Homeಸಿನಿಮಾಕ್ರೀಡೆಏಷ್ಯಾ ಕಪ್ 2022ರಲ್ಲಿ ಭಾರತ - ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್ 2022ರಲ್ಲಿ ಭಾರತ – ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಇದೇ ಆಗಸ್ಟ್ 27 ರಿಂದ ಆರಂಭವಾಗುತ್ತಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿದ್ದು ಆಗಸ್ಟ್ 28 ರಂದು ಪರಸ್ಪರ ಸೆಣಸುತ್ತಿವೆ. ಅಷ್ಟು ಮಾತ್ರವಲ್ಲದೇ 15 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸುವ ಅವಕಾಶವಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ನೇರವಾಗಿ ಆಯ್ಕೆಯಾಗಿವೆ. ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಅದಕ್ಕಾಗಿ ಯುಎಇ, ಹಾಂಗ್‌ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಗಳನ್ನು ಆಡಲಿವೆ. ಆಗಸ್ಟ್ 20 ರಿಂದ ಅರ್ಹತಾ ಪಂದ್ಯಗಳು ನಡೆಯಲಿದ್ದು ಒಂದು ತಂಡ ಆಯ್ಕೆಯಾಗಲಿದೆ.

ಗುಂಪುಗಳು

ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಇದ್ದು ಅರ್ಹತಾ ಗುಂಪಿನಲ್ಲಿ ಆಯ್ಕೆಯಾದ ತಂಡ ಈ ಗುಂಪು ಸೇರಿಕೊಳ್ಳಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಇವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಅರ್ಹತಾ ಸುತ್ತಿನಲ್ಲಿ ಆಯ್ಕೆಯಾದ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 13 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಆಗಸ್ಟ್ 28 ರಂದು ಮೊದಲ ಪಂದ್ಯ ಸೆಣೆಸುವ ಈ ಎರಡು ತಂಡಗಳು ಗ್ರೂಪ್ ಎ ನಲ್ಲಿರುವುದರಿಂದ ಉಳಿದ ದುರ್ಬಲ ತಂಡವನ್ನು ಮಣಿಸಿ ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳು ಮಾತ್ರ ನಮಗೆ ಸಿಗಲಿವೆ.

ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಪಾಕಿಸ್ತಾನ 10 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದಲ್ಲಿ ಎಲ್ಲಾ ಒಗ್ಗಟ್ಟು ಇರಬೇಕಾದರೆ ದೇಶದಲ್ಲಿ ಇರುವರು ಯಾವ ಸಂಘಟನೆಗಳೆ ಆಗಲಿ ಸಂವಿಧಾನಕ್ಕೆ ಗೌರವ ಕೋಡಬೇಕು ತ್ರೀವರ್ಣ ಧ್ವಜ ಧರಿಸಬೇಕು ಆಚರಿಸಬೇಕು. ಸ್ವಾತಂತ್ರ್ಯ ಬಂದ್ದೀರುವುದು ಸಂಕೇತವಾಗಿದೆ ಅದಕಾರಣ ಪ್ರಥಮಾ ಪ್ರದಾನ ಮಾಂತ್ರಿ ಜವಹಾರಲಾಲ್ ನೇಹರು ತ್ರೀವರ್ಣ ಧ್ವಜ ಹಾರಿಸಿದರು ಅದ ಕಾರಣ ಎಲ್ಲಾರು ಒಪ್ಪಿಕೋಳ್ಳಾಬೇಕು.

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...