Homeಸಿನಿಮಾಕ್ರೀಡೆಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

ಏಷ್ಯಾ ಕಪ್: ಇಂದು ಶ್ರೀಲಂಕಾ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರಷ್ಟೆ ಭಾರತದ ಫೈನಲ್ ಕನಸಿಗೆ ಜೀವ

- Advertisement -
- Advertisement -

ಏಷ್ಯಾ ಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಮಹತ್ವದ  ಪಂದ್ಯ ಇಂದು ದುಬೈನಲ್ಲಿ ನಡೆಯಲಿದ್ದು ಭಾರತ ತಂಡವು ಶ್ರೀಲಂಕಾ ವಿರುದ್ಧ ಕಣಕ್ಕಿಳಿಯಲಿದೆ. ಭಾರತ ಫೈನಲ್ ತಲುಪುವ ಕನಸಿಗೆ ಜೀವ ಬರಬೇಕಾದರೆ ಇಂದಿನ ಪಂದ್ಯದಲ್ಲಿ ಗೆಲುವು ಮಾತ್ರವಲ್ಲ ದೊಡ್ಡ ಅಂತರದ ಗೆಲುವು ಬೇಕಾಗಿದೆ. ಇಲ್ಲದಿದ್ದಲ್ಲಿ ಟೂರ್ನಿಯಿಂದ ಹೊರಬೀಳುವ ಒತ್ತಡದಲ್ಲಿದೆ ಭಾರತ ತಂಡ.

ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳು

ಏಷ್ಯಾ ಕಪ್‌ ಟೂರ್ನಿಯ ನಿಯಮದ ಪ್ರಕಾರ ಸೂಪರ್ 4 ಹಂತದಲ್ಲಿ 4 ತಂಡಗಳಲ್ಲಿ ಮೊದಲ ಎರಡು ಸ್ಥಾನ ಗಳಿಸಿದ ತಂಡಗಳು ನೇರವಾಗಿ ಫೈನಲ್‌ಗೆ ತಲುಪುತ್ತವೆ. ಭಾರತ ತಂಡವು ಸೂಪರ್ 4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ಎದುರು ಸೋಲು ಕಂಡಿದೆ. ಈಗ ಅದು ಫೈನಲ್ ಪ್ರವೇಶಿಸಬೇಕಾದರೆ ತನ್ನ ಉಳಿದ 2 ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಒಂದು ವೇಳೆ ಸಣ್ಣ ಅಂತರದಲ್ಲಿ ಗೆದ್ದರೆ ಉಳಿದ ತಂಡಗಳ ಸೋಲು-ಗೆಲುವುಗಳನ್ನು ನೋಡುತ್ತಾ ಅದೃ‍ಷ್ಟ ಪರೀಕ್ಷೆ ಮಾಡಬೇಕಿದೆ. ಭಾರತ ಫೈನಲ್ ತಲುಪಲು ಇರುವ ಸಾಧ್ಯತೆಗಳ ಈ ಕೆಳಗಿನಂತಿವೆ.

ಸಾಧ್ಯತೆ 1

ಭಾರತ ತಂಡವು ಇಂದು ಶ್ರೀಲಂಕಾ ವಿರುದ್ಧ ಮತ್ತು ಸೆಪ್ಟಂಬರ್ 8 ರಂದು ಆಫ್ಘಾನಿಸ್ತಾನ ತಂಡದ ಎದುರು ದೊಡ್ಡ ಅಂತರದಲ್ಲಿ ಗೆಲ್ಲಬೇಕು. ಆನಂತರ ಪಾಕಿಸ್ತಾನವು ಶ್ರೀಲಂಕಾ ತಂಡವನ್ನು ಸೋಲಿಸಿದರೆ ಶ್ರೀಲಂಕಾ ಮತ್ತು ಆಫ್ಘಾನಿಸ್ತಾನ ತಂಡಗಳರೆಡು ತಲಾ ಎರಡು ಸೋಲುಗಳೊಂದಿಗೆ ಟೂರ್ನಿಯಿಂದ ಹೊರಬೀಳುತ್ತವೆ. ಪಾಕಿಸ್ತಾನ ಮತ್ತು ಭಾರತ ಫೈನಲ್ ಪ್ರವೇಶಿಸುತ್ತವೆ. ಒಂದು ವೇಳೆ ಪಾಕಿಸ್ತಾನ ತನ್ನ ಮುಂದಿನ ಎರಡು ಪಂದ್ಯಗಳನ್ನು ಸೋತರೆ ಅದು ಟೂರ್ನಿಯಿಂದ ಹೊರಬೀಳುತ್ತದೆ. ಭಾರತದ ಸಾಧ್ಯತೆ ತೆರೆದುಕೊಳ್ಳುತ್ತದೆ.

ಸಾಧ್ಯತೆ 2

ಶ್ರೀಲಂಕಾ ತಂಡವು ಭಾರತದ ಎದುರು ಸೋತು ಮತ್ತು ಪಾಕಿಸ್ತಾನದ ಎದುರು ಗೆದ್ದರೆ ಆಗ ನೆಟ್ ರನ್ ರೇಟ್ ಲೆಕ್ಕಕ್ಕೆ ಬರುತ್ತದೆ. ಏಕೆಂದರೆ ಆಗ ಪಾಕಿಸ್ತಾನ, ಭಾರತ ಮತ್ತು ಶ್ರೀಲಂಕಾ ಮೂರು ತಂಡಗಳು ಸಹ ತಲಾ ಎರಡೆರಡು ಪಂದ್ಯಗಳನ್ನು ಗೆದ್ದಿರುತ್ತವೆ. ಹಾಗಾಗಿ ಭಾರತವು ಮುಂದಿನ ಪಂದ್ಯಗಳನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಾಗಿದೆ ಮತ್ತು ತನ್ನ ನೆಟ್ ರನ್‌ ರೇಟ್ ಅನ್ನು ಹೆಚ್ಚಿಸಿಕೊಳ್ಳಬೇಕಾಗಿದೆ.

ಸದ್ಯ ಭಾರತದ ನೆಟ್ ರನ್‌ರೇಟ್ -0.126 ಇದೆ. ಶ್ರೀಲಂಕಾ ತಂಡವು +0.589 ಮತ್ತು ಪಾಕಿಸ್ತಾನ ತಂಡವು +0.126 ರನ್ ರೇಟ್ ಹೊಂದಿದೆ. ಆಫ್ಘಾನಿಸ್ತಾನವು -0.589 ನೆಟ್ ರನ್ ರೇಟ್ ಹೊಂದಿದೆ. ಹಾಗಾಗಿ ಅದಕ್ಕೆ ಸಾಧ್ಯತೆಗಳು ಕಡಿಮೆ ಇವೆ.

ಶ್ರೀಲಂಕಾ ತಂಡವು ಸೂಪರ್ 4 ಹಂತದಲ್ಲಿ ಆಫ್ಘಾನಿಸ್ತಾನ ತಂಡದ ಎದುರು ಗೆದ್ದು ವಿಶ್ವಾಸ ಹೆಚ್ಚಿಸಿಕೊಂಡಿದೆ. ಹಾಗಾಗಿ ಇಂದಿನ ಪಂದ್ಯವು ಮಹತ್ವ ಪಡೆದಿದೆ.

ಇದನ್ನೂ ಓದಿ: ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...