Homeಮುಖಪುಟಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

ಆಶ್ರಮ್‌ ಸೆಟ್‌ ಮೇಲೆ ದಾಳಿ ಪ್ರಕರಣ: ಅರೆಸ್ಟ್‌ ಆದ ಒಂದೇ ದಿನದಲ್ಲಿ ಕೊಲೆ ಅಪರಾಧಿಗೆ ಜಾಮೀನು!

- Advertisement -
- Advertisement -

ಕಳೆದ ತಿಂಗಳು ನಿರ್ದೇಶಕ, ನಿರ್ಮಾಪಕ ಪ್ರಕಾಶ್‌ ಝಾ ಅವರ ‘ಆಶ್ರಮ್‌-3′ ವೆಬ್‌ಸೀರೀಸ್‌ ಚಿತ್ರೀಕರಣದ ವೇಳೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಬಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದರು. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಪ್ರಮುಖ ಆರೋಪಿ ಕೊಲೆ ಅಪರಾಧಿಯೂ ಆಗಿದ್ದು, ಪೊಲೀಸರು ಬಂಧಿಸಿದ ಒಂದೇ ದಿನದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

ಸುಶೀಲ್‌‌ ಸುದೇಲೆ ಬಲಪಂಥೀಯ ಸಂಘಟನೆಯ ಭೋಪಾಲ್‌ ಘಟಕದ ಮುಖ್ಯಸ್ಥನಾಗಿದ್ದು, ಏಳು ಜನ ಆರೋಪಿಗಳಲ್ಲಿ ಒಬ್ಬಾತನಾಗಿದ್ದಾನೆ. ಈತನಿಗೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದ್ದು, ಜಾಮೀನಿನ ಮೇಲೆ ಹೊರಗೆ ಬಂದಿದ್ದಾನೆ. ಪ್ರಕಾಶ್‌ ಝಾ ಅವರ ಆಶ್ರಮ್‌ ಸೆಟ್‌ ಮೇಲೆ ದಾಳಿ ಮಾಡಿದ ಆರೋಪಿಗಳೊಂದಿಗೆ ಸುಶೀಲ್‌ ಸುದೇಲೆಯನ್ನು ಪೊಲೀಸರು ಬಂಧಿಸಿದ್ದರು. ಒಂದೇ ದಿನದಲ್ಲಿ ಸುದೇಲೆಗೆ ಜಮೀನು ದೊರೆತಿದೆ.

ದಾಳಿ ಕೃತ್ಯದ ಪ್ರಮುಖ ಆರೋಪಿ ಸುದೇಲೆ ಕೊಲೆ ಪ್ರಕರಣದಲ್ಲಿ ಈಗಾಗಲೇ ಭಾಗಿಯಾಗಿದ್ದು, ಬಿಜೆಪಿ ಮತ್ತು ಆರ್‌ಎಸ್‌ಎಸ್ ಉನ್ನತ ನಾಯಕರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾನೆ. ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೂ ಸಂಪರ್ಕದಲ್ಲಿದ್ದಾನೆ ಎಂಬ ಸಂಗತಿ ಬಹಿರಂಗವಾಗಿತ್ತು.

ಬಲಪಂಥೀಯ ಸಂಘಟನೆಯಾದ ಬಜರಂಗದಳ ಕೇಂದ್ರ ಘಟಕದ ಸಂಚಾಲಕರಾಗಿರುವ ಸುಶೀಲ್ ಸುದೇಲೆ, ಮಧ್ಯಪ್ರದೇಶ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮತ್ತು ಮಾಜಿ ಭೋಪಾಲ್ ಮೇಯರ್ ಅಲೋಕ್ ಶರ್ಮಾ ಅವರ ಸಂಬಂಧಿಯೂ ಹೌದು. 2011ರ ಕೊಲೆ ಪ್ರಕರಣದಲ್ಲಿ ಸುದೇಲೆ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದು, ಸೆಪ್ಟೆಂಬರ್ 2015ರಿಂದ ಜಾಮೀನಿನ ಮೇಲೆ ಹೊರಗಿದ್ದಾನೆ ಎಂದು ದಿ ವೈರ್‌ ವರದಿ ಮಾಡಿತ್ತು.

ಇದನ್ನೂ ಓದಿರಿ: ಗುರ್‌ಗಾಂವ್‌ನಲ್ಲಿ ಮತ್ತೆ ನಮಾಜ್‌ಗೆ ಅಡ್ಡಿ: ನಮಾಜ್‌ ಸ್ಥಳವನ್ನು ವಾಲಿಬಾಲ್ ಕೋರ್ಟ್ ಮಾಡುವುದಾಗಿ ಹೇಳಿಕೆ

ವೆಬ್ ಸರಣಿಯ ಸೆಟ್‌ ಮೇಲೆ ದಾಳಿ ನಡೆದ ಒಂದು ದಿನದ ನಂತರ (ಅಕ್ಟೋಬರ್ 25ರಂದು), ಭೋಪಾಲ್ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದರು. ವಿಶ್ವ ಹಿಂದೂ ಪರಿಷತ್‌ ಹಾಗೂ ಆರ್‌‌ಎಸ್‌ಎಸ್‌ನ ಯುವ ಘಟಕವಾಗಿ ಕಾರ್ಯ ನಿರ್ವಹಿಸುತ್ತಿರುವ ಬಜರಂಗದಳದ ಹಿರಿಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 147, 148, 149, 323, 336 ಮತ್ತು 427ರ ಅಡಿಯಲ್ಲಿ ಪೊಲೀಸರು ಸುದೇಲೆ, ಜೀವನ್ ಶರ್ಮಾ, ಅಭಿಜಿತ್, ದೀಲಿಪ್, ಕರಣ್, ಶರ್ವಾನ್ ಬೋಥಮ್ ಮತ್ತು ಸುನೀಲ್ ಸೋನಿ ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಈ ಎಲ್ಲಾ ಸೆಕ್ಷನ್‌ಗಳು ಜಮೀನು ಪಡೆಯಲು ಅವಕಾಶ ನೀಡುತ್ತವೆ ಎಂದು ‘ದಿ ವೈರ್‌’ ಹೇಳಿತ್ತು.

ಅಕ್ಟೋಬರ್ 24ರಂದು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಭೋಪಾಲ್ ಪೊಲೀಸರು ನಾಲ್ವರು ಬಜರಂಗದಳ ಕಾರ್ಯಕರ್ತರನ್ನು ಬಂಧಿಸಿ, ಸಿಆರ್‌ಪಿಸಿಯ ಸೆಕ್ಷನ್ 151ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಪರಾಧಿ ಸುಶೀಲ್‌ ಸುದೇಲೆ ಹಿನ್ನೆಲೆ

2011ರ ಫೆಬ್ರವರಿ 5ರಂದು ಭೋಪಾಲ್ ಮೂಲದ ಗುರುಕಿರ್ಪಾ ಟ್ರಾವೆಲ್ಸ್‌ನ ಮಾಲೀಕ ಭಾಗ್‌ಚಂದ್ ಅಲಿಯಾಸ್ ಪಪ್ಪು ಹತ್ಯೆಗೆ ಸಂಚು ರೂಪಿಸಿದ ಆರೋಪದ ಮೇಲೆ ದಾಳಿಯ ಪ್ರಮುಖ ಆರೋಪಿ ಸುದೇಲೆ ಅವರನ್ನು ಭೋಪಾಲ್ ನ್ಯಾಯಾಲಯವು 2014ರಲ್ಲಿ ದೋಷಿ ಎಂದು ತೀರ್ಪು ನೀಡಿದೆ.

ಐಪಿಸಿಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿಯ ಶಿಕ್ಷೆ) ಅಡಿಯಲ್ಲಿ ಅವರನ್ನು ತಪ್ಪಿತಸ್ಥರೆಂದು ಘೋಷಿಸಲಾಯಿತು ಮತ್ತು 1,000 ರೂಪಾಯಿಗಳ ದಂಡದ ಜೊತೆಗೆ 14 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಲಾಯಿತು.

ಇದನ್ನೂ ಓದಿರಿ: ಕೇರಳ: ದಲಿತ ಮಹಿಳೆಗೆ ಮನೆ ಕಟ್ಟುಲು ಸಾಮಾಗ್ರಿಯನ್ನು ಕೊಂಡೊಯ್ಯಲು ಬಿಡದ ಮೇಲ್ಜಾತಿ ಕುಟುಂಬ

“ಸುದೇಲೆ ಭಾಗ್‌ಚಂದ್‌ನಿಂದ ಹಣ ವಸೂಲಿ ಮಾಡುತ್ತಿದ್ದ. ಭಾಗ್‌ಚಂದ್ ಅವರು ಸುದೇಲೆ ವಿರುದ್ಧ ಹನುಮಾನ್‌ಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸುದೇಲೆ ಹಣಕ್ಕಾಗಿ ಬೇಡಿಕೆಯಿಡುತ್ತಿರುವ ವಿಡಿಯೊ ಕ್ಲಿಪ್ಅನ್ನು ಭಾಗ್‌ಚಂದ್‌ ಸಲ್ಲಿಸಿದ್ದರು. ಈ ವಿಡಿಯೋವನ್ನು ಮಾಧ್ಯಮಗಳಿಗೂ ಬಿಡುಗಡೆ ಮಾಡಲಾಗಿದೆ” ಎಂದು ಕೋರ್ಟ್ ಹೇಳಿದೆ.

ಭಾಗ್‌ಚಂದ್ ದೂರು ನೀಡಿದ ಬಳಿಕ ಕುಪಿತರಾದ ಸುದೇಲೆಯ ಐವರು ಸಹಚರರು 2011ರ ಫೆಬ್ರವರಿ 5ರಂದು ಭಾಗ್‌ಚಂದ್ ಮೇಲೆ ದೊಣ್ಣೆ ಮತ್ತು ಕತ್ತಿಗಳಿಂದ ಹಲ್ಲೆ ನಡೆಸಿ, ದೂರನ್ನು ಹಿಂಪಡೆಯುವಂತೆ ಒತ್ತಾಯಿಸಿದ್ದರು. ಭಾಗ್‌ಚಂದ್‌ ತೀವ್ರ ಗಾಯಾಳುವಾಗಿಯೇ ತಪ್ಪಿಸಿಕೊಂಡು ಬಂದು ಹನುಮಂಗಂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ, ತಲೆಗೆ ಪೆಟ್ಟಾಗಿದ್ದರಿಂದ ನಾಲ್ಕು ದಿನಗಳ ನಂತರ ಮೃತಪಟ್ಟರು.

ಭಾಗ್‌ಚಂದ್‌ನ ಸಾವಿನ ನಂತರ ಪೊಲೀಸರು, ಸುದೇಲೆ, ನೀಲೇಶ್ ಖಟಿಕೆ, ರಾಜ್‌ಕುಮಾರ್ ಚೌರಾಸಿಯಾ, ಅರವಿಂದ್ ನರ್ವಾರಿಯಾ, ವೀರೇಂದ್ರ ಯಾದವ್, ಗೋಪಾಲ್ ಯಾದವ್ ವಿರುದ್ಧ ಸೆಕ್ಷನ್ 294, 147, 148, 148, 506-ಬಿ, 427, 302, 120-ಬಿ ಪ್ರಕರಣ ದಾಖಲಿಸಿದರು.

ನ್ಯಾಯಾಲಯವು ಅವರನ್ನು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಅಮಿತಾಭ್ ಮಿಶ್ರಾ ಅವರ ಏಕಸದಸ್ಯ ಪೀಠವು ಫೆಬ್ರವರಿ 5, 2014ರಂದು ನಡೆದ ಘಟನೆಯ ಸುಮಾರು ಮೂರು ವರ್ಷಗಳ ನಂತರ ಸುದೇಲೆ ಸೇರಿದಂತೆ ಎಲ್ಲಾ ಆರೋಪಿಗಳಿಗೆ 14 ವರ್ಷಗಳ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಿತು. ಆದರೆ ಇಬ್ಬರು ಆರೋಪಿಗಳು (ಸುದೇಲೆ ಮತ್ತು ಬಜರಂಗದಳದ ರಾಜಕುಮಾರ ಚೌರಾಸಿಯಾ) ಸೆಪ್ಟೆಂಬರ್ 28, 2015ರಂದು ಜಾಮೀನು ಪಡೆದರು.

ರಾಜಕುಮಾರ್ ಅವರು ಪ್ರಸ್ತುತ ಭೋಪಾಲ್ ಮುನ್ಸಿಪಲ್ ಕಾರ್ಪೊರೇಶನ್‌ಗೆ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದರೆ, ಬಜರಂಗದಳದ ಕಾರ್ಯಕರ್ತನಾಗಿದ್ದ ಸುದೇಲೆಯನ್ನು ಬಜರಂಗದಳ ಕೇಂದ್ರ ಘಟಕದ ಸಂಚಾಲಕ ಸ್ಥಾನದಲ್ಲಿ ಕೂರಿಸಲಾಗಿದೆ.


ಇದನ್ನೂ ಓದಿರಿ: ಕಾಸ್‌ಗಂಜ್ ಮುಸ್ಲಿಂ ಯುವಕನ ಲಾಕಪ್ ಡೆತ್: ಸರ್ಕಾರದಿಂದ ವರದಿ ಕೇಳಿದ ಅಲ್ಪಸಂಖ್ಯಾತರ ಆಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...