Homeಮುಖಪುಟಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

ಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

- Advertisement -
- Advertisement -

ಕಳೆದ ತಿಂಗಳು ನಿರ್ದೇಶಕ, ನಿರ್ಮಾಪಕ ಪ್ರಕಾಶ್‌ ಝಾ ಅವರ ‘ಆಶ್ರಮ್‌-3′ ವೆಬ್‌ಸೀರೀಸ್‌ ಚಿತ್ರೀಕರಣದ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಕೊಲೆ ಅಪರಾಧಿಯೂ ಆಗಿದ್ದು, ಪೊಲೀಸರು ಬಂಧಿಸಿದ ಒಂದೇ ದಿನದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಸುಶೀಲ್‌‌ ಸುದೇಲೆ ಬಲಪಂಥೀಯ ಸಂಘಟನೆಯ ಭೋಪಾಲ್‌ ಘಟಕದ ಮುಖ್ಯಸ್ಥನಾಗಿದ್ದು, ಏಳು ಜನ ಆರೋಪಿಗಳಲ್ಲಿ ಒಬ್ಬಾತನಾಗಿದ್ದಾನೆ. ಈತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಪ್ರಕಾಶ್‌ ಝಾ ಅವರ ಆಶ್ರಮ್‌ ಸೆಟ್‌ ಮೇಲೆ ದಾಳಿ ಮಾಡಿದ ಆರೋಪಿಗಳೊಂದಿಗೆ ಸುಶೀಲ್‌ ಸುದೇಲೆಯನ್ನು ಪೊಲೀಸರು ಬಂಧಿಸಿದ್ದರು. ಒಂದೇ ದಿನದಲ್ಲಿ ಸುದೇಲೆಗೆ ಜಮೀನು ದೊರೆತಿದೆ.

ದಾಳಿ ಕೃತ್ಯದ ಪ್ರಮುಖ ಆರೋಪಿ ಸುದೇಲೆ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿತ್ತು.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ ಎಂದು ದಿ ವೈರ್‌ ವರದಿ ಮಾಡಿತ್ತು.

ಇದನ್ನೂ ಓದಿರಿ: ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದರು. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ ಎಂದು ‘ದಿ ವೈರ್‌’ ಹೇಳಿತ್ತು.

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.


ಇದನ್ನೂ ಓದಿರಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....