Homeಅಂತರಾಷ್ಟ್ರೀಯಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

- Advertisement -
- Advertisement -

ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದ ಭಾರತ ತಂಡ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದೆ. ಹಾಗಾಗಿ, ಟೀಮ್ ಇಂಡಿಯಾಕ್ಕೆ ಏಷ್ಯಾ ಕಪ್ ಟ್ರೋಫಿ ವಿತರಣೆಯಾಗಿಲ್ಲ.

ಭಾನುವಾರ (ಸೆ.28) ಫೈನಲ್ ಪಂದ್ಯದ ನಂತರ, ಗೆದ್ದ ಭಾರತೀಯ ಆಟಗಾರರು ವೇದಿಕೆಯಿಂದ ದೂರ ನಿಂತಿದ್ದರು. ನಖ್ವಿ ವೇದಿಕೆಯಲ್ಲಿ ಟ್ರೋಫಿ ನೀಡಲು ಕಾಯುತ್ತಿದ್ದರು. ಇದರಿಂದ ಟ್ರೋಫಿ ವಿತರಣೆ ಸಮಾರಂಭ ಗೊಂದಲ ಮತ್ತು ವಿಳಂಬದಿಂದ ಕೂಡಿತ್ತು.

ಎಮಿರೇಟ್ಸ್ ಕ್ರಿಕೆಟ್ ಬೋರ್ಡ್‌ನ ಉಪಾಧ್ಯಕ್ಷ ಖಾಲಿದ್ ಅಲ್ ಝರೂನಿ ಈ ವೇಳೆ ಉಪಸ್ಥಿತರಿದ್ದರು. ನಖ್ವಿ ಬದಲಾಗಿ ಅವರಿಂದ ಟ್ರೋಫಿ ಪಡೆಯಲು ಭಾರತ ತಂಡ ಸಿದ್ದ ಇತ್ತು. ಆದರೆ, ನಖ್ವಿ ತಾನೇ ಟ್ರೋಫಿ ಹಸ್ತಾಂತರಿಸಬೇಕೆಂದು ಹಠ ಹಿಡಿದರು.

ಸುಮಾರು ಒಂದು ಗಂಟೆಯ ಗೊಂದಲಮಯ ಪರಿಸ್ಥಿತಿಯ ನಂತರ, ಟ್ರೋಫಿಯನ್ನು ಸದ್ದಿಲ್ಲದೆ ವೇದಿಕೆಯಿಂದ ವಾಪಸ್ ತೆಗೆದುಕೊಂಡು ಹೋಗಲಾಯಿತು. ಚಾಂಪಿಯನ್ ಟ್ರೋಫಿ ಬಿಟ್ಟು, ಇತರ ವೈಯಕ್ತಿಕ ಪ್ರಶಸ್ತಿಗಳನ್ನು ವಿತರಿಸಲಾಗಿದ್ದರೂ, ಭಾರತೀಯ ತಂಡದ ಸಂಭ್ರಮಾಚರಣೆ ಅಪೂರ್ಣವಾಗಿ ಉಳಿಯಿತು. ಕ್ರಿಕೆಟ್ ಇತಿಹಾಸದಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದೆ.

ಸ್ನೇಹ, ಸೌಹಾರ್ದತೆಯನ್ನು ವೃದ್ದಿಸಬೇಕಾದ ಪಂದ್ಯಾವಳಿಯಾದ್ಯಂತ ಎರಡು ತಂಡಗಳು ಪರಸ್ಪರ ಶತ್ರುಗಳಂತೆ ಸೆಣಸಾಡಿದವು. ಭಾರತೀಯ ಆಟಗಾರರು ಈ ಹಿಂದೆ ಪಂದ್ಯಕ್ಕೂ ಮುನ್ನ ಹಸ್ತಲಾಘವ, ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಫೋಟೋ ತೆಗೆಯುವುದನ್ನು ತಪ್ಪಿಸಿದ್ದರು. ಅಲ್ಲದೆ, ನಖ್ವಿ ಅವರೊಂದಿಗೆ ಯಾವುದೇ ಔಪಚಾರಿಕ ಮಾತುಕತೆಯನ್ನು ನಿರಾಕರಿಸಿದ್ದರು.

ಕ್ರೀಡಾಂಗಣದಲ್ಲಿ ಅಭಿಮಾನಿಗಳು, ಮುಖ್ಯವಾಗಿ ಭಾರತೀಯ ಬೆಂಬಲಿಗರು ನಖ್ವಿ ವಿರುದ್ದ ತಮ್ಮ ಅಸಮ್ಮತಿಯನ್ನು ಜೋರಾಗಿ ಮತ್ತು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಿದ್ದರು. ನಖ್ವಿ ಅವರನ್ನು ಅಪಹಾಸ್ಯ ಮಾಡುತ್ತಾ, ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ಇದ್ದರು. ಪಂದ್ಯದ ನಂತರ ಪಾಕಿಸ್ತಾನ ತಂಡವು ಸುಮಾರು ಒಂದು ಗಂಟೆ ಕಾಲ ಡ್ರೆಸ್ಸಿಂಗ್ ಕೋಣೆಯಲ್ಲಿಯೇ ಇತ್ತು, ಅವರ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ವೇದಿಕೆಯಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದರು.

ನಖ್ವಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸೇರಿದಂತೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ, ಅವರು ಟ್ರೋಫಿಯನ್ನು ಪ್ರದಾನ ಮಾಡಿದರೆ ಅದನ್ನು ಸ್ವೀಕರಿಸುವುದಿಲ್ಲ ಎಂದು ಭಾರತವು ಎಸಿಸಿಗೆ ಮೊದಲೇ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ನಖ್ವಿಯವರು ಈ ಹಿಂದೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ವಿಮಾನ ಅಪಘಾತ ಸಂಭ್ರಮಾಚರಣೆಯ ಕ್ರಿಪ್ಟಿಕ್ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು, ಇದು ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ನೇರ ಉಲ್ಲೇಖವಾಗಿದೆ.

ಅಲ್ಲದೆ, ಸೂರ್ಯಕುಮಾರ್‌ ಭಾರತೀಯ ಸೇನೆಯನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳೊಂದಿಗೆ ಒಗ್ಗಟ್ಟು ತೋರಿಸಿದ್ದಕ್ಕಾಗಿ, ಅವರ ವಿರುದ್ದ ಐಸಿಸಿಯಿಂದ ಲೆವೆಲ್ 4 ಅಪರಾಧದ ಆರೋಪ ಹೊರಿಸಬೇಕೆಂದು ಒತ್ತಾಯಿಸಿದ್ದರು.

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...