Homeಮುಖಪುಟಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

ಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

- Advertisement -
- Advertisement -

“ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯದಿಂದ ಯಾವುದೇ ವೈಯಕ್ತಿಕ ಹಣಕಾಸಿನ ನೆರವು ದೊರೆತಿಲ್ಲ. ಜೊತೆಗೆ ವೈಯಕ್ತಿಕ ತರಬೇತುದಾರರನ್ನು ನಿಯೋಜಿಸುವಂತೆ ಮಾಡಿದ್ದ ಮನವಿಯನ್ನೂ ತಿರಸ್ಕರಿಸಲಾಗಿತ್ತು” ಎಂದು ಖ್ಯಾತ ಬ್ಯಾಡ್ಮಿಂಟನ್ ಡಬಲ್ಸ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಪ್ಯಾರಿಸ್‌ಗೆ ತೆರಳಿದ ಭಾರತೀಯ ಅಥ್ಲೀಟ್‌ಗಳಿಗೆ ನೀಡಲಾದ ಹಣಕಾಸಿನ ನೆರವಿನ ಕುರಿತ ದಾಖಲೆಯನ್ನು ಬಿಡುಗಡೆ ಮಾಡಿದೆ.

ದಾಖಲೆಯ ಪ್ರಕಾರ, ಅಶ್ವಿನಿ ಅವರು ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ ಸ್ಕ್ರೀಂ (ಟಿಒಪಿಎಸ್) ಅಡಿಯಲ್ಲಿ ರೂ 4,50,000 ಮತ್ತು ತರಬೇತಿ ಮತ್ತು ಸ್ಪರ್ಧೆಗಾಗಿ (ಎಸಿಟಿಸಿ) ವಾರ್ಷಿಕ ಕ್ಯಾಲೆಂಡರ್ ಅಡಿಯಲ್ಲಿ ರೂ. 1,48,04,080 ಪಡೆದಿದ್ದಾರೆ. ಅದರಲ್ಲಿ ಆಟಕ್ಕೆ ಅಗತ್ಯವಿರುವ ಸಲಕರಣೆ, ಅಂತಾರಾಷ್ಟ್ರೀಯ ಸ್ಪರ್ಧೆ ಹಾಗೂ ಆಟಗಾರರ ಖರ್ಚು ಸೇರಿದೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವಿನಿ ಪೊನ್ನಪ್ಪ”ಈ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ನಮಗೆ ಇಷ್ಟೊಂದು ಹಣ ಕೊಟ್ಟಿರುವುದಾಗಿ ದೇಶಕ್ಕೆ ಹೇಳಿರುವುದು ಹಾಸ್ಯಾಸ್ಪದ. ನನಗೆ ಯಾವುದೇ ಹಣ ನೀಡಿಲ್ಲ. ರಾಷ್ಟ್ರೀಯ ಶಿಬಿರದ ಕುರಿತು ಮಾತನಾಡಲಾಗಿದೆ. ಆಗ ನೀಡಿದ 1.5 ಕೋಟಿ ರೂಪಾಯಿ ಎಲ್ಲಾ ಆಟಗಾರರ ಮೇಲೂ ಖರ್ಚು ಮಾಡಲಾಗಿತ್ತು” ಎಂದಿದ್ದಾರೆ.

“ನನಗೆ ನಿರ್ದಿಷ್ಟ ತರಬೇತುದಾರರು ಇರಲಿಲ್ಲ. ನನ್ನ ವೈಯಕ್ತಿಕ ತರಬೇತುದಾರರಿಗೆ ಸಂಬಂಧಿಸಿದಂತೆ, ನಾನು ಅವರಿಗೆ ಹಣ ಪಾವತಿಸಿದ್ದೇನೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ. ನವೆಂಬರ್ 2023ರ ವರೆಗೆ ನನ್ನದೇ ಖರ್ಚಿನಲ್ಲಿ ಆಡಿದ್ದೇನೆ. ನಾವು ಅರ್ಹತೆ ಪಡೆದ ಬಳಿಕವಷ್ಟೇ ಟಿಒಪಿಎಸ್‌ಗೆ ಸೇರಿಸಿಕೊಳ್ಳಲಾಗಿದೆ” ಎಂದು ಅಶ್ವಿನಿ ತಿಳಿಸಿದ್ದಾರೆ.

ಕರ್ನಾಟಕದ 34 ವರ್ಷದ ಅಶ್ವಿನಿ ಪೊನ್ನಪ್ಪ ಭಾರತದ ಪ್ರಮುಖ ಡಬಲ್ಸ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ, 2014 ರಲ್ಲಿ ಬೆಳ್ಳಿ ಮತ್ತು 2018 ರಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುವುದು ಅವರ ಸಾಧನೆಗಳಲ್ಲಿ ಸೇರಿದೆ.

ತನ್ನ ಕಾಮನ್‌ವೆಲ್ತ್ ಕ್ರೀಡಾಕೂಟದ ಯಶಸ್ಸಿನ ಜೊತೆಗೆ, ಅಶ್ವಿನಿ ತನ್ನ ಸಹವರ್ತಿ ಜ್ವಾಲಾ ಗುಟ್ಟಾ ಜೊತೆಯಲ್ಲಿ ಲಂಡನ್ ಮತ್ತು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಭಾರತವನ್ನು ಶ್ರೇಷ್ಠ ವೇದಿಕೆಯಲ್ಲಿ ಪ್ರತಿನಿಧಿಸಿದ್ದಾರೆ.

ಈ ವರ್ಷ ಮೂರನೇ ಬಾರಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಅಶ್ವಿನಿ, ಪ್ಯಾರಿಸ್‌ನಲ್ಲಿ ತನಿಶಾ ಕ್ರಾಸ್ಟೊ ಜೊತೆ ಕಣಕ್ಕೆ ಇಳಿದು, ಗುಂಪು ಹಂತದಲ್ಲೇ ನಿರ್ಗಮಿಸಿದ್ದರು.

ಪ್ಯಾರಿಸ್‌ನಲ್ಲಿ ನಾನು ಚೆನ್ನಾಗಿ ಆಡಿಲ್ಲ. ಅಲ್ಲಿ ಕೋಚ್ ಇಲ್ಲದಿದ್ದರೂ, ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಅಶ್ವಿನಿ ಹೇಳಿದ್ದಾರೆ.

ಇದನ್ನೂ ಓದಿ : ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...