Homeಅಂತರಾಷ್ಟ್ರೀಯಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

- Advertisement -
- Advertisement -

ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದ ಭಾರತ ತಂಡ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದೆ. ಹಾಗಾಗಿ, ಟೀಮ್ ಇಂಡಿಯಾಕ್ಕೆ ಏಷ್ಯಾ ಕಪ್ ಟ್ರೋಫಿ ವಿತರಣೆಯಾಗಿಲ್ಲ.

ಭಾನುವಾರ (ಸೆ.28) ಫೈನಲ್ ಪಂದ್ಯದ ನಂತರ, ಗೆದ್ದ ಭಾರತೀಯ ಆಟಗಾರರು ವೇದಿಕೆಯಿಂದ ದೂರ ನಿಂತಿದ್ದರು. ನಖ್ವಿ ವೇದಿಕೆಯಲ್ಲಿ ಟ್ರೋಫಿ ನೀಡಲು ಕಾಯುತ್ತಿದ್ದರು. ಇದರಿಂದ ಟ್ರೋಫಿ ವಿತರಣೆ ಸಮಾರಂಭ ಗೊಂದಲ ಮತ್ತು ವಿಳಂಬದಿಂದ ಕೂಡಿತ್ತು.

ಎಮಿರೇಟ್ಸ್ ಕ್ರಿಕೆಟ್ ಬೋರ್ಡ್‌ನ ಉಪಾಧ್ಯಕ್ಷ ಖಾಲಿದ್ ಅಲ್ ಝರೂನಿ ಈ ವೇಳೆ ಉಪಸ್ಥಿತರಿದ್ದರು. ನಖ್ವಿ ಬದಲಾಗಿ ಅವರಿಂದ ಟ್ರೋಫಿ ಪಡೆಯಲು ಭಾರತ ತಂಡ ಸಿದ್ದ ಇತ್ತು. ಆದರೆ, ನಖ್ವಿ ತಾನೇ ಟ್ರೋಫಿ ಹಸ್ತಾಂತರಿಸಬೇಕೆಂದು ಹಠ ಹಿಡಿದರು.

ಸುಮಾರು ಒಂದು ಗಂಟೆಯ ಗೊಂದಲಮಯ ಪರಿಸ್ಥಿತಿಯ ನಂತರ, ಟ್ರೋಫಿಯನ್ನು ಸದ್ದಿಲ್ಲದೆ ವೇದಿಕೆಯಿಂದ ವಾಪಸ್ ತೆಗೆದುಕೊಂಡು ಹೋಗಲಾಯಿತು. ಚಾಂಪಿಯನ್ ಟ್ರೋಫಿ ಬಿಟ್ಟು, ಇತರ ವೈಯಕ್ತಿಕ ಪ್ರಶಸ್ತಿಗಳನ್ನು ವಿತರಿಸಲಾಗಿದ್ದರೂ, ಭಾರತೀಯ ತಂಡದ ಸಂಭ್ರಮಾಚರಣೆ ಅಪೂರ್ಣವಾಗಿ ಉಳಿಯಿತು. ಕ್ರಿಕೆಟ್ ಇತಿಹಾಸದಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದೆ.

ಸ್ನೇಹ, ಸೌಹಾರ್ದತೆಯನ್ನು ವೃದ್ದಿಸಬೇಕಾದ ಪಂದ್ಯಾವಳಿಯಾದ್ಯಂತ ಎರಡು ತಂಡಗಳು ಪರಸ್ಪರ ಶತ್ರುಗಳಂತೆ ಸೆಣಸಾಡಿದವು. ಭಾರತೀಯ ಆಟಗಾರರು ಈ ಹಿಂದೆ ಪಂದ್ಯಕ್ಕೂ ಮುನ್ನ ಹಸ್ತಲಾಘವ, ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಫೋಟೋ ತೆಗೆಯುವುದನ್ನು ತಪ್ಪಿಸಿದ್ದರು. ಅಲ್ಲದೆ, ನಖ್ವಿ ಅವರೊಂದಿಗೆ ಯಾವುದೇ ಔಪಚಾರಿಕ ಮಾತುಕತೆಯನ್ನು ನಿರಾಕರಿಸಿದ್ದರು.

ಕ್ರೀಡಾಂಗಣದಲ್ಲಿ ಅಭಿಮಾನಿಗಳು, ಮುಖ್ಯವಾಗಿ ಭಾರತೀಯ ಬೆಂಬಲಿಗರು ನಖ್ವಿ ವಿರುದ್ದ ತಮ್ಮ ಅಸಮ್ಮತಿಯನ್ನು ಜೋರಾಗಿ ಮತ್ತು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಿದ್ದರು. ನಖ್ವಿ ಅವರನ್ನು ಅಪಹಾಸ್ಯ ಮಾಡುತ್ತಾ, ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ಇದ್ದರು. ಪಂದ್ಯದ ನಂತರ ಪಾಕಿಸ್ತಾನ ತಂಡವು ಸುಮಾರು ಒಂದು ಗಂಟೆ ಕಾಲ ಡ್ರೆಸ್ಸಿಂಗ್ ಕೋಣೆಯಲ್ಲಿಯೇ ಇತ್ತು, ಅವರ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ವೇದಿಕೆಯಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದರು.

ನಖ್ವಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸೇರಿದಂತೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ, ಅವರು ಟ್ರೋಫಿಯನ್ನು ಪ್ರದಾನ ಮಾಡಿದರೆ ಅದನ್ನು ಸ್ವೀಕರಿಸುವುದಿಲ್ಲ ಎಂದು ಭಾರತವು ಎಸಿಸಿಗೆ ಮೊದಲೇ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ನಖ್ವಿಯವರು ಈ ಹಿಂದೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ವಿಮಾನ ಅಪಘಾತ ಸಂಭ್ರಮಾಚರಣೆಯ ಕ್ರಿಪ್ಟಿಕ್ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು, ಇದು ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ನೇರ ಉಲ್ಲೇಖವಾಗಿದೆ.

ಅಲ್ಲದೆ, ಸೂರ್ಯಕುಮಾರ್‌ ಭಾರತೀಯ ಸೇನೆಯನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳೊಂದಿಗೆ ಒಗ್ಗಟ್ಟು ತೋರಿಸಿದ್ದಕ್ಕಾಗಿ, ಅವರ ವಿರುದ್ದ ಐಸಿಸಿಯಿಂದ ಲೆವೆಲ್ 4 ಅಪರಾಧದ ಆರೋಪ ಹೊರಿಸಬೇಕೆಂದು ಒತ್ತಾಯಿಸಿದ್ದರು.

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...