Homeಸಿನಿಮಾಕ್ರೀಡೆಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು - ಭಾರತದ ಫೈನಲ್ ಕನಸು ಭಗ್ನ

ಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು – ಭಾರತದ ಫೈನಲ್ ಕನಸು ಭಗ್ನ

- Advertisement -
- Advertisement -

ಏಷ್ಯಾಕಪ್ ಟೂರ್ನಿಯಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತವು ಸೂಪರ್ 4 ಹಂತದಲ್ಲಿ ಸತತ ಎರಡು ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಬುಧವಾರ ರಾತ್ರಿ ನಡೆದ ಪಾಕಿಸ್ತಾನ-ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಪಾಕ್ ಜಯಗಳಿಸುವುದರೊಂದಿಗೆ ಭಾರತವು ಫೈನಲ್ ಪ್ರವೇಶಿಸಲು ಇದ್ದ ಕಡೆಯ ಅವಕಾಶವು ಮುಚ್ಚಿಹೋಗಿದೆ. ಹಾಗಾಗಿ ಭಾರತವು ಇನ್ನೊಂದು ಔಪಚಾರಿಕ ಪಂದ್ಯವನ್ನಷ್ಟೆ ಆಡಿ ಭಾರತಕ್ಕೆ ವಾಪಸ್ ಆಗಬೇಕಿದೆ.

ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಭಾರತ ಪಾಕ್ ಎದುರು 5 ವಿಕೆಟ್ ಗಳ ಸೋಲು ಕಂಡಿತ್ತು. ಎರಡನೇ ಪಂದ್ಯದಲ್ಲಿಯೂ ಸಹ ಶ್ರೀಲಂಕಾ ಎದುರು 6 ವಿಕೆಟ್‌ಗಳ ಸೋಲು ಕಂಡಿತು. ಈ ಎರಡು ಪಂದ್ಯಗಳಲ್ಲಿ ಭಾರತದ ವೇಗದ ಬೌಲರ್‌ಗಳ ಕಳಪೆ ಪ್ರದರ್ಶನ ತಂಡಕ್ಕೆ ಮುಳುವಾಯಿತು.

ಕಡೆಯ ಅವಕಾಶವಾಗಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡವು ಪಾಕಿಸ್ತಾನದ ಎದುರು ಗೆದ್ದಿದ್ದರೆ ಭಾರತಕ್ಕೆ ಫೈನಲ್ ತಲುಪುವ ಅವಕಾಶವಿತ್ತು. ಇಂದಿನ ಪಂದ್ಯದಲ್ಲಿ ಭಾರತವು ಆಫ್ಘಾನಿಸ್ತಾನ ತಂಡದ ಎದುರು ಗೆದ್ದು, ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕ್ ಎದುರು ಗೆದ್ದಿದ್ದರೆ ನೆಟ್ ರನ್ ರೇಟ್ ಆಧಾರದಲ್ಲಿ ಭಾರತ-ಪಾಕಿಸ್ತಾನ-ಆಫ್ಘಾನಿಸ್ತಾನ ತಂಡಗಳು ಫೈನಲ್‌ಗೆ ಪೈಪೋಟಿ ನಡೆಸಬಹುದಿತ್ತು. ಏಕೆಂದರೆ ಸೂಪರ್ 4 ಹಂತದಲ್ಲಿ ಶ್ರೀಲಂಕಾ ಮೂರಕ್ಕೆ ಮೂರು ಗೆದ್ದಂತೆ ಆಗುತ್ತಿತ್ತು. ಆದರೆ ಪಾಕಿಸ್ತಾನ ಗೆಲುವು ಸಾಧಿಸುವುದರೊಂದಿಗೆ ಶ್ರೀಲಂಕಾದೊಂದಿಗೆ ಫೈನಲ್‌ನಲ್ಲಿ ಕಾದಾಡಲಿದೆ. ಭಾರತ ಮತ್ತು ಆಫ್ಘಾನಿಸ್ತಾನ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಇಂದು ಸಂಜೆ ನಡೆಯುವ ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ತಂಡದ ಎದುರು ಕೊನೆಯ ಔಪಚಾರಿಕ ಪಂದ್ಯ ಆಡಲಿದೆ. ಇಂದಿನ ಗೆಲುವು ಇನ್ನ ಎರಡು ತಿಂಗಳಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಗೆ ಸ್ವಲ್ಪ ವಿಶ್ವಾಸ ಕೊಡಬಹುದಾಗಿದೆ. ಸೆಪ್ಟಂಬರ್ 11 ರಂದು ಫೈನಲ್ ಪಂದ್ಯವು ಶ್ರೀಲಂಕಾ-ಪಾಕಿಸ್ತಾನದ ನಡುವೆ ನಡೆಯಲಿದೆ.

ಇದನ್ನೂ ಓದಿ : ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...