Homeಮುಖಪುಟಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಉಭಯ ಕಕ್ಷಿದಾರರಿಗೆ ನೀಡಲು ಸಮ್ಮತಿಸಿದ ನ್ಯಾಯಾಲಯ

ಜ್ಞಾನವಾಪಿ ಮಸೀದಿಯ ಸಮೀಕ್ಷಾ ವರದಿ ಉಭಯ ಕಕ್ಷಿದಾರರಿಗೆ ನೀಡಲು ಸಮ್ಮತಿಸಿದ ನ್ಯಾಯಾಲಯ

- Advertisement -
- Advertisement -

ವಾರಣಾಸಿ ಜಿಲ್ಲಾ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ನಡೆಸಿದ ‘ಜ್ಞಾನವಾಪಿ ಮಸೀದಿ ಸಂಕೀರ್ಣ’ದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಹಿಂದೂ ಮತ್ತು ಮುಸ್ಲಿಂ ಎರಡೂ ಕಡೆಯ ಕಕ್ಷಿಗಳಿಗೆ ನೀಡಲು ಒಪ್ಪಿಗೆ ನೀಡಿದೆ. ಈ ಬಗ್ಗೆ ಸಂಬಂಧಪಟ್ಟವರು ಅಫಿಡವಿಟ್ ಸಲ್ಲಿಸಬೇಕಾಗಿದೆ.

ಡಿಸೆಂಬರ್ 18ರಂದು ಮುಚ್ಚಿದ ಲಕೋಟೆಯಲ್ಲಿ ಜ್ಞಾನವಾಪಿ ಮಸೀದಿ ಸಂಕೀರ್ಣದ ಕುರಿತದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಎಎಸ್‌ಐ ಜಿಲ್ಲಾ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಇದಾದ ಒಂದು ತಿಂಗಳ ನಂತರ ಈ ಬೆಳವಣಿಗೆ ನಡೆದಿದೆ. ನ್ಯಾಯಾಲಯಕ್ಕೆ ಎಎಸ್‌ಐ ವರದಿ ಸಲ್ಲಿಸಿದ ನಂತರ, ಜ್ಞಾನವಾಪಿ ಸಮೀಕ್ಷೆ ಪ್ರಕರಣದಲ್ಲಿ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಅವರು ಎಎಸ್‌ಐ ವರದಿಯನ್ನು ಸಾರ್ವಜನಿಕಗೊಳಿಸುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿರುವುದನ್ನು ಪ್ರಶ್ನಿಸಿದ್ದರು.

ಆದರೆ ಎಎಸ್‌ಐ ಜ್ಞಾನವಾಪಿ ಸಮೀಕ್ಷೆಯ ವರದಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದನ್ನು ಮುಂದೂಡುವಂತೆ ಕೋರಿತ್ತು. ಸಾರ್ವಜನಿಕರಿಗೆ ವರದಿಯ ಬಿಡುಗಡೆ ವದಂತಿಗಳು ಮತ್ತು ತಪ್ಪು ಮಾಹಿತಿಯನ್ನು ಉತ್ತೇಜಿಸುವ ಸಾಧ್ಯತೆ ಇದೆ. ಆದ್ದರಿಂದ ವರದಿಯನ್ನು ಬಹಿರಂಗಪಡಿಸುವಿಕೆಯನ್ನು ವಿಳಂಬಗೊಳಿಸುವಂತೆ ಸಮಿತಿಯು ವಾರಣಾಸಿ ಜಿಲ್ಲಾ ನ್ಯಾಯಾಧೀಶರನ್ನು ಒತ್ತಾಯಿಸಿತ್ತು.

ASI ಕಾಶಿ ವಿಶ್ವನಾಥ ದೇವಸ್ಥಾನದ ಪಕ್ಕದಲ್ಲಿರುವ ಜ್ಞಾನವಾಪಿ ಮಸೀದಿ ಆವರಣದ ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿತ್ತು. 17ನೇ ಶತಮಾನದ ಮಸೀದಿಯನ್ನು ಹಿಂದೂ ದೇವಾಲಯ ಕೆಡವಿ ನಿರ್ಮಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಈ ಬಗ್ಗೆ ಸಮೀಕ್ಷೆಗೆ ಕೋರ್ಟ್‌ ASIಗೆ ಸೂಚಿಸಿತ್ತು.

ಅಲಹಾಬಾದ್ ಹೈಕೋರ್ಟ್, ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಎತ್ತಿಹಿಡಿದ ನಂತರ ಮತ್ತು ಈ ಕ್ರಮವು ನ್ಯಾಯದ ಹಿತಾಸಕ್ತಿಯಲ್ಲಿ ಅಗತ್ಯ ಎಂದು ತೀರ್ಪು ನೀಡಿದ ನಂತರ ಸಮೀಕ್ಷೆಯು ಪ್ರಾರಂಭವಾಗಿತ್ತು. ಅಲಹಾಬಾದ್ ಹೈಕೋರ್ಟ್ ಆದೇಶದ ನಂತರ, ಜ್ಞಾನವಾಪಿ ಮಸೀದಿ ಸಮಿತಿಯು ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಎಎಸ್‌ಐ ಸಮೀಕ್ಷೆ ಕುರಿತ ಹೈಕೋರ್ಟ್‌ನ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್‌ ಕಳೆದ ವರ್ಷ ಆಗಸ್ಟ್‌ನಲ್ಲಿ ನಿರಾಕರಿಸಿತ್ತು.

ಮಸೀದಿಯನ್ನು ದೇವಾಲಯ ಕೆಡವಿ ನಿರ್ಮಿಸಲಾಗಿದೆಯೇ ಎಂದು ತಿಳಿಯಲು ಸಮೀಕ್ಷೆಯೊಂದು ಮಾರ್ಗವಾಗಿದೆ ಎಂದು ಅರ್ಜಿದಾರ ಮಹಿಳೆಯರು ವಾದಿಸಿದ್ದರು. ಕಳೆದ ಎಪ್ರಿಲ್‌ನಲ್ಲಿ ನ್ಯಾಯಾಲಯವು ಮಸೀದಿ ಆವರಣದ ವೀಡಿಯೋ ಸಮೀಕ್ಷೆಗೆ ಆದೇಶಿಸಿತ್ತು.

ಏನಿದು ವಿವಾದ?

ಜ್ಞಾನವಾಪಿ ಮಸೀದಿಯನ್ನು 1669ರಲ್ಲಿ ಮೊಘಲ್ ದೊರೆ ಔರಂಗಜೇಬನು ಪ್ರಾಚೀನ ವಿಶ್ವೇಶ್ವರ ದೇವಾಲಯವನ್ನು ಕೆಡವಿ ನಿರ್ಮಿಸಿದನು ಎಂಬುವುದು ಹಿಂದೂಪರರ ವಾದ. ಜ್ಞಾನವಾಪಿ ಮಸೀದಿಯ ಪ್ರಕರಣವು 1991ರಿಂದ ನ್ಯಾಯಾಲಯದಲ್ಲಿದೆ. ಕಾಶಿ ವಿಶ್ವನಾಥ ದೇವಾಲಯದ ಅರ್ಚಕರ ವಂಶಸ್ಥರಾದ ಪಂಡಿತ್ ಸೋಮನಾಥ ವ್ಯಾಸ್ ಸೇರಿದಂತೆ ಮೂವರು ವಾರಣಾಸಿಯ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದಲ್ಲಿ ಔರಂಗಜೇಬನು ದೇವಾಲಯ ಧ್ವಂಸಗೊಳಿಸಿದ್ದಾನೆ ಎಂದು ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಇದಲ್ಲದೆ ವಿಶ್ವನಾಥ ದೇವರ ಜ್ಯೋತಿರ್ಲಿಂಗವು ಜ್ಞಾನವಾಪಿ ಮಸೀದಿಯ ಆವರಣದಲ್ಲಿದೆ ಎಂದು ಹೇಳುವ ಇನ್ನೊಂದು ಅರ್ಜಿಯೂ ನ್ಯಾಯಾಲಯದಲ್ಲಿದೆ.

2021ರ ಆ.18ರಂದು ವಾರಣಾಸಿಯ ಅದೇ ನ್ಯಾಯಾಲಯದಲ್ಲಿ, ಶೃಂಗಾರ ಗೌರಿ, ಹನುಮಾನ್ ಮತ್ತು ಗಣೇಶ ಚಿತ್ರಗಳು ಇವೆಯೆಂದು ಮತ್ತು ಪೂಜೆಗೆ ಅನುಮತಿ ಕೋರಿ ಐವರು ಮಹಿಳೆಯರು ಅರ್ಜಿಯನ್ನು ಸಲ್ಲಿಸಿದ್ದರು, ಇದರ ಬೆನ್ನಲ್ಲಿ ಪ್ರಸ್ತುತ ಸ್ಥಿತಿಯನ್ನು ತಿಳಿಯಲು ಆಯೋಗವನ್ನು ರಚಿಸಲಾಗಿತ್ತು.

ಏ.2021ರಲ್ಲಿ ವಾರಣಾಸಿ ನ್ಯಾಯಾಲಯವು ಸಮೀಕ್ಷೆಯನ್ನು ನಡೆಸಿ ಅದರ ವರದಿಯನ್ನು ಸಲ್ಲಿಸಲು ASIಗೆ ನಿರ್ದೇಶನ ನೀಡಿತ್ತು. ಆದರೆ ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಬೋರ್ಡ್ ಮತ್ತು ಜ್ಞಾನವಾಪಿ ಮಸೀದಿಯನ್ನು ನಡೆಸುತ್ತಿರುವ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಯು  ಅರ್ಜಿಯನ್ನು  ವಿರೋಧಿಸಿತ್ತು ಮತ್ತು ಮಸೀದಿಯ ಸಮೀಕ್ಷೆಗಾಗಿ ವಾರಣಾಸಿ ನ್ಯಾಯಾಲಯದ ಆದೇಶವನ್ನು ವಿರೋಧಿಸಿತ್ತು.  ಪ್ರಕರಣವು ನಂತರ ಅಲಹಾಬಾದ್ ಹೈಕೋರ್ಟ್‌ಗೆ ತಲುಪಿತ್ತು.

ಇದನ್ನು ಓದಿ: ಬಾಬರಿ ಮಸೀದಿ ಧ್ವಂಸದ ದಿನ ‘ಸಂಭ್ರಮಾಚರಣೆ’ ಮಾಡಿದ್ದ IAS ಅಧಿಕಾರಿಗಳು: ವಿವಾದ ಸೃಷ್ಟಿಸಿದ ಹಿರಿಯ ಅಧಿಕಾರಿಯ ಪೋಸ್ಟ್‌…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...