Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ

ವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ

- Advertisement -
- Advertisement -

ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಆರೈಕೆ ಕೇಂದ್ರಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಹಗರಣದ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ್ ಇದ್ದಾರೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ಆಗಲಿ ಎಂದು ಆಪ್‌ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಮ್ ಆದ್ಮಿ ಪಕ್ಷ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ, “ಸ್ವತಃ ವೈದ್ಯರಾಗಿರುವ, ಅಲ್ಲದೇ ಅನೇಕ ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಉಪಮುಖ್ಯಮಂತ್ರಿ ಸಿ.ಅಶ್ವಥ್ ನಾರಾಯಣ್ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ 2000 ಕೋಟಿ ಭ್ರಷ್ಟಾಚಾರ ನಡೆಯಲು ಹೇಗೆ ಅನುವು ಮಾಡಿಕೊಟ್ಟರು” ಎಂದು  ಪ್ರಶ್ನಿಸಿದ್ದಾರೆ.

ಸ್ವತಃ ವೈದ್ಯರಾಗಿರುವ ಅಶ್ವತ್ಥ ನಾರಾಯಣ ಅವರಿಗೆ ಯಾವ ಯಾವ ಉಪಕರಣ ಎಷ್ಟೆಷ್ಟು ಮೌಲ್ಯಕ್ಕೆ ದೊರೆಯುತ್ತದೆ ಎನ್ನುವ ಪ್ರಾಥಮಿಕ ಜ್ಞಾನ ಇದ್ದೇ ಇರುತ್ತದೆ. ಇವರು ಈ ಹಗರಣವನ್ನು ತಡೆಯಬಹುದಿತ್ತು, ಆದರೆ ಆ ಕೆಲಸ ಮಾಡದೇ ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಲೋಕಾಯುಕ್ತ ಸಂಸ್ಥೆಯನ್ನು ಹಾಳುಗೆಡವಿತು. ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಮರುಸ್ಥಾಪಿಸುತ್ತೇನೆ ಎಂದು ವೀರಾವೇ‍ಷದಿಂದ ಗರ್ಜಿಸಿದ್ದ ಯಡಿಯೂರಪ್ಪ ಈಗ ಮೆತ್ತಗಾಗಿದ್ದಾರೆ. ಭ್ರಷ್ಟಾಚಾರದ ವಿಷಯದಲ್ಲಿ ಈ ಪಕ್ಷಗಳ ನಿಯತ್ತು ಇಷ್ಟೇ ಎಂದು ಕಿಡಿಕಾರಿದ್ದಾರೆ.

ಸುವಿಧಾ ಕ್ಯಾಬಿನ್ ಹಗರಣ

ಪೌರ ಕಾರ್ಮಿಕರಿಗೆ ಸುವಿಧಾ ಕ್ಯಾಬಿನ್ ಸ್ಥಾಪಿಸುವ ಹೆಸರಿನಲ್ಲಿ ಬೇನಾಮಿ ಕಂಪೆನಿಗೆ 16 ಕೋಟಿ ಮೌಲ್ಯದ ಗುತ್ತಿಗೆ ನೀಡಲು ಹೊರಟಿರುವುದರ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ ಅವರೂ ಇದ್ದಾರೆ ಎಂದು ಆಪ್‌ ಮುಖಂಡ ಶರತ್ ಖಾದ್ರಿ ಆರೋಪಿಸಿದ್ದಾರೆ.

ಆಗ್ರ್ಯಾ ಇನ್‌ಫ್ರಾಟೆಕ್ ಎನ್ನುವ ಅಸ್ತಿತ್ವವೇ ಇಲ್ಲದ ಸಂಸ್ಥೆಗೆ ಗುತ್ತಿಗೆ ನೀಡಲಾಗುತ್ತಿದ್ದು, 20 ಅಡಿ ಉದ್ದ, 8.5 ಅಡಿ ಅಗಲ, 8 ಅಡಿ ಎತ್ತರದ ಈ ಕ್ಯಾಬೀನ್‌ನಲ್ಲಿ ಪೌರ ಕಾರ್ಮಿಕರಿಗೆ ಪ್ರತ್ಯೇಕ ಶೌಚಾಲಯ, ಊಟ ಮಾಡಲು ಹಾಗೂ ಬಟ್ಟೆ ಬದಲಾಯಿಸಲು ಸ್ಥಳಾವಕಾಶ ನೀಡುವುದು ಇದರ ಉದ್ದೇಶ. ಆದರೆ, ಮಾರುಕಟ್ಟೆ ದರದಲ್ಲಿ ಈ ಕ್ಯಾಬಿನ್‌ಗಳನ್ನು ತಯಾರಿಸಲು ಸುಮಾರು 80 ಸಾವಿರ ಖರ್ಚಾಗುತ್ತದೆ. ಆದರೆ ಯಾವುದೇ ಅನುಭವವೇ ಇಲ್ಲದ ಹಾಗೂ ಅಸ್ತಿತ್ವವೇ ಇಲ್ಲದ ಸಂಸ್ಥೆಯಾದ ಆಗ್ರ್ಯಾ ಇನ್‌ಫ್ರಾಟೆಕ್ ಸಂಸ್ಥೆ ಒಂದು ಕ್ಯಾಬಿನ್‌ಗೆ 8 ಲಕ್ಷ ಎಂದು ದರ ನಿಗದಿ ಮಾಡಿ ಪೂರೈಸಲು ಮುಂದಾಗಿದೆ. ಇದು ಹಗಲು ದರೋಡೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೇವಲ ಬಾಯಿ ಮಾತಿನಲ್ಲಿ ಪೌರ ಕಾರ್ಮಿಕರ ಬಗ್ಗೆ ಕನಿಕರ ತೋರಿಸಿ ಅವರ ಬೆನ್ನಿಗೆ ಚೂರಿ ಇರಿಯುವ ಕೆಲಸ ನಡೆಯುತ್ತಿದೆ‌. ಈ ಭ್ರಷ್ಟಾಚಾರದಲ್ಲಿ ತೊಡಗಿರುವ ಡಿಸಿಎಂ ಅಶ್ವಥ್ ನಾರಾಯಣ್‌ ಅವರು ರಾಜೀನಾಮೆ ನೀಡಬೇಕೆಂದು ಆಪ್‌ ಆಗ್ರಹಿಸಿದೆ.


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...