Homeಮುಖಪುಟಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

ಕ್ರೀಡಾ ಪ್ರಾಧಿಕಾರದಿಂದ ವೈಯಕ್ತಿಕ ಹಣಕಾಸಿನ ನೆರವು ಪಡೆದಿಲ್ಲ : ಅಶ್ವಿನಿ ಪೊನ್ನಪ್ಪ

- Advertisement -
- Advertisement -

“ಪ್ಯಾರಿಸ್ ಒಲಿಂಪಿಕ್ಸ್‌ಗೆ ತಯಾರಿ ನಡೆಸಲು ಕೇಂದ್ರ ಕ್ರೀಡಾ ಸಚಿವಾಲಯದಿಂದ ಯಾವುದೇ ವೈಯಕ್ತಿಕ ಹಣಕಾಸಿನ ನೆರವು ದೊರೆತಿಲ್ಲ. ಜೊತೆಗೆ ವೈಯಕ್ತಿಕ ತರಬೇತುದಾರರನ್ನು ನಿಯೋಜಿಸುವಂತೆ ಮಾಡಿದ್ದ ಮನವಿಯನ್ನೂ ತಿರಸ್ಕರಿಸಲಾಗಿತ್ತು” ಎಂದು ಖ್ಯಾತ ಬ್ಯಾಡ್ಮಿಂಟನ್ ಡಬಲ್ಸ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಪ್ಯಾರಿಸ್‌ಗೆ ತೆರಳಿದ ಭಾರತೀಯ ಅಥ್ಲೀಟ್‌ಗಳಿಗೆ ನೀಡಲಾದ ಹಣಕಾಸಿನ ನೆರವಿನ ಕುರಿತ ದಾಖಲೆಯನ್ನು ಬಿಡುಗಡೆ ಮಾಡಿದೆ.

ದಾಖಲೆಯ ಪ್ರಕಾರ, ಅಶ್ವಿನಿ ಅವರು ಟಾರ್ಗೆಟ್ ಒಲಿಂಪಿಕ್ಸ್ ಪೋಡಿಯಂ ಸ್ಕ್ರೀಂ (ಟಿಒಪಿಎಸ್) ಅಡಿಯಲ್ಲಿ ರೂ 4,50,000 ಮತ್ತು ತರಬೇತಿ ಮತ್ತು ಸ್ಪರ್ಧೆಗಾಗಿ (ಎಸಿಟಿಸಿ) ವಾರ್ಷಿಕ ಕ್ಯಾಲೆಂಡರ್ ಅಡಿಯಲ್ಲಿ ರೂ. 1,48,04,080 ಪಡೆದಿದ್ದಾರೆ. ಅದರಲ್ಲಿ ಆಟಕ್ಕೆ ಅಗತ್ಯವಿರುವ ಸಲಕರಣೆ, ಅಂತಾರಾಷ್ಟ್ರೀಯ ಸ್ಪರ್ಧೆ ಹಾಗೂ ಆಟಗಾರರ ಖರ್ಚು ಸೇರಿದೆ ಎಂದು ಹೇಳಲಾಗಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಶ್ವಿನಿ ಪೊನ್ನಪ್ಪ”ಈ ಮಾಹಿತಿ ನಿಜಕ್ಕೂ ಆಘಾತಕಾರಿಯಾಗಿದೆ. ನಮಗೆ ಇಷ್ಟೊಂದು ಹಣ ಕೊಟ್ಟಿರುವುದಾಗಿ ದೇಶಕ್ಕೆ ಹೇಳಿರುವುದು ಹಾಸ್ಯಾಸ್ಪದ. ನನಗೆ ಯಾವುದೇ ಹಣ ನೀಡಿಲ್ಲ. ರಾಷ್ಟ್ರೀಯ ಶಿಬಿರದ ಕುರಿತು ಮಾತನಾಡಲಾಗಿದೆ. ಆಗ ನೀಡಿದ 1.5 ಕೋಟಿ ರೂಪಾಯಿ ಎಲ್ಲಾ ಆಟಗಾರರ ಮೇಲೂ ಖರ್ಚು ಮಾಡಲಾಗಿತ್ತು” ಎಂದಿದ್ದಾರೆ.

“ನನಗೆ ನಿರ್ದಿಷ್ಟ ತರಬೇತುದಾರರು ಇರಲಿಲ್ಲ. ನನ್ನ ವೈಯಕ್ತಿಕ ತರಬೇತುದಾರರಿಗೆ ಸಂಬಂಧಿಸಿದಂತೆ, ನಾನು ಅವರಿಗೆ ಹಣ ಪಾವತಿಸಿದ್ದೇನೆ. ನಾನು ಯಾರಿಂದಲೂ ಹಣ ತೆಗೆದುಕೊಂಡಿಲ್ಲ. ನವೆಂಬರ್ 2023ರ ವರೆಗೆ ನನ್ನದೇ ಖರ್ಚಿನಲ್ಲಿ ಆಡಿದ್ದೇನೆ. ನಾವು ಅರ್ಹತೆ ಪಡೆದ ಬಳಿಕವಷ್ಟೇ ಟಿಒಪಿಎಸ್‌ಗೆ ಸೇರಿಸಿಕೊಳ್ಳಲಾಗಿದೆ” ಎಂದು ಅಶ್ವಿನಿ ತಿಳಿಸಿದ್ದಾರೆ.

ಕರ್ನಾಟಕದ 34 ವರ್ಷದ ಅಶ್ವಿನಿ ಪೊನ್ನಪ್ಪ ಭಾರತದ ಪ್ರಮುಖ ಡಬಲ್ಸ್ ಆಟಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. 2010ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ, 2014 ರಲ್ಲಿ ಬೆಳ್ಳಿ ಮತ್ತು 2018 ರಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುವುದು ಅವರ ಸಾಧನೆಗಳಲ್ಲಿ ಸೇರಿದೆ.

ತನ್ನ ಕಾಮನ್‌ವೆಲ್ತ್ ಕ್ರೀಡಾಕೂಟದ ಯಶಸ್ಸಿನ ಜೊತೆಗೆ, ಅಶ್ವಿನಿ ತನ್ನ ಸಹವರ್ತಿ ಜ್ವಾಲಾ ಗುಟ್ಟಾ ಜೊತೆಯಲ್ಲಿ ಲಂಡನ್ ಮತ್ತು ರಿಯೊ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿ ಭಾರತವನ್ನು ಶ್ರೇಷ್ಠ ವೇದಿಕೆಯಲ್ಲಿ ಪ್ರತಿನಿಧಿಸಿದ್ದಾರೆ.

ಈ ವರ್ಷ ಮೂರನೇ ಬಾರಿ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿದ್ದ ಅಶ್ವಿನಿ, ಪ್ಯಾರಿಸ್‌ನಲ್ಲಿ ತನಿಶಾ ಕ್ರಾಸ್ಟೊ ಜೊತೆ ಕಣಕ್ಕೆ ಇಳಿದು, ಗುಂಪು ಹಂತದಲ್ಲೇ ನಿರ್ಗಮಿಸಿದ್ದರು.

ಪ್ಯಾರಿಸ್‌ನಲ್ಲಿ ನಾನು ಚೆನ್ನಾಗಿ ಆಡಿಲ್ಲ. ಅಲ್ಲಿ ಕೋಚ್ ಇಲ್ಲದಿದ್ದರೂ, ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಅಶ್ವಿನಿ ಹೇಳಿದ್ದಾರೆ.

ಇದನ್ನೂ ಓದಿ : ಅಂಡಾಣು, ವೀರ್ಯ ದಾನಿಗೆ ಮಗುವಿನ ಮೇಲೆ ಕಾನೂನಾತ್ಮಕ ಹಕ್ಕಿಲ್ಲ : ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಬಿಎಸ್‌ಪಿ ತೀವ್ರ ಆಕ್ರೋಶ, ಕುಟುಂಬಕ್ಕೆ ನೆರವು ನೀಡುವಂತೆ ಸರ್ಕಾರಕ್ಕೆ ಆಗ್ರಹ

ರಾಯಚೂರು ಜಿಲ್ಲೆಯಲ್ಲಿ ಮತ್ತೊಂದು ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ದಲಿತ ಮುಖಂಡ ಹಾಗೂ ಯುವಕ ಭೂಮಾನಂದ (32) ಅವರನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ಘಟನೆಯು ದೇವದುರ್ಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...