Homeಸಿನಿಮಾಕ್ರೀಡೆಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು - ಭಾರತದ ಫೈನಲ್ ಕನಸು ಭಗ್ನ

ಏಷ್ಯಾಕಪ್: ಪಾಕ್ ಎದುರು ಆಫ್ಘಾನಿಸ್ತಾನಕ್ಕೆ ಸೋಲು – ಭಾರತದ ಫೈನಲ್ ಕನಸು ಭಗ್ನ

- Advertisement -
- Advertisement -

ಏಷ್ಯಾಕಪ್ ಟೂರ್ನಿಯಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಭಾರತವು ಸೂಪರ್ 4 ಹಂತದಲ್ಲಿ ಸತತ ಎರಡು ಸೋಲಿನೊಂದಿಗೆ ಟೂರ್ನಿಯಿಂದ ಹೊರಬಿದ್ದಿದೆ. ಬುಧವಾರ ರಾತ್ರಿ ನಡೆದ ಪಾಕಿಸ್ತಾನ-ಆಫ್ಘಾನಿಸ್ತಾನ ಎದುರಿನ ಪಂದ್ಯದಲ್ಲಿ ಕೊನೆಯ ಓವರ್‌ನಲ್ಲಿ ಪಾಕ್ ಜಯಗಳಿಸುವುದರೊಂದಿಗೆ ಭಾರತವು ಫೈನಲ್ ಪ್ರವೇಶಿಸಲು ಇದ್ದ ಕಡೆಯ ಅವಕಾಶವು ಮುಚ್ಚಿಹೋಗಿದೆ. ಹಾಗಾಗಿ ಭಾರತವು ಇನ್ನೊಂದು ಔಪಚಾರಿಕ ಪಂದ್ಯವನ್ನಷ್ಟೆ ಆಡಿ ಭಾರತಕ್ಕೆ ವಾಪಸ್ ಆಗಬೇಕಿದೆ.

ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಭಾರತ ಪಾಕ್ ಎದುರು 5 ವಿಕೆಟ್ ಗಳ ಸೋಲು ಕಂಡಿತ್ತು. ಎರಡನೇ ಪಂದ್ಯದಲ್ಲಿಯೂ ಸಹ ಶ್ರೀಲಂಕಾ ಎದುರು 6 ವಿಕೆಟ್‌ಗಳ ಸೋಲು ಕಂಡಿತು. ಈ ಎರಡು ಪಂದ್ಯಗಳಲ್ಲಿ ಭಾರತದ ವೇಗದ ಬೌಲರ್‌ಗಳ ಕಳಪೆ ಪ್ರದರ್ಶನ ತಂಡಕ್ಕೆ ಮುಳುವಾಯಿತು.

ಕಡೆಯ ಅವಕಾಶವಾಗಿ ಬುಧವಾರ ರಾತ್ರಿ ನಡೆದ ಪಂದ್ಯದಲ್ಲಿ ಆಫ್ಘಾನಿಸ್ತಾನ ತಂಡವು ಪಾಕಿಸ್ತಾನದ ಎದುರು ಗೆದ್ದಿದ್ದರೆ ಭಾರತಕ್ಕೆ ಫೈನಲ್ ತಲುಪುವ ಅವಕಾಶವಿತ್ತು. ಇಂದಿನ ಪಂದ್ಯದಲ್ಲಿ ಭಾರತವು ಆಫ್ಘಾನಿಸ್ತಾನ ತಂಡದ ಎದುರು ಗೆದ್ದು, ಕೊನೆಯ ಪಂದ್ಯದಲ್ಲಿ ಶ್ರೀಲಂಕಾ ತಂಡವು ಪಾಕ್ ಎದುರು ಗೆದ್ದಿದ್ದರೆ ನೆಟ್ ರನ್ ರೇಟ್ ಆಧಾರದಲ್ಲಿ ಭಾರತ-ಪಾಕಿಸ್ತಾನ-ಆಫ್ಘಾನಿಸ್ತಾನ ತಂಡಗಳು ಫೈನಲ್‌ಗೆ ಪೈಪೋಟಿ ನಡೆಸಬಹುದಿತ್ತು. ಏಕೆಂದರೆ ಸೂಪರ್ 4 ಹಂತದಲ್ಲಿ ಶ್ರೀಲಂಕಾ ಮೂರಕ್ಕೆ ಮೂರು ಗೆದ್ದಂತೆ ಆಗುತ್ತಿತ್ತು. ಆದರೆ ಪಾಕಿಸ್ತಾನ ಗೆಲುವು ಸಾಧಿಸುವುದರೊಂದಿಗೆ ಶ್ರೀಲಂಕಾದೊಂದಿಗೆ ಫೈನಲ್‌ನಲ್ಲಿ ಕಾದಾಡಲಿದೆ. ಭಾರತ ಮತ್ತು ಆಫ್ಘಾನಿಸ್ತಾನ ತಂಡಗಳು ಟೂರ್ನಿಯಿಂದ ಹೊರಬಿದ್ದಿವೆ.

ಇಂದು ಸಂಜೆ ನಡೆಯುವ ಪಂದ್ಯದಲ್ಲಿ ಭಾರತ ಆಫ್ಘಾನಿಸ್ತಾನ ತಂಡದ ಎದುರು ಕೊನೆಯ ಔಪಚಾರಿಕ ಪಂದ್ಯ ಆಡಲಿದೆ. ಇಂದಿನ ಗೆಲುವು ಇನ್ನ ಎರಡು ತಿಂಗಳಲ್ಲಿ ನಡೆಯುವ ಟಿ20 ವಿಶ್ವಕಪ್ ಟೂರ್ನಿಗೆ ಸ್ವಲ್ಪ ವಿಶ್ವಾಸ ಕೊಡಬಹುದಾಗಿದೆ. ಸೆಪ್ಟಂಬರ್ 11 ರಂದು ಫೈನಲ್ ಪಂದ್ಯವು ಶ್ರೀಲಂಕಾ-ಪಾಕಿಸ್ತಾನದ ನಡುವೆ ನಡೆಯಲಿದೆ.

ಇದನ್ನೂ ಓದಿ : ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...