Homeಸಿನಿಮಾಕ್ರೀಡೆಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

ಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

- Advertisement -
- Advertisement -

ಏಷ್ಯಾ ಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಮಹತ್ವದ  ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು ಭಾರತ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ಫೈನಲ್ ತಲುಪುವ ಕನಸಿಗೆ ಜೀವ ಬರಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಮಾತ್ರವಲ್ಲ ದೊಡ್ಡ ಅಂತರದ ಗೆಲುವು ಬೇಕಾಗಿದೆ. ಇಲ್ಲದಿದ್ದಲ್ಲಿ ಟೂರ್ನಿಯಿಂದ ಹೊರಬೀಳುವ ಒತ್ತಡದಲ್ಲಿದೆ ಭಾರತ ತಂಡ.

ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳು

ಏಷ್ಯಾ ಕಪ್‌ ಟೂರ್ನಿಯ ನಿಯಮದ ಪ್ರಕಾರ ಸೂಪರ್ 4 ಹಂತದಲ್ಲಿ 4 ತಂಡಗಳಲ್ಲಿ ಮೊದಲ ಎರಡು ಸ್ಥಾನ ಗಳಿಸಿದ ತಂಡಗಳು ನೇರವಾಗಿ ಫೈನಲ್‌ಗೆ ತಲುಪುತ್ತವೆ. ಭಾರತ ತಂಡವು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿದೆ. ಈಗ ಅದು ಫೈನಲ್ ಪ್ರವೇಶಿಸಬೇಕಾದರೆ ತನ್ನ ಉಳಿದ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಒಂದು ವೇಳೆ ಸಣ್ಣ ಅಂತರದಲ್ಲಿ ಗೆದ್ದರೆ ಉಳಿದ ತಂಡಗಳ ಸೋಲು-ಗೆಲುವುಗಳನ್ನು ನೋಡುತ್ತಾ ಅದೃ‍ಷ್ಟ ಪರೀಕ್ಷೆ ಮಾಡಬೇಕಿದೆ. ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳ ಈ ಕೆಳಗಿನಂತಿವೆ.

ಸಾಧ್ಯತೆ 1

ಭಾರತ ತಂಡವು ಇಂದು ಶ್ರೀಲಂಕಾ ವಿರುದ್ಧ ಮತ್ತು ಸೆಪ್ಟಂಬರ್ 8 ರಂದು ಆಫ್ಘಾನಿಸ್ತಾನ ತಂಡದ ಎದುರು ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಆನಂತರ ಪಾಕಿಸ್ತಾನವು ಶ್ರೀಲಂಕಾ ತಂಡವನ್ನು ಸೋಲಿಸಿದರೆ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ತಂಡಗಳರೆಡು ತಲಾ ಎರಡು ಸೋಲುಗಳೊಂದಿಗೆ ಟೂರ್ನಿಯಿಂದ ಹೊರಬೀಳುತ್ತವೆ. ಪಾಕಿಸ್ತಾನ ಮತ್ತು ಭಾರತ ಫೈನಲ್ ಪ್ರವೇಶಿಸುತ್ತವೆ. ಒಂದು ವೇಳೆ ಪಾಕಿಸ್ತಾನ ತನ್ನ ಮುಂದಿನ ಎರಡು ಪಂದ್ಯಗಳನ್ನು ಸೋತರೆ ಅದು ಟೂರ್ನಿಯಿಂದ ಹೊರಬೀಳುತ್ತದೆ. ಭಾರತದ ಸಾಧ್ಯತೆ ತೆರೆದುಕೊಳ್ಳುತ್ತದೆ.

ಸಾಧ್ಯತೆ 2

ಶ್ರೀಲಂಕಾ ತಂಡವು ಭಾರತದ ಎದುರು ಸೋತು ಮತ್ತು ಪಾಕಿಸ್ತಾನದ ಎದುರು ಗೆದ್ದರೆ ಆಗ ನೆಟ್ ರನ್ ರೇಟ್ ಲೆಕ್ಕಕ್ಕೆ ಬರುತ್ತದೆ. ಏಕೆಂದರೆ ಆಗ ಪಾಕಿಸ್ತಾನ, ಭಾರತ ಮತ್ತು ಶ್ರೀಲಂಕಾ ಮೂರು ತಂಡಗಳು ಸಹ ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿರುತ್ತವೆ. ಹಾಗಾಗಿ ಭಾರತವು ಮುಂದಿನ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿದೆ ಮತ್ತು ತನ್ನ ನೆಟ್ ರನ್‌ ರೇಟ್ ಅನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.

ಸದ್ಯ ಭಾರತದ ನೆಟ್ ರನ್‌ರೇಟ್ -0.126 ಇದೆ. ಶ್ರೀಲಂಕಾ ತಂಡವು +0.589 ಮತ್ತು ಪಾಕಿಸ್ತಾನ ತಂಡವು +0.126 ರನ್ ರೇಟ್ ಹೊಂದಿದೆ. ಆಫ್ಘಾನಿಸ್ತಾನವು -0.589 ನೆಟ್ ರನ್ ರೇಟ್ ಹೊಂದಿದೆ. ಹಾಗಾಗಿ ಅದಕ್ಕೆ ಸಾಧ್ಯತೆಗಳು ಕಡಿಮೆ ಇವೆ.

ಶ್ರೀಲಂಕಾ ತಂಡವು ಸೂಪರ್ 4 ಹಂತದಲ್ಲಿ ಆಫ್ಘಾನಿಸ್ತಾನ ತಂಡದ ಎದುರು ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಹಾಗಾಗಿ ಇಂದಿನ ಪಂದ್ಯವು ಮಹತ್ವ ಪಡೆದಿದೆ.

ಇದನ್ನೂ ಓದಿ: ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...