Homeಸಿನಿಮಾಕ್ರೀಡೆಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು - ಭಾರತದ ಫೈನಲ್ ಕನಸು ಭಗ್ನ

ಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು – ಭಾರತದ ಫೈನಲ್ ಕನಸು ಭಗ್ನ

- Advertisement -
- Advertisement -

ಏಷ್ಯಾಕಪ್ ಟೂರ್ನಿಯಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತವು ಸೂಪರ್ 4 ಹಂತದಲ್ಲಿ ಸತತ ಎರಡು ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಬುಧವಾರ ರಾತ್ರಿ ನಡೆದ ಪಾಕಿಸ್ತಾನ-ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಪಾಕ್ ಜಯಗಳಿಸುವುದರೊಂದಿಗೆ ಭಾರತವು ಫೈನಲ್ ಪ್ರವೇಶಿಸಲು ಇದ್ದ ಕಡೆಯ ಅವಕಾಶವು ಮುಚ್ಚಿಹೋಗಿದೆ. ಹಾಗಾಗಿ ಭಾರತವು ಇನ್ನೊಂದು ಔಪಚಾರಿಕ ಪಂದ್ಯವನ್ನಷ್ಟೆ ಆಡಿ ಭಾರತಕ್ಕೆ ವಾಪಸ್ ಆಗಬೇಕಿದೆ.

ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಭಾರತ ಪಾಕ್ ಎದುರು 5 ವಿಕೆಟ್ ಗಳ ಸೋಲು ಕಂಡಿತ್ತು. ಎರಡನೇ ಪಂದ್ಯದಲ್ಲಿಯೂ ಸಹ ಶ್ರೀಲಂಕಾ ಎದುರು 6 ವಿಕೆಟ್‌ಗಳ ಸೋಲು ಕಂಡಿತು. ಈ ಎರಡು ಪಂದ್ಯಗಳಲ್ಲಿ ಭಾರತದ ವೇಗದ ಬೌಲರ್‌ಗಳ ಕಳಪೆ ಪ್ರದರ್ಶನ ತಂಡಕ್ಕೆ ಮುಳುವಾಯಿತು.

ಕಡೆಯ ಅವಕಾಶವಾಗಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡವು ಪಾಕಿಸ್ತಾನದ ಎದುರು ಗೆದ್ದಿದ್ದರೆ ಭಾರತಕ್ಕೆ ಫೈನಲ್ ತಲುಪುವ ಅವಕಾಶವಿತ್ತು. ಇಂದಿನ ಪಂದ್ಯದಲ್ಲಿ ಭಾರತವು ಆಫ್ಘಾನಿಸ್ತಾನ ತಂಡದ ಎದುರು ಗೆದ್ದು, ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕ್ ಎದುರು ಗೆದ್ದಿದ್ದರೆ ನೆಟ್ ರನ್ ರೇಟ್ ಆಧಾರದಲ್ಲಿ ಭಾರತ-ಪಾಕಿಸ್ತಾನ-ಆಫ್ಘಾನಿಸ್ತಾನ ತಂಡಗಳು ಫೈನಲ್‌ಗೆ ಪೈಪೋಟಿ ನಡೆಸಬಹುದಿತ್ತು. ಏಕೆಂದರೆ ಸೂಪರ್ 4 ಹಂತದಲ್ಲಿ ಶ್ರೀಲಂಕಾ ಮೂರಕ್ಕೆ ಮೂರು ಗೆದ್ದಂತೆ ಆಗುತ್ತಿತ್ತು. ಆದರೆ ಪಾಕಿಸ್ತಾನ ಗೆಲುವು ಸಾಧಿಸುವುದರೊಂದಿಗೆ ಶ್ರೀಲಂಕಾದೊಂದಿಗೆ ಫೈನಲ್‌ನಲ್ಲಿ ಕಾದಾಡಲಿದೆ. ಭಾರತ ಮತ್ತು ಆಫ್ಘಾನಿಸ್ತಾನ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಇಂದು ಸಂಜೆ ನಡೆಯುವ ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ತಂಡದ ಎದುರು ಕೊನೆಯ ಔಪಚಾರಿಕ ಪಂದ್ಯ ಆಡಲಿದೆ. ಇಂದಿನ ಗೆಲುವು ಇನ್ನ ಎರಡು ತಿಂಗಳಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಗೆ ಸ್ವಲ್ಪ ವಿಶ್ವಾಸ ಕೊಡಬಹುದಾಗಿದೆ. ಸೆಪ್ಟಂಬರ್ 11 ರಂದು ಫೈನಲ್ ಪಂದ್ಯವು ಶ್ರೀಲಂಕಾ-ಪಾಕಿಸ್ತಾನದ ನಡುವೆ ನಡೆಯಲಿದೆ.

ಇದನ್ನೂ ಓದಿ : ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...