Homeಸಿನಿಮಾಕ್ರೀಡೆಏಷ್ಯಾ ಕಪ್ 2022ರಲ್ಲಿ ಭಾರತ - ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್ 2022ರಲ್ಲಿ ಭಾರತ – ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಇದೇ ಆಗಸ್ಟ್ 27 ರಿಂದ ಆರಂಭವಾಗುತ್ತಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿದ್ದು ಆಗಸ್ಟ್ 28 ರಂದು ಪರಸ್ಪರ ಸೆಣಸುತ್ತಿವೆ. ಅಷ್ಟು ಮಾತ್ರವಲ್ಲದೇ 15 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸುವ ಅವಕಾಶವಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ನೇರವಾಗಿ ಆಯ್ಕೆಯಾಗಿವೆ. ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಅದಕ್ಕಾಗಿ ಯುಎಇ, ಹಾಂಗ್‌ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಗಳನ್ನು ಆಡಲಿವೆ. ಆಗಸ್ಟ್ 20 ರಿಂದ ಅರ್ಹತಾ ಪಂದ್ಯಗಳು ನಡೆಯಲಿದ್ದು ಒಂದು ತಂಡ ಆಯ್ಕೆಯಾಗಲಿದೆ.

ಗುಂಪುಗಳು

ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಇದ್ದು ಅರ್ಹತಾ ಗುಂಪಿನಲ್ಲಿ ಆಯ್ಕೆಯಾದ ತಂಡ ಈ ಗುಂಪು ಸೇರಿಕೊಳ್ಳಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಇವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಅರ್ಹತಾ ಸುತ್ತಿನಲ್ಲಿ ಆಯ್ಕೆಯಾದ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 13 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಆಗಸ್ಟ್ 28 ರಂದು ಮೊದಲ ಪಂದ್ಯ ಸೆಣೆಸುವ ಈ ಎರಡು ತಂಡಗಳು ಗ್ರೂಪ್ ಎ ನಲ್ಲಿರುವುದರಿಂದ ಉಳಿದ ದುರ್ಬಲ ತಂಡವನ್ನು ಮಣಿಸಿ ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳು ಮಾತ್ರ ನಮಗೆ ಸಿಗಲಿವೆ.

ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಪಾಕಿಸ್ತಾನ 10 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದಲ್ಲಿ ಎಲ್ಲಾ ಒಗ್ಗಟ್ಟು ಇರಬೇಕಾದರೆ ದೇಶದಲ್ಲಿ ಇರುವರು ಯಾವ ಸಂಘಟನೆಗಳೆ ಆಗಲಿ ಸಂವಿಧಾನಕ್ಕೆ ಗೌರವ ಕೋಡಬೇಕು ತ್ರೀವರ್ಣ ಧ್ವಜ ಧರಿಸಬೇಕು ಆಚರಿಸಬೇಕು. ಸ್ವಾತಂತ್ರ್ಯ ಬಂದ್ದೀರುವುದು ಸಂಕೇತವಾಗಿದೆ ಅದಕಾರಣ ಪ್ರಥಮಾ ಪ್ರದಾನ ಮಾಂತ್ರಿ ಜವಹಾರಲಾಲ್ ನೇಹರು ತ್ರೀವರ್ಣ ಧ್ವಜ ಹಾರಿಸಿದರು ಅದ ಕಾರಣ ಎಲ್ಲಾರು ಒಪ್ಪಿಕೋಳ್ಳಾಬೇಕು.

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...