Homeಸಿನಿಮಾಕ್ರೀಡೆಏಷ್ಯಾ ಕಪ್ 2022ರಲ್ಲಿ ಭಾರತ - ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

ಏಷ್ಯಾ ಕಪ್ 2022ರಲ್ಲಿ ಭಾರತ – ಪಾಕ್ ತಂಡಗಳು ಮೂರು ಬಾರಿ ಮುಖಾಮುಖಿಯಾಗಬಹುದು!: ಇಲ್ಲಿದೆ ವಿವರ

- Advertisement -
- Advertisement -

ಬಹು ನಿರೀಕ್ಷಿತ ಟಿ20 ಏಷ್ಯಾ ಕಪ್ ಟೂರ್ನಿ ಇದೇ ಆಗಸ್ಟ್ 27 ರಿಂದ ಆರಂಭವಾಗುತ್ತಿದೆ. ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಎ ಗುಂಪಿನಲ್ಲಿದ್ದು ಆಗಸ್ಟ್ 28 ರಂದು ಪರಸ್ಪರ ಸೆಣಸುತ್ತಿವೆ. ಅಷ್ಟು ಮಾತ್ರವಲ್ಲದೇ 15 ದಿನಗಳ ಕಾಲ ನಡೆಯುವ ಈ ಟೂರ್ನಿಯಲ್ಲಿ ಈ ಎರಡು ತಂಡಗಳು ಪರಸ್ಪರ ಮೂರು ಬಾರಿ ಮುಖಾಮುಖಿಯಾಗುವ ಅವಕಾಶವಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಕ್ರಿಕೆಟ್ ಅಭಿಮಾನಿಗಳು ಭರಪೂರ ಮನರಂಜನೆ ಪಡೆಯಬಹುದಾಗಿದೆ. ಆ ಕುರಿತು ಸಂಕ್ಷಿಪ್ತ ವರದಿ ಇಲ್ಲಿದೆ.

ಭಾಗವಹಿಸುವ ತಂಡಗಳು

ಏಷ್ಯಾ ಕಪ್‌ ಟೂರ್ನಿಯಲ್ಲಿ 6 ತಂಡಗಳಿಗೆ ಭಾಗವಹಿಸುವ ಅವಕಾಶವಿದೆ. ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ನೇರವಾಗಿ ಆಯ್ಕೆಯಾಗಿವೆ. ಇನ್ನೊಂದು ತಂಡಕ್ಕೆ ಮಾತ್ರ ಅವಕಾಶವಿದ್ದು ಅದಕ್ಕಾಗಿ ಯುಎಇ, ಹಾಂಗ್‌ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಗಳನ್ನು ಆಡಲಿವೆ. ಆಗಸ್ಟ್ 20 ರಿಂದ ಅರ್ಹತಾ ಪಂದ್ಯಗಳು ನಡೆಯಲಿದ್ದು ಒಂದು ತಂಡ ಆಯ್ಕೆಯಾಗಲಿದೆ.

ಗುಂಪುಗಳು

ಎ ಮತ್ತು ಬಿ ಎಂದು ವಿಂಗಡಿಸಿದ್ದು ಪ್ರತಿ ಗುಂಪಿನಲ್ಲಿ ತಲಾ ಮೂರು ತಂಡಗಳು ಇರುತ್ತವೆ. ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ಇದ್ದು ಅರ್ಹತಾ ಗುಂಪಿನಲ್ಲಿ ಆಯ್ಕೆಯಾದ ತಂಡ ಈ ಗುಂಪು ಸೇರಿಕೊಳ್ಳಲಿದೆ. ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ಥಾನ ತಂಡಗಳು ಇವೆ.

ಟೂರ್ನಿಯ ವಿಧಾನ

ಗ್ರೂಪ್ ಹಂತದಲ್ಲಿ ತಂಡವೊಂದಕ್ಕೆ ಎರಡು ಪಂದ್ಯಗಳು ಇರುತ್ತದೆ. ಉದಾಹರಣೆಗೆ ಭಾರತವನ್ನು ತೆಗೆದುಕೊಂಡರೆ ಅದು ಪಾಕಿಸ್ತಾನದ ವಿರುದ್ಧ ಮತ್ತು ಅರ್ಹತಾ ಸುತ್ತಿನಲ್ಲಿ ಆಯ್ಕೆಯಾದ ತಂಡದ ವಿರುದ್ಧ ಸೆಣಸುತ್ತದೆ. ಇಲ್ಲಿಂದ ಅಂಕಪಟ್ಟಿಯಲ್ಲಿ ಮೇಲಿನ ಅಂದರೆ ಟಾಪ್ 2 ಎರಡು ಸೂಪರ್ 4 ಹಂತಕ್ಕೆ ತಲುಪುತ್ತವೆ. ಎರಡು ಗುಂಪಿನಿಂದ ಅಂಕಪಟ್ಟಿಯಲ್ಲಿ ಕೊನೆ ಸ್ಥಾನ ಪಡೆದ ತಲಾ ಒಂದೊಂದು ತಂಡ ಟೂರ್ನಿಯಿಂದ ಹೊರಬೀಳುತ್ತವೆ.

ಸೂಪರ್ 4 ಹಂತ

ಎ ಮತ್ತು ಬಿ ಗುಂಪಿನಿಂದ ತಲಾ ಟಾಪ್ ಎರಡರಂತೆ ಒಟ್ಟು ನಾಲ್ಕು ತಂಡಗಳು ಸೂಪರ್ 4 ಹಂತ ತಲುಪುತ್ತವೆ. ಇಲ್ಲಿ ಸೆಮಿಫೈನಲ್ ಇರುವುದಿಲ್ಲ. ಬದಲಿಗೆ ಇಲ್ಲಿ ತಂಡವೊಂದು ಎದುರಾಳಿಗಳ ವಿರುದ್ಧ ಮೂರು ಪಂದ್ಯಗಳನ್ನು ಆಡುತ್ತದೆ. ಇಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಫೈನಲ್‌ ತಲುಪುತ್ತವೆ ಮತ್ತು ಉಳಿದ ಎರಡು ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ.

ಫೈನಲ್

ಸೂಪರ್ 4 ಹಂತದಲ್ಲಿನ ಟಾಪ್ 2 ತಂಡಗಳು ಸೆಪ್ಟಂಬರ್ 13 ರಂದು ಫೈನಲ್‌ನಲ್ಲಿ ಕಣಕ್ಕಿಳಿಯಲಿವೆ.

ಭಾರತ ಮತ್ತು ಪಾಕಿಸ್ತಾನ ಮುಖಾಮುಖಿ

ಗ್ರೂಪ್ ಹಂತದಲ್ಲಿ ಆಗಸ್ಟ್ 28 ರಂದು ಮೊದಲ ಪಂದ್ಯ ಸೆಣೆಸುವ ಈ ಎರಡು ತಂಡಗಳು ಗ್ರೂಪ್ ಎ ನಲ್ಲಿರುವುದರಿಂದ ಉಳಿದ ದುರ್ಬಲ ತಂಡವನ್ನು ಮಣಿಸಿ ಸುಲಭವಾಗಿ ಸೂಪರ್ 4 ಹಂತಕ್ಕೆ ತಲುಪುಲಿವೆ. ಹಾಗಾದಲ್ಲಿ ಸೆಪ್ಟಂಬರ್ 04 ರಂದು ಮತ್ತೆ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೂಪರ್ 4 ಹಂತ ಪಂದ್ಯದಲ್ಲಿ ಮುಖಾಮುಖಿಯಾಗಬಹುದು. ಅಲ್ಲಿ ಗೆದ್ದ ತಂಡ ಉಳಿದ ಪಂದ್ಯಗಳನ್ನು ಗೆದ್ದಲ್ಲಿ ಮತ್ತು ಅಲ್ಲಿ ಸೋತ ತಂಡ ತನ್ನ ಉಳಿದ ಎರಡು ಪಂದ್ಯಗಳಲ್ಲಿ ಇತರ ಸೂಪರ್ 4 ಗೆ ಅರ್ಹತೆ ಪಡೆದ ತಂಡಗಳ ಎದುರು ದೊಡ್ಡ ಅಂತರದಲ್ಲಿ ಜಯಿಸಿದರೆ ಮತ್ತೆ ಸೆಪ್ಟಂಬರ್ 13 ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳನ್ನೆ ನಾವು ಎದುರು ನೋಡುವ ಅವಕಾಶವಿದೆ. ಆದರೆ ಈ ಎರಡೂ ತಂಡಗಳು ಒಂದಕ್ಕಿಂತ ಹೆಚ್ಚು ಅನಿರೀಕ್ಷಿತ ಸೋಲು ಕಂಡಲ್ಲಿ ಮೂರನೇ ಪಂದ್ಯ ನೋಡುವ ಅವಕಾಶ ತಪ್ಪಲಿದೆ. ಆಗ ಎರಡು ಪಂದ್ಯಗಳು ಮಾತ್ರ ನಮಗೆ ಸಿಗಲಿವೆ.

ಕಳೆದ ವರ್ಷ ನಡೆದ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾಗಿದ್ದವು. ಆ ಪಂದ್ಯದಲ್ಲಿ ಅದ್ಭುತ ಆಟ ಪ್ರದರ್ಶಿಸಿದ ಪಾಕಿಸ್ತಾನ 10 ವಿಕೆಟ್‌ಗಳ ಗೆಲುವು ಸಾಧಿಸಿತ್ತು.

ಇದನ್ನೂ ಓದಿ: ವಿಶ್ವದ ಅತ್ಯಂತ ಹೆಚ್ಚು ಜನಸಂಖ್ಯೆ ಹೊಂದಿರುವ ಟಾಪ್ 10 ನಗರಗಳು | ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೇಶದಲ್ಲಿ ಎಲ್ಲಾ ಒಗ್ಗಟ್ಟು ಇರಬೇಕಾದರೆ ದೇಶದಲ್ಲಿ ಇರುವರು ಯಾವ ಸಂಘಟನೆಗಳೆ ಆಗಲಿ ಸಂವಿಧಾನಕ್ಕೆ ಗೌರವ ಕೋಡಬೇಕು ತ್ರೀವರ್ಣ ಧ್ವಜ ಧರಿಸಬೇಕು ಆಚರಿಸಬೇಕು. ಸ್ವಾತಂತ್ರ್ಯ ಬಂದ್ದೀರುವುದು ಸಂಕೇತವಾಗಿದೆ ಅದಕಾರಣ ಪ್ರಥಮಾ ಪ್ರದಾನ ಮಾಂತ್ರಿ ಜವಹಾರಲಾಲ್ ನೇಹರು ತ್ರೀವರ್ಣ ಧ್ವಜ ಹಾರಿಸಿದರು ಅದ ಕಾರಣ ಎಲ್ಲಾರು ಒಪ್ಪಿಕೋಳ್ಳಾಬೇಕು.

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...