾಮೆ ನೀಡಿದ್ದಕ್ಕೆ ಅಂತರರಾಷ್ಟ್ರೀಯ ಮಟ್ಟದಲ್ಲಿ  ಪ್ರತಿಭಟನೆ ಹುಟ್ಟುಹಾಕಿತ್ತು.

ಮೆಹ್ತಾ ಮತ್ತು ಸುಬ್ರಮಣಿಯನ್ ರಾಜೀನಾಮೆಗೆ ಕಾರಣವಾದ ವಿವಿ ವಿರುದ್ಧ ದನಿ ಎತ್ತಿದವರಲ್ಲಿ, ಮಾಜಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಮತ್ತು ಹಾರ್ವರ್ಡ್, ಆಕ್ಸ್‌ಫರ್ಡ್ ಮತ್ತು ಬ್ರೌನ್ ವಿಶ್ವವಿದ್ಯಾಲಯಗಳ ಪ್ರಾಧ್ಯಾಪಕರು ಮತ್ತು ಶಿಕ್ಷಣ ತಜ್ಞರು ಮತ್ತು ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಧ್ಯಾಪಕರು ಸೇರಿದ್ದಾರೆ.


ಇದನ್ನೂ ಓದಿ: ಅಂಬಾನಿಗಾಗಿ NIA ತನಿಖೆ – ಪುಲ್ವಾಮಾ ದಾಳಿ ಹೇಗೆಂಬುದು ಪತ್ತೆಯಾಗಲಿಲ್ಲ?: ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತ ಹೀಗೇ ಮುಂದುವರೆದಿದೆ, ಭಾರತದಲ್ಲಿ ಸತ್ಯ ಹೇಳುವವರಿಗೆ ಜಾಗವೇ ಇಲ್ಲದಂತೆ ಆಗುತ್ತದೆ.

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...