Homeಮುಖಪುಟಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

ಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

- Advertisement -
- Advertisement -

“ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯದಿಂದ ಯಾವುದೇ ವೈಯಕ್ತಿಕ ಹಣಕಾಸಿನ ನೆರವು ದೊರೆತಿಲ್ಲ. ಜೊತೆಗೆ ವೈಯಕ್ತಿಕ ತರಬೇತುದಾರರನ್ನು ನಿಯೋಜಿಸುವಂತೆ ಮಾಡಿದ್ದ ಮನವಿಯನ್ನೂ ತಿರಸ್ಕರಿಸಲಾಗಿತ್ತು” ಎಂದು ಖ್ಯಾತ ಬ್ಯಾಡ್ಮಿಂಟನ್ ಡಬಲ್ಸ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಪ್ಯಾರಿಸ್‌ಗೆ ತೆರಳಿದ ಭಾರತೀಯ ಅಥ್ಲೀಟ್‌ಗಳಿಗೆ ನೀಡಲಾದ ಹಣಕಾಸಿನ ನೆರವಿನ ಕುರಿತ ದಾಖಲೆಯನ್ನು ಬಿಡುಗಡೆ ಮಾಡಿದೆ.

ದಾಖಲೆಯ ಪ್ರಕಾರ, ಅಶ್ವಿನಿ ಅವರು ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ ಸ್ಕ್ರೀಂ (ಟಿಒಪಿಎಸ್) ಅಡಿಯಲ್ಲಿ ರೂ 4,50,000 ಮತ್ತು ತರಬೇತಿ ಮತ್ತು ಸ್ಪರ್ಧೆಗಾಗಿ (ಎಸಿಟಿಸಿ) ವಾರ್ಷಿಕ ಕ್ಯಾಲೆಂಡರ್ ಅಡಿಯಲ್ಲಿ ರೂ. 1,48,04,080 ಪಡೆದಿದ್ದಾರೆ. ಅದರಲ್ಲಿ ಆಟಕ್ಕೆ ಅಗತ್ಯವಿರುವ ಸಲಕರಣೆ, ಅಂತಾರಾಷ್ಟ್ರೀಯ ಸ್ಪರ್ಧೆ ಹಾಗೂ ಆಟಗಾರರ ಖರ್ಚು ಸೇರಿದೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವಿನಿ ಪೊನ್ನಪ್ಪ”ಈ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ನಮಗೆ ಇಷ್ಟೊಂದು ಹಣ ಕೊಟ್ಟಿರುವುದಾಗಿ ದೇಶಕ್ಕೆ ಹೇಳಿರುವುದು ಹಾಸ್ಯಾಸ್ಪದ. ನನಗೆ ಯಾವುದೇ ಹಣ ನೀಡಿಲ್ಲ. ರಾಷ್ಟ್ರೀಯ ಶಿಬಿರದ ಕುರಿತು ಮಾತನಾಡಲಾಗಿದೆ. ಆಗ ನೀಡಿದ 1.5 ಕೋಟಿ ರೂಪಾಯಿ ಎಲ್ಲಾ ಆಟಗಾರರ ಮೇಲೂ ಖರ್ಚು ಮಾಡಲಾಗಿತ್ತು” ಎಂದಿದ್ದಾರೆ.

“ನನಗೆ ನಿರ್ದಿಷ್ಟ ತರಬೇತುದಾರರು ಇರಲಿಲ್ಲ. ನನ್ನ ವೈಯಕ್ತಿಕ ತರಬೇತುದಾರರಿಗೆ ಸಂಬಂಧಿಸಿದಂತೆ, ನಾನು ಅವರಿಗೆ ಹಣ ಪಾವತಿಸಿದ್ದೇನೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ. ನವೆಂಬರ್ 2023ರ ವರೆಗೆ ನನ್ನದೇ ಖರ್ಚಿನಲ್ಲಿ ಆಡಿದ್ದೇನೆ. ನಾವು ಅರ್ಹತೆ ಪಡೆದ ಬಳಿಕವಷ್ಟೇ ಟಿಒಪಿಎಸ್‌ಗೆ ಸೇರಿಸಿಕೊಳ್ಳಲಾಗಿದೆ” ಎಂದು ಅಶ್ವಿನಿ ತಿಳಿಸಿದ್ದಾರೆ.

ಕರ್ನಾಟಕದ 34 ವರ್ಷದ ಅಶ್ವಿನಿ ಪೊನ್ನಪ್ಪ ಭಾರತದ ಪ್ರಮುಖ ಡಬಲ್ಸ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ, 2014 ರಲ್ಲಿ ಬೆಳ್ಳಿ ಮತ್ತು 2018 ರಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುವುದು ಅವರ ಸಾಧನೆಗಳಲ್ಲಿ ಸೇರಿದೆ.

ತನ್ನ ಕಾಮನ್‌ವೆಲ್ತ್ ಕ್ರೀಡಾಕೂಟದ ಯಶಸ್ಸಿನ ಜೊತೆಗೆ, ಅಶ್ವಿನಿ ತನ್ನ ಸಹವರ್ತಿ ಜ್ವಾಲಾ ಗುಟ್ಟಾ ಜೊತೆಯಲ್ಲಿ ಲಂಡನ್ ಮತ್ತು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಭಾರತವನ್ನು ಶ್ರೇಷ್ಠ ವೇದಿಕೆಯಲ್ಲಿ ಪ್ರತಿನಿಧಿಸಿದ್ದಾರೆ.

ಈ ವರ್ಷ ಮೂರನೇ ಬಾರಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಅಶ್ವಿನಿ, ಪ್ಯಾರಿಸ್‌ನಲ್ಲಿ ತನಿಶಾ ಕ್ರಾಸ್ಟೊ ಜೊತೆ ಕಣಕ್ಕೆ ಇಳಿದು, ಗುಂಪು ಹಂತದಲ್ಲೇ ನಿರ್ಗಮಿಸಿದ್ದರು.

ಪ್ಯಾರಿಸ್‌ನಲ್ಲಿ ನಾನು ಚೆನ್ನಾಗಿ ಆಡಿಲ್ಲ. ಅಲ್ಲಿ ಕೋಚ್ ಇಲ್ಲದಿದ್ದರೂ, ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಅಶ್ವಿನಿ ಹೇಳಿದ್ದಾರೆ.

ಇದನ್ನೂ ಓದಿ : ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...