Homeಮುಖಪುಟಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

ಮೇಕೆದಾಟು ಪಾದಯಾತ್ರೆ ವಿರುದ್ಧದ ಪಿತೂರಿಯಾಗಿ ಅಶ್ವತ್ಥ್ ನಾರಾಯಣ್‌ ಹೈಡ್ರಾಮಾ: ಕರ್ನಾಟಕ ರಣಧೀರ ಪಡೆ

- Advertisement -
- Advertisement -

“ಮೇಕೆದಾಟು ಪಾದಯಾತ್ರೆಯ ವಿರುದ್ಧದ್ಧ ಪಿತೂರಿಯಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥ್‌ ನಾರಾಯಣ ಅವರು ಹೈಡ್ರಾಮಾ ಮಾಡಿದ್ದಾರೆ” ಎಂದು ಕರ್ನಾಟಕ ರಣಧೀರ ಪಡೆ ರಾಜ್ಯಾಧ್ಯಕ್ಷರಾದ ಬೈರಪ್ಪ ಹರೀಶ್ ಕುಮಾರ್ ಆರೋಪಿಸಿದ್ದಾರೆ.

ಡಿ.ಕೆ. ಸಹೋದರರ ಮೇಲೆ ಭಿನ್ನಾಭಿಪ್ರಾಯಗಳಿವೆ ಎಂದೂ ಉಲ್ಲೇಖಿಸಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದು, ಮೇಕೆದಾಟು ಯೋಜನೆಯ ಯಶಸ್ವಿಗೆ ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಟಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಡಿ.ಕೆ.ಶಿವಕುಮಾರ್, ಮೇಕೆದಾಟು ಯೋಜನೆಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದರು. ಆ ಬಳಿಕ ಬಂದ ಸರ್ಕಾರಗಳು ಮೇಕೆದಾಟು ವಿಚಾರದಲ್ಲಿ ಆಮೆವೇಗವನ್ನು ಅನುಸರಿಸಿದ್ದರು. ಬಿಜೆಪಿ ಸರ್ಕಾರವಂತೂ ಕೇಂದ್ರ ಸರ್ಕಾರ ಮಾತ್ರವಲ್ಲದೇ ತಮಿಳುನಾಡು ಸರ್ಕಾರಕ್ಕೇ ಗೋಣು ಹಾಕುವ ಕೆಲಸ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.

ಈಗ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಪಾದಯಾತ್ರೆ ಹೊರಟಿದ್ದಾರೆ. ಇದು ಡಿ.ಕೆ.ಶಿವಕುಮಾರ್ ರಾಜಕೀಯಕ್ಕಾಗಿ ಮಾಡುತ್ತಿದ್ದಾರೆ ಎನ್ನುವವರು ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ನಾವೂ ಕೆಲಸ ಮಾಡುತ್ತೇವೆ ಎಂದು ಘೋಷಿಸಿಬಿಡಲಿ. ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿಯೂ ಮೇಕೆದಾಟು ಯೋಜನೆಯ ಅನುಷ್ಟಾನದ ಪರ ಇದೆ ಎಂದು ಘೋಷಿಸಿಬಿಟ್ಟರೆ ಡಿ.ಕೆ.ಶಿವಕುಮಾರ್ ಪಾದಯಾತ್ರೆಯ ರಾಜಕಾರಣ ಮಾಡುವಂತೆಯೇ ಇಲ್ಲ. ಇನ್ನೂ ಒಂದು ಹೆಜ್ಜೆ ಮುಂದೆ ಮುಂದೆ ಹೋಗಿ ಡಿ.ಕೆ.ಶಿವಕುಮಾರ್ ಜೊತೆ ಬಿಜೆಪಿ ಸರ್ಕಾರದ ಮಂತ್ರಿಗಳೂ, ಮುಖಂಡರೂ ಹೆಜ್ಜೆ ಹಾಕಲಿ ಎಂದು ಆಶಿಸಿದ್ದಾರೆ.

ಹೇಗೂ ಮೇಕೆದಾಟು ಪಾದಯಾತ್ರೆ ರಾಜಕೀಯ ರಹಿತ ಪಾದಯಾತ್ರೆ ಎಂದು ಡಿಕೆಶಿ ಘೋಷಿಸಿದ್ದಾರೆ. ಸಾಹಿತಿಗಳು, ಚಿತ್ರರಂಗದ ಗಣ್ಯರೂ ಪಾದಯಾತ್ರೆಗೆ ಬೆಂಬಲ ಸೂಚಿಸಿದ್ದಾರೆ. ಹಾಗಿರುವಾಗ ಬಿಜೆಪಿಯೂ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿ. ಆದರೆ ಬಿಜೆಪಿ ಮೇಕೆದಾಟು ಯೋಜನೆಯ ಅನುಷ್ಠಾನದ ಪರ ಡಿ.ಕೆ.ಶಿವಕುಮಾರ್ ಜೊತೆಗೆ ಪಾದಯಾತ್ರೆಯ ಭಾಗ ಆಗುವುದರ ಬದಲು ಯೋಜನೆ ಅನುಷ್ಠಾನ ಆಗಕೂಡದು, ಪಾದಯಾತ್ರೆ ಯಶಸ್ವಿ ಆಗಬಾರದು ಎಂದು ಪ್ರಯತ್ನ ಮಾಡುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿನ ಪಾದಯಾತ್ರೆ ಯಶಸ್ವಿ ಆಗಬಾರದು ಎನ್ನುವ ಕಾರಣಕ್ಕಾಗಿಯೇ ಕೊರೋನಾ, ಒಮಿಕ್ರಾನ್ ನೆಪಗಳನ್ನು ವೈಭವೀಕರಿಸಲಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ಚುನಾವಣೆ, ಜಾತ್ರೆ, ಸಮಾವೇಶ, ಹಬ್ಬಗಳಿಗೆ ಇಲ್ಲದ ಕೊರೋನಾ ಮೇಕೆದಾಟು ಪರವಾಗಿನ ಪಾದಯಾತ್ರೆಗೆ ಅಡ್ಡಿಯಾಗುತ್ತಿದೆ. ಇದೊಂದು ಸರ್ಕಾರಿ ಪಿತೂರಿಯಷ್ಟೆ. ಇದರಲ್ಲಿ ಪೂರ್ಣ ಯಶಸ್ವಿ ಆಗದೇ ಇದ್ದಾಗ ಸರ್ಕಾರಿ ಕಾರ್ಯಕ್ರಮದ ವೇದಿಕೆಯಲ್ಲಿ ಮಂತ್ರಿ ಅಶ್ವತ್ಥನಾರಾಯಣ ಅವರು ಗಂಡು, ಗಂಡಸ್ತನ ಎಂಬ ಲಿಂಗ ಸಮಾನತಾ ವಿರೋಧಿ ಶಬ್ದಗಳನ್ನು ಬಳಸಿ ಡಿ.ಕೆ.ಸುರೇಶ್ ಅವರನ್ನು ನಿಂದಿಸುವ ಪ್ರಯತ್ನ ಮಾಡಿದರು. ಇದು ಡಿ.ಕೆ.ಶಿವಕುಮಾರ್, ಡಿ.ಕೆ.ಸುರೇಶ್ ನೇತೃತ್ವದಲ್ಲಿ ನಡೆಯಲಿರುವ ಪಾದಯಾತ್ರೆಯ ವಿರುದ್ದದ ಅಸಮಾಧಾನವೇ ಹೊರತು ಇನ್ನೇನೂ ಅಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಮೇಕೆದಾಟು ಯೋಜನೆ ಮಾಡಲು ಕರ್ನಾಟಕ ಎಲ್ಲಾ ರೀತಿಯ ಹಕ್ಕು ಹೊಂದಿದೆ. ಅದನ್ನು ಕನ್ನಡಿಗರು ಮಾಡಿಯೇ ತೀರುತ್ತೇವೆ. ಮೇಕೆದಾಟು ಯೋಜನೆಗೆ ಅಡ್ಡಿ ಬರಲು ತಮಿಳುನಾಡಿಗೆ ಯಾವ ಅಧಿಕಾರವೂ ಇಲ್ಲ. ವಿನಾಕರಣ ಕನ್ನಡಿಗರನ್ನು ಕೆರಳಿಸುವ, ಕನ್ನಡಿಗರ ಹಕ್ಕಿಗೆ ಚ್ಯುತಿ ತರುವ ಕೆಲಸ ತಮಿಳುನಾಡು ಮಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರವೂ ಸೊಪ್ಪು ಹಾಕುತ್ತಿದೆ. ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ನಡೆಯುವ ಪಾದಯಾತ್ರೆ ಯಶಸ್ವಿಯಾಗಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ಸಿಎಂ ಬದಲಿಸಬೇಕೆಂದು ಬಿಟ್‌ ಕಾಯಿನ್‌ ವಿಷಯ ನಮಗೆ ತಿಳಿಸಿದ್ದೇ ಅಶ್ವತ್ಥ್‌ ನಾರಾಯಣ್: ಡಿ.ಕೆ.ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...