Homeಸಿನಿಮಾಕ್ರೀಡೆಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

ಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

- Advertisement -
- Advertisement -

ಏಷ್ಯಾ ಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಮಹತ್ವದ  ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು ಭಾರತ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ಫೈನಲ್ ತಲುಪುವ ಕನಸಿಗೆ ಜೀವ ಬರಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಮಾತ್ರವಲ್ಲ ದೊಡ್ಡ ಅಂತರದ ಗೆಲುವು ಬೇಕಾಗಿದೆ. ಇಲ್ಲದಿದ್ದಲ್ಲಿ ಟೂರ್ನಿಯಿಂದ ಹೊರಬೀಳುವ ಒತ್ತಡದಲ್ಲಿದೆ ಭಾರತ ತಂಡ.

ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳು

ಏಷ್ಯಾ ಕಪ್‌ ಟೂರ್ನಿಯ ನಿಯಮದ ಪ್ರಕಾರ ಸೂಪರ್ 4 ಹಂತದಲ್ಲಿ 4 ತಂಡಗಳಲ್ಲಿ ಮೊದಲ ಎರಡು ಸ್ಥಾನ ಗಳಿಸಿದ ತಂಡಗಳು ನೇರವಾಗಿ ಫೈನಲ್‌ಗೆ ತಲುಪುತ್ತವೆ. ಭಾರತ ತಂಡವು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿದೆ. ಈಗ ಅದು ಫೈನಲ್ ಪ್ರವೇಶಿಸಬೇಕಾದರೆ ತನ್ನ ಉಳಿದ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಒಂದು ವೇಳೆ ಸಣ್ಣ ಅಂತರದಲ್ಲಿ ಗೆದ್ದರೆ ಉಳಿದ ತಂಡಗಳ ಸೋಲು-ಗೆಲುವುಗಳನ್ನು ನೋಡುತ್ತಾ ಅದೃ‍ಷ್ಟ ಪರೀಕ್ಷೆ ಮಾಡಬೇಕಿದೆ. ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳ ಈ ಕೆಳಗಿನಂತಿವೆ.

ಸಾಧ್ಯತೆ 1

ಭಾರತ ತಂಡವು ಇಂದು ಶ್ರೀಲಂಕಾ ವಿರುದ್ಧ ಮತ್ತು ಸೆಪ್ಟಂಬರ್ 8 ರಂದು ಆಫ್ಘಾನಿಸ್ತಾನ ತಂಡದ ಎದುರು ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಆನಂತರ ಪಾಕಿಸ್ತಾನವು ಶ್ರೀಲಂಕಾ ತಂಡವನ್ನು ಸೋಲಿಸಿದರೆ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ತಂಡಗಳರೆಡು ತಲಾ ಎರಡು ಸೋಲುಗಳೊಂದಿಗೆ ಟೂರ್ನಿಯಿಂದ ಹೊರಬೀಳುತ್ತವೆ. ಪಾಕಿಸ್ತಾನ ಮತ್ತು ಭಾರತ ಫೈನಲ್ ಪ್ರವೇಶಿಸುತ್ತವೆ. ಒಂದು ವೇಳೆ ಪಾಕಿಸ್ತಾನ ತನ್ನ ಮುಂದಿನ ಎರಡು ಪಂದ್ಯಗಳನ್ನು ಸೋತರೆ ಅದು ಟೂರ್ನಿಯಿಂದ ಹೊರಬೀಳುತ್ತದೆ. ಭಾರತದ ಸಾಧ್ಯತೆ ತೆರೆದುಕೊಳ್ಳುತ್ತದೆ.

ಸಾಧ್ಯತೆ 2

ಶ್ರೀಲಂಕಾ ತಂಡವು ಭಾರತದ ಎದುರು ಸೋತು ಮತ್ತು ಪಾಕಿಸ್ತಾನದ ಎದುರು ಗೆದ್ದರೆ ಆಗ ನೆಟ್ ರನ್ ರೇಟ್ ಲೆಕ್ಕಕ್ಕೆ ಬರುತ್ತದೆ. ಏಕೆಂದರೆ ಆಗ ಪಾಕಿಸ್ತಾನ, ಭಾರತ ಮತ್ತು ಶ್ರೀಲಂಕಾ ಮೂರು ತಂಡಗಳು ಸಹ ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿರುತ್ತವೆ. ಹಾಗಾಗಿ ಭಾರತವು ಮುಂದಿನ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿದೆ ಮತ್ತು ತನ್ನ ನೆಟ್ ರನ್‌ ರೇಟ್ ಅನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.

ಸದ್ಯ ಭಾರತದ ನೆಟ್ ರನ್‌ರೇಟ್ -0.126 ಇದೆ. ಶ್ರೀಲಂಕಾ ತಂಡವು +0.589 ಮತ್ತು ಪಾಕಿಸ್ತಾನ ತಂಡವು +0.126 ರನ್ ರೇಟ್ ಹೊಂದಿದೆ. ಆಫ್ಘಾನಿಸ್ತಾನವು -0.589 ನೆಟ್ ರನ್ ರೇಟ್ ಹೊಂದಿದೆ. ಹಾಗಾಗಿ ಅದಕ್ಕೆ ಸಾಧ್ಯತೆಗಳು ಕಡಿಮೆ ಇವೆ.

ಶ್ರೀಲಂಕಾ ತಂಡವು ಸೂಪರ್ 4 ಹಂತದಲ್ಲಿ ಆಫ್ಘಾನಿಸ್ತಾನ ತಂಡದ ಎದುರು ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಹಾಗಾಗಿ ಇಂದಿನ ಪಂದ್ಯವು ಮಹತ್ವ ಪಡೆದಿದೆ.

ಇದನ್ನೂ ಓದಿ: ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...