Homeಸಿನಿಮಾಕ್ರೀಡೆಏಷ್ಯಾ ಕಪ್ 2022ರಲ್ಲಿ ಭಾರತ - ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್ 2022ರಲ್ಲಿ ಭಾರತ – ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಇದೇ ಆಗಸ್ಟ್ 27 ರಿಂದ ಆರಂಭವಾಗುತ್ತಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿದ್ದು ಆಗಸ್ಟ್ 28 ರಂದು ಪರಸ್ಪರ ಸೆಣಸುತ್ತಿವೆ. ಅಷ್ಟು ಮಾತ್ರವಲ್ಲದೇ 15 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸುವ ಅವಕಾಶವಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ನೇರವಾಗಿ ಆಯ್ಕೆಯಾಗಿವೆ. ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಅದಕ್ಕಾಗಿ ಯುಎಇ, ಹಾಂಗ್‌ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಗಳನ್ನು ಆಡಲಿವೆ. ಆಗಸ್ಟ್ 20 ರಿಂದ ಅರ್ಹತಾ ಪಂದ್ಯಗಳು ನಡೆಯಲಿದ್ದು ಒಂದು ತಂಡ ಆಯ್ಕೆಯಾಗಲಿದೆ.

ಗುಂಪುಗಳು

ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಇದ್ದು ಅರ್ಹತಾ ಗುಂಪಿನಲ್ಲಿ ಆಯ್ಕೆಯಾದ ತಂಡ ಈ ಗುಂಪು ಸೇರಿಕೊಳ್ಳಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಇವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಅರ್ಹತಾ ಸುತ್ತಿನಲ್ಲಿ ಆಯ್ಕೆಯಾದ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 13 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಆಗಸ್ಟ್ 28 ರಂದು ಮೊದಲ ಪಂದ್ಯ ಸೆಣೆಸುವ ಈ ಎರಡು ತಂಡಗಳು ಗ್ರೂಪ್ ಎ ನಲ್ಲಿರುವುದರಿಂದ ಉಳಿದ ದುರ್ಬಲ ತಂಡವನ್ನು ಮಣಿಸಿ ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳು ಮಾತ್ರ ನಮಗೆ ಸಿಗಲಿವೆ.

ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಪಾಕಿಸ್ತಾನ 10 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದಲ್ಲಿ ಎಲ್ಲಾ ಒಗ್ಗಟ್ಟು ಇರಬೇಕಾದರೆ ದೇಶದಲ್ಲಿ ಇರುವರು ಯಾವ ಸಂಘಟನೆಗಳೆ ಆಗಲಿ ಸಂವಿಧಾನಕ್ಕೆ ಗೌರವ ಕೋಡಬೇಕು ತ್ರೀವರ್ಣ ಧ್ವಜ ಧರಿಸಬೇಕು ಆಚರಿಸಬೇಕು. ಸ್ವಾತಂತ್ರ್ಯ ಬಂದ್ದೀರುವುದು ಸಂಕೇತವಾಗಿದೆ ಅದಕಾರಣ ಪ್ರಥಮಾ ಪ್ರದಾನ ಮಾಂತ್ರಿ ಜವಹಾರಲಾಲ್ ನೇಹರು ತ್ರೀವರ್ಣ ಧ್ವಜ ಹಾರಿಸಿದರು ಅದ ಕಾರಣ ಎಲ್ಲಾರು ಒಪ್ಪಿಕೋಳ್ಳಾಬೇಕು.

LEAVE A REPLY

Please enter your comment!
Please enter your name here

- Advertisment -

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...