Homeಮುಖಪುಟಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

ಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

- Advertisement -
- Advertisement -

ಕಳೆದ ತಿಂಗಳು ನಿರ್ದೇಶಕ, ನಿರ್ಮಾಪಕ ಪ್ರಕಾಶ್‌ ಝಾ ಅವರ ‘ಆಶ್ರಮ್‌-3′ ವೆಬ್‌ಸೀರೀಸ್‌ ಚಿತ್ರೀಕರಣದ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಕೊಲೆ ಅಪರಾಧಿಯೂ ಆಗಿದ್ದು, ಪೊಲೀಸರು ಬಂಧಿಸಿದ ಒಂದೇ ದಿನದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಸುಶೀಲ್‌‌ ಸುದೇಲೆ ಬಲಪಂಥೀಯ ಸಂಘಟನೆಯ ಭೋಪಾಲ್‌ ಘಟಕದ ಮುಖ್ಯಸ್ಥನಾಗಿದ್ದು, ಏಳು ಜನ ಆರೋಪಿಗಳಲ್ಲಿ ಒಬ್ಬಾತನಾಗಿದ್ದಾನೆ. ಈತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಪ್ರಕಾಶ್‌ ಝಾ ಅವರ ಆಶ್ರಮ್‌ ಸೆಟ್‌ ಮೇಲೆ ದಾಳಿ ಮಾಡಿದ ಆರೋಪಿಗಳೊಂದಿಗೆ ಸುಶೀಲ್‌ ಸುದೇಲೆಯನ್ನು ಪೊಲೀಸರು ಬಂಧಿಸಿದ್ದರು. ಒಂದೇ ದಿನದಲ್ಲಿ ಸುದೇಲೆಗೆ ಜಮೀನು ದೊರೆತಿದೆ.

ದಾಳಿ ಕೃತ್ಯದ ಪ್ರಮುಖ ಆರೋಪಿ ಸುದೇಲೆ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿತ್ತು.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ ಎಂದು ದಿ ವೈರ್‌ ವರದಿ ಮಾಡಿತ್ತು.

ಇದನ್ನೂ ಓದಿರಿ: ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದರು. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ ಎಂದು ‘ದಿ ವೈರ್‌’ ಹೇಳಿತ್ತು.

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.


ಇದನ್ನೂ ಓದಿರಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...