Homeಕರ್ನಾಟಕವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ

ವೈದ್ಯಕೀಯ ಉಪಕರಣಗಳ ಖರೀದಿ ಹಗರಣದಲ್ಲಿ ಅಶ್ವತ್ಥ ನಾರಾಯಣ್ ಪಾತ್ರ: ಆಪ್ ಆರೋಪ

- Advertisement -
- Advertisement -

ಬೆಂಗಳೂರು ಅಂತರರಾಷ್ಟ್ರೀಯ ವಸ್ತು ಪ್ರದರ್ಶನ ಮೈದಾನದಲ್ಲಿ ಸ್ಥಾಪಿಸಿರುವ ಬೃಹತ್ ಆರೈಕೆ ಕೇಂದ್ರಕ್ಕೆ ಬೇಕಾದ ಅಗತ್ಯ ವಸ್ತುಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಈ ಹಗರಣದ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ್ ಇದ್ದಾರೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ.

ಈ ಕುರಿತು ಹೈಕೋರ್ಟ್ ಮುಖ್ಯ ನ್ಯಾಯಧೀಶರ ನೇತೃತ್ವದಲ್ಲಿ ಸ್ವತಂತ್ರ ನ್ಯಾಯಾಂಗ ತನಿಖೆ ಆಗಲಿ ಎಂದು ಆಪ್‌ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಆಮ್ ಆದ್ಮಿ ಪಕ್ಷ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ, “ಸ್ವತಃ ವೈದ್ಯರಾಗಿರುವ, ಅಲ್ಲದೇ ಅನೇಕ ವೈದ್ಯಕೀಯ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿರುವ ಉಪಮುಖ್ಯಮಂತ್ರಿ ಸಿ.ಅಶ್ವಥ್ ನಾರಾಯಣ್ ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ 2000 ಕೋಟಿ ಭ್ರಷ್ಟಾಚಾರ ನಡೆಯಲು ಹೇಗೆ ಅನುವು ಮಾಡಿಕೊಟ್ಟರು” ಎಂದು  ಪ್ರಶ್ನಿಸಿದ್ದಾರೆ.

ಸ್ವತಃ ವೈದ್ಯರಾಗಿರುವ ಅಶ್ವತ್ಥ ನಾರಾಯಣ ಅವರಿಗೆ ಯಾವ ಯಾವ ಉಪಕರಣ ಎಷ್ಟೆಷ್ಟು ಮೌಲ್ಯಕ್ಕೆ ದೊರೆಯುತ್ತದೆ ಎನ್ನುವ ಪ್ರಾಥಮಿಕ ಜ್ಞಾನ ಇದ್ದೇ ಇರುತ್ತದೆ. ಇವರು ಈ ಹಗರಣವನ್ನು ತಡೆಯಬಹುದಿತ್ತು, ಆದರೆ ಆ ಕೆಲಸ ಮಾಡದೇ ಕರ್ನಾಟಕದ ಮಾನ ರಾಷ್ಟ್ರ ಮಟ್ಟದಲ್ಲಿ ಹರಾಜಾಕಿದ್ದಾರೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಲೋಕಾಯುಕ್ತ ಸಂಸ್ಥೆಯನ್ನು ಹಾಳುಗೆಡವಿತು. ಅಧಿಕಾರಕ್ಕೆ ಬಂದರೆ 24 ಗಂಟೆಗಳಲ್ಲಿ ಮರುಸ್ಥಾಪಿಸುತ್ತೇನೆ ಎಂದು ವೀರಾವೇ‍ಷದಿಂದ ಗರ್ಜಿಸಿದ್ದ ಯಡಿಯೂರಪ್ಪ ಈಗ ಮೆತ್ತಗಾಗಿದ್ದಾರೆ. ಭ್ರಷ್ಟಾಚಾರದ ವಿಷಯದಲ್ಲಿ ಈ ಪಕ್ಷಗಳ ನಿಯತ್ತು ಇಷ್ಟೇ ಎಂದು ಕಿಡಿಕಾರಿದ್ದಾರೆ.

ಸುವಿಧಾ ಕ್ಯಾಬಿನ್ ಹಗರಣ

ಪೌರ ಕಾರ್ಮಿಕರಿಗೆ ಸುವಿಧಾ ಕ್ಯಾಬಿನ್ ಸ್ಥಾಪಿಸುವ ಹೆಸರಿನಲ್ಲಿ ಬೇನಾಮಿ ಕಂಪೆನಿಗೆ 16 ಕೋಟಿ ಮೌಲ್ಯದ ಗುತ್ತಿಗೆ ನೀಡಲು ಹೊರಟಿರುವುದರ ಹಿಂದೆ ಡಿಸಿಎಂ ಅಶ್ವಥ್ ನಾರಾಯಣ ಅವರೂ ಇದ್ದಾರೆ ಎಂದು ಆಪ್‌ ಮುಖಂಡ ಶರತ್ ಖಾದ್ರಿ ಆರೋಪಿಸಿದ್ದಾರೆ.

ಆಗ್ರ್ಯಾ ಇನ್‌ಫ್ರಾಟೆಕ್ ಎನ್ನುವ ಅಸ್ತಿತ್ವವೇ ಇಲ್ಲದ ಸಂಸ್ಥೆಗೆ ಗುತ್ತಿಗೆ ನೀಡಲಾಗುತ್ತಿದ್ದು, 20 ಅಡಿ ಉದ್ದ, 8.5 ಅಡಿ ಅಗಲ, 8 ಅಡಿ ಎತ್ತರದ ಈ ಕ್ಯಾಬೀನ್‌ನಲ್ಲಿ ಪೌರ ಕಾರ್ಮಿಕರಿಗೆ ಪ್ರತ್ಯೇಕ ಶೌಚಾಲಯ, ಊಟ ಮಾಡಲು ಹಾಗೂ ಬಟ್ಟೆ ಬದಲಾಯಿಸಲು ಸ್ಥಳಾವಕಾಶ ನೀಡುವುದು ಇದರ ಉದ್ದೇಶ. ಆದರೆ, ಮಾರುಕಟ್ಟೆ ದರದಲ್ಲಿ ಈ ಕ್ಯಾಬಿನ್‌ಗಳನ್ನು ತಯಾರಿಸಲು ಸುಮಾರು 80 ಸಾವಿರ ಖರ್ಚಾಗುತ್ತದೆ. ಆದರೆ ಯಾವುದೇ ಅನುಭವವೇ ಇಲ್ಲದ ಹಾಗೂ ಅಸ್ತಿತ್ವವೇ ಇಲ್ಲದ ಸಂಸ್ಥೆಯಾದ ಆಗ್ರ್ಯಾ ಇನ್‌ಫ್ರಾಟೆಕ್ ಸಂಸ್ಥೆ ಒಂದು ಕ್ಯಾಬಿನ್‌ಗೆ 8 ಲಕ್ಷ ಎಂದು ದರ ನಿಗದಿ ಮಾಡಿ ಪೂರೈಸಲು ಮುಂದಾಗಿದೆ. ಇದು ಹಗಲು ದರೋಡೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಕೇವಲ ಬಾಯಿ ಮಾತಿನಲ್ಲಿ ಪೌರ ಕಾರ್ಮಿಕರ ಬಗ್ಗೆ ಕನಿಕರ ತೋರಿಸಿ ಅವರ ಬೆನ್ನಿಗೆ ಚೂರಿ ಇರಿಯುವ ಕೆಲಸ ನಡೆಯುತ್ತಿದೆ‌. ಈ ಭ್ರಷ್ಟಾಚಾರದಲ್ಲಿ ತೊಡಗಿರುವ ಡಿಸಿಎಂ ಅಶ್ವಥ್ ನಾರಾಯಣ್‌ ಅವರು ರಾಜೀನಾಮೆ ನೀಡಬೇಕೆಂದು ಆಪ್‌ ಆಗ್ರಹಿಸಿದೆ.


ಇದನ್ನೂ ಓದಿ: ವೈದ್ಯಕೀಯ ಸಾಮಗ್ರಿ ಖರೀದಿ ಹಗರಣ: ಈಶ್ವರ ಖಂಡ್ರೆ, ಸುಧಾಕರ್ ನಡುವೆ ಜಟಾಪಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...