Homeಸಿನಿಮಾಕ್ರೀಡೆಏಷ್ಯಾ ಕಪ್ 2022ರಲ್ಲಿ ಭಾರತ - ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್ 2022ರಲ್ಲಿ ಭಾರತ – ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಇದೇ ಆಗಸ್ಟ್ 27 ರಿಂದ ಆರಂಭವಾಗುತ್ತಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿದ್ದು ಆಗಸ್ಟ್ 28 ರಂದು ಪರಸ್ಪರ ಸೆಣಸುತ್ತಿವೆ. ಅಷ್ಟು ಮಾತ್ರವಲ್ಲದೇ 15 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸುವ ಅವಕಾಶವಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ನೇರವಾಗಿ ಆಯ್ಕೆಯಾಗಿವೆ. ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಅದಕ್ಕಾಗಿ ಯುಎಇ, ಹಾಂಗ್‌ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಗಳನ್ನು ಆಡಲಿವೆ. ಆಗಸ್ಟ್ 20 ರಿಂದ ಅರ್ಹತಾ ಪಂದ್ಯಗಳು ನಡೆಯಲಿದ್ದು ಒಂದು ತಂಡ ಆಯ್ಕೆಯಾಗಲಿದೆ.

ಗುಂಪುಗಳು

ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಇದ್ದು ಅರ್ಹತಾ ಗುಂಪಿನಲ್ಲಿ ಆಯ್ಕೆಯಾದ ತಂಡ ಈ ಗುಂಪು ಸೇರಿಕೊಳ್ಳಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಇವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಅರ್ಹತಾ ಸುತ್ತಿನಲ್ಲಿ ಆಯ್ಕೆಯಾದ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 13 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಆಗಸ್ಟ್ 28 ರಂದು ಮೊದಲ ಪಂದ್ಯ ಸೆಣೆಸುವ ಈ ಎರಡು ತಂಡಗಳು ಗ್ರೂಪ್ ಎ ನಲ್ಲಿರುವುದರಿಂದ ಉಳಿದ ದುರ್ಬಲ ತಂಡವನ್ನು ಮಣಿಸಿ ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳು ಮಾತ್ರ ನಮಗೆ ಸಿಗಲಿವೆ.

ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಪಾಕಿಸ್ತಾನ 10 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದಲ್ಲಿ ಎಲ್ಲಾ ಒಗ್ಗಟ್ಟು ಇರಬೇಕಾದರೆ ದೇಶದಲ್ಲಿ ಇರುವರು ಯಾವ ಸಂಘಟನೆಗಳೆ ಆಗಲಿ ಸಂವಿಧಾನಕ್ಕೆ ಗೌರವ ಕೋಡಬೇಕು ತ್ರೀವರ್ಣ ಧ್ವಜ ಧರಿಸಬೇಕು ಆಚರಿಸಬೇಕು. ಸ್ವಾತಂತ್ರ್ಯ ಬಂದ್ದೀರುವುದು ಸಂಕೇತವಾಗಿದೆ ಅದಕಾರಣ ಪ್ರಥಮಾ ಪ್ರದಾನ ಮಾಂತ್ರಿ ಜವಹಾರಲಾಲ್ ನೇಹರು ತ್ರೀವರ್ಣ ಧ್ವಜ ಹಾರಿಸಿದರು ಅದ ಕಾರಣ ಎಲ್ಲಾರು ಒಪ್ಪಿಕೋಳ್ಳಾಬೇಕು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...