Homeಸಿನಿಮಾಕ್ರೀಡೆಏಷ್ಯಾ ಕಪ್ 2022ರಲ್ಲಿ ಭಾರತ - ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್ 2022ರಲ್ಲಿ ಭಾರತ – ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಇದೇ ಆಗಸ್ಟ್ 27 ರಿಂದ ಆರಂಭವಾಗುತ್ತಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿದ್ದು ಆಗಸ್ಟ್ 28 ರಂದು ಪರಸ್ಪರ ಸೆಣಸುತ್ತಿವೆ. ಅಷ್ಟು ಮಾತ್ರವಲ್ಲದೇ 15 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸುವ ಅವಕಾಶವಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ನೇರವಾಗಿ ಆಯ್ಕೆಯಾಗಿವೆ. ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಅದಕ್ಕಾಗಿ ಯುಎಇ, ಹಾಂಗ್‌ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಗಳನ್ನು ಆಡಲಿವೆ. ಆಗಸ್ಟ್ 20 ರಿಂದ ಅರ್ಹತಾ ಪಂದ್ಯಗಳು ನಡೆಯಲಿದ್ದು ಒಂದು ತಂಡ ಆಯ್ಕೆಯಾಗಲಿದೆ.

ಗುಂಪುಗಳು

ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಇದ್ದು ಅರ್ಹತಾ ಗುಂಪಿನಲ್ಲಿ ಆಯ್ಕೆಯಾದ ತಂಡ ಈ ಗುಂಪು ಸೇರಿಕೊಳ್ಳಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಇವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಅರ್ಹತಾ ಸುತ್ತಿನಲ್ಲಿ ಆಯ್ಕೆಯಾದ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 13 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಆಗಸ್ಟ್ 28 ರಂದು ಮೊದಲ ಪಂದ್ಯ ಸೆಣೆಸುವ ಈ ಎರಡು ತಂಡಗಳು ಗ್ರೂಪ್ ಎ ನಲ್ಲಿರುವುದರಿಂದ ಉಳಿದ ದುರ್ಬಲ ತಂಡವನ್ನು ಮಣಿಸಿ ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳು ಮಾತ್ರ ನಮಗೆ ಸಿಗಲಿವೆ.

ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಪಾಕಿಸ್ತಾನ 10 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದಲ್ಲಿ ಎಲ್ಲಾ ಒಗ್ಗಟ್ಟು ಇರಬೇಕಾದರೆ ದೇಶದಲ್ಲಿ ಇರುವರು ಯಾವ ಸಂಘಟನೆಗಳೆ ಆಗಲಿ ಸಂವಿಧಾನಕ್ಕೆ ಗೌರವ ಕೋಡಬೇಕು ತ್ರೀವರ್ಣ ಧ್ವಜ ಧರಿಸಬೇಕು ಆಚರಿಸಬೇಕು. ಸ್ವಾತಂತ್ರ್ಯ ಬಂದ್ದೀರುವುದು ಸಂಕೇತವಾಗಿದೆ ಅದಕಾರಣ ಪ್ರಥಮಾ ಪ್ರದಾನ ಮಾಂತ್ರಿ ಜವಹಾರಲಾಲ್ ನೇಹರು ತ್ರೀವರ್ಣ ಧ್ವಜ ಹಾರಿಸಿದರು ಅದ ಕಾರಣ ಎಲ್ಲಾರು ಒಪ್ಪಿಕೋಳ್ಳಾಬೇಕು.

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...