Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...