Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...