Homeಸಿನಿಮಾಕ್ರೀಡೆಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

ಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

- Advertisement -
- Advertisement -

ಏಷ್ಯಾ ಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಮಹತ್ವದ  ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು ಭಾರತ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ಫೈನಲ್ ತಲುಪುವ ಕನಸಿಗೆ ಜೀವ ಬರಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಮಾತ್ರವಲ್ಲ ದೊಡ್ಡ ಅಂತರದ ಗೆಲುವು ಬೇಕಾಗಿದೆ. ಇಲ್ಲದಿದ್ದಲ್ಲಿ ಟೂರ್ನಿಯಿಂದ ಹೊರಬೀಳುವ ಒತ್ತಡದಲ್ಲಿದೆ ಭಾರತ ತಂಡ.

ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳು

ಏಷ್ಯಾ ಕಪ್‌ ಟೂರ್ನಿಯ ನಿಯಮದ ಪ್ರಕಾರ ಸೂಪರ್ 4 ಹಂತದಲ್ಲಿ 4 ತಂಡಗಳಲ್ಲಿ ಮೊದಲ ಎರಡು ಸ್ಥಾನ ಗಳಿಸಿದ ತಂಡಗಳು ನೇರವಾಗಿ ಫೈನಲ್‌ಗೆ ತಲುಪುತ್ತವೆ. ಭಾರತ ತಂಡವು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿದೆ. ಈಗ ಅದು ಫೈನಲ್ ಪ್ರವೇಶಿಸಬೇಕಾದರೆ ತನ್ನ ಉಳಿದ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಒಂದು ವೇಳೆ ಸಣ್ಣ ಅಂತರದಲ್ಲಿ ಗೆದ್ದರೆ ಉಳಿದ ತಂಡಗಳ ಸೋಲು-ಗೆಲುವುಗಳನ್ನು ನೋಡುತ್ತಾ ಅದೃ‍ಷ್ಟ ಪರೀಕ್ಷೆ ಮಾಡಬೇಕಿದೆ. ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳ ಈ ಕೆಳಗಿನಂತಿವೆ.

ಸಾಧ್ಯತೆ 1

ಭಾರತ ತಂಡವು ಇಂದು ಶ್ರೀಲಂಕಾ ವಿರುದ್ಧ ಮತ್ತು ಸೆಪ್ಟಂಬರ್ 8 ರಂದು ಆಫ್ಘಾನಿಸ್ತಾನ ತಂಡದ ಎದುರು ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಆನಂತರ ಪಾಕಿಸ್ತಾನವು ಶ್ರೀಲಂಕಾ ತಂಡವನ್ನು ಸೋಲಿಸಿದರೆ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ತಂಡಗಳರೆಡು ತಲಾ ಎರಡು ಸೋಲುಗಳೊಂದಿಗೆ ಟೂರ್ನಿಯಿಂದ ಹೊರಬೀಳುತ್ತವೆ. ಪಾಕಿಸ್ತಾನ ಮತ್ತು ಭಾರತ ಫೈನಲ್ ಪ್ರವೇಶಿಸುತ್ತವೆ. ಒಂದು ವೇಳೆ ಪಾಕಿಸ್ತಾನ ತನ್ನ ಮುಂದಿನ ಎರಡು ಪಂದ್ಯಗಳನ್ನು ಸೋತರೆ ಅದು ಟೂರ್ನಿಯಿಂದ ಹೊರಬೀಳುತ್ತದೆ. ಭಾರತದ ಸಾಧ್ಯತೆ ತೆರೆದುಕೊಳ್ಳುತ್ತದೆ.

ಸಾಧ್ಯತೆ 2

ಶ್ರೀಲಂಕಾ ತಂಡವು ಭಾರತದ ಎದುರು ಸೋತು ಮತ್ತು ಪಾಕಿಸ್ತಾನದ ಎದುರು ಗೆದ್ದರೆ ಆಗ ನೆಟ್ ರನ್ ರೇಟ್ ಲೆಕ್ಕಕ್ಕೆ ಬರುತ್ತದೆ. ಏಕೆಂದರೆ ಆಗ ಪಾಕಿಸ್ತಾನ, ಭಾರತ ಮತ್ತು ಶ್ರೀಲಂಕಾ ಮೂರು ತಂಡಗಳು ಸಹ ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿರುತ್ತವೆ. ಹಾಗಾಗಿ ಭಾರತವು ಮುಂದಿನ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿದೆ ಮತ್ತು ತನ್ನ ನೆಟ್ ರನ್‌ ರೇಟ್ ಅನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.

ಸದ್ಯ ಭಾರತದ ನೆಟ್ ರನ್‌ರೇಟ್ -0.126 ಇದೆ. ಶ್ರೀಲಂಕಾ ತಂಡವು +0.589 ಮತ್ತು ಪಾಕಿಸ್ತಾನ ತಂಡವು +0.126 ರನ್ ರೇಟ್ ಹೊಂದಿದೆ. ಆಫ್ಘಾನಿಸ್ತಾನವು -0.589 ನೆಟ್ ರನ್ ರೇಟ್ ಹೊಂದಿದೆ. ಹಾಗಾಗಿ ಅದಕ್ಕೆ ಸಾಧ್ಯತೆಗಳು ಕಡಿಮೆ ಇವೆ.

ಶ್ರೀಲಂಕಾ ತಂಡವು ಸೂಪರ್ 4 ಹಂತದಲ್ಲಿ ಆಫ್ಘಾನಿಸ್ತಾನ ತಂಡದ ಎದುರು ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಹಾಗಾಗಿ ಇಂದಿನ ಪಂದ್ಯವು ಮಹತ್ವ ಪಡೆದಿದೆ.

ಇದನ್ನೂ ಓದಿ: ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...