ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ)ಯು ನ್ಯಾಯಾಲಯದಿಂದ 15 ದಿನಗಳ ಕಾಲಾವಕಾಶ ಕೋರಿದೆ.
ಮಸೀದಿ ಸಂಕೀರ್ಣದ ಸಮೀಕ್ಷೆಯು ಪೂರ್ಣಗೊಂಡಿದ್ದು, ತಾಂತ್ರಿಕ ವರದಿಗಳು ಇನ್ನಷ್ಟೇ ಬರಬೇಕಿದೆ. ಈ ಹಿನ್ನೆಲೆಯಲ್ಲಿ ವರದಿ ಸಲ್ಲಿಸಲು ಹೆಚ್ಚುವರಿ ಸಮಯಾವಕಾಶ ನೀಡಲು ಕೋರಿ ವಾರಾಣಸಿ ಜಿಲ್ಲಾ ನ್ಯಾಯಾಲಯದಲ್ಲಿ ಎಎಸ್ಐ ಅರ್ಜಿ ಸಲ್ಲಿಸಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲ ಅಮಿತ್ ಶ್ರೀವಾಸ್ತವ ತಿಳಿಸಿದ್ದಾರೆ.
ಸಮೀಕ್ಷೆಯು ಪೂರ್ಣಗೊಂಡಿದೆ. ಆದರೆ, ಸಮೀಕ್ಷೆ ಕಾರ್ಯಕ್ಕೆ ಬಳಸಿದ ಸಾಧನಗಳನ್ನು ವರದಿಯಲ್ಲಿ ಸೇರಿಸಬೇಕಿದೆ. ಹೀಗಾಗಿ ವರದಿ ಸಲ್ಲಿಸಲು ನವೆಂಬರ್ 17ರವರೆಗೆ ಸಮಯಾವಕಾಶ ಬೇಕು ಎಂದು ನವೆಂಬರ್ 2ರಂದು ನ್ಯಾಯಾಲಯಕ್ಕೆ ಎಎಸ್ಐ ತಿಳಿಸಿತ್ತು.
ನ್ಯಾಯಾಲಯವು ಈ ವಿಷಯವನ್ನು ನಂತರ ದಿನದಲ್ಲಿ ವಿಚಾರಣೆ ನಡೆಸಲಿದೆ ಎಂದು ಶ್ರೀವಾಸ್ತವ ಹೇಳಿದರು.
ನವೆಂಬರ್ 2 ರಂದು, ಎಎಸ್ಐ ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯನ್ನು ಮುಗಿದಿದೆ ಆದರೆ ಸಮೀಕ್ಷೆ ಕಾರ್ಯದಲ್ಲಿ ಬಳಸಲಾದ ಸಲಕರಣೆಗಳ ವಿವರಗಳೊಂದಿಗೆ ವರದಿಯನ್ನು ಸಂಗ್ರಹಿಸಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳಬಹುದು ಎಂದು ನ್ಯಾಯಾಲಯಕ್ಕೆ ತಿಳಿಸಿತು. ಡಾಕ್ಯುಮೆಂಟ್ ಸಲ್ಲಿಸಲು ನವೆಂಬರ್ 17 ರವರೆಗೆ ಹೆಚ್ಚುವರಿ ಸಮಯವನ್ನು ನ್ಯಾಯಾಲಯ ನೀಡಿತು.
ಸಮೀಕ್ಷೆಯ ವರದಿ ಸಲ್ಲಿಸಲು ಅಕ್ಟೋಬರ್ 5 ರಂದು ನ್ಯಾಯಾಲಯವು ನಾಲ್ಕು ವಾರಗಳ ಕಾಲಾವಕಾಶ ನೀಡಿತ್ತು. ಇದಕ್ಕಿಂತಲೂ ಹೆಚ್ಚಿನ ಕಾಲಾವಕಾಶ ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.
ಇದನ್ನೂ ಓದಿ: ಛತ್ತೀಸ್ಗಢ: ಮತದಾನದ ಮುನ್ನಾ ದಿನ ಬಿಜೆಪಿ ಅಭ್ಯರ್ಥಿಯ ವಾಹನದಲ್ಲಿ ಕಂತೆ ಕಂತೆ ನೋಟು ಪತ್ತೆ