Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...