Homeಅಂತರಾಷ್ಟ್ರೀಯಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

ಏಷ್ಯಾ ಕಪ್। ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿಯಿಂದ ಟ್ರೋಫಿ ಪಡೆಯಲು ನಿರಾಕರಿಸಿದ ಭಾರತ ತಂಡ

- Advertisement -
- Advertisement -

ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಐದು ವಿಕೆಟ್‌ಗಳ ಜಯ ಸಾಧಿಸಿದ ಭಾರತ ತಂಡ, ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಅಧ್ಯಕ್ಷ ಹಾಗೂ ಪಾಕಿಸ್ತಾನ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ನಿರಾಕರಿಸಿದೆ. ಹಾಗಾಗಿ, ಟೀಮ್ ಇಂಡಿಯಾಕ್ಕೆ ಏಷ್ಯಾ ಕಪ್ ಟ್ರೋಫಿ ವಿತರಣೆಯಾಗಿಲ್ಲ.

ಭಾನುವಾರ (ಸೆ.28) ಫೈನಲ್ ಪಂದ್ಯದ ನಂತರ, ಗೆದ್ದ ಭಾರತೀಯ ಆಟಗಾರರು ವೇದಿಕೆಯಿಂದ ದೂರ ನಿಂತಿದ್ದರು. ನಖ್ವಿ ವೇದಿಕೆಯಲ್ಲಿ ಟ್ರೋಫಿ ನೀಡಲು ಕಾಯುತ್ತಿದ್ದರು. ಇದರಿಂದ ಟ್ರೋಫಿ ವಿತರಣೆ ಸಮಾರಂಭ ಗೊಂದಲ ಮತ್ತು ವಿಳಂಬದಿಂದ ಕೂಡಿತ್ತು.

ಎಮಿರೇಟ್ಸ್ ಕ್ರಿಕೆಟ್ ಬೋರ್ಡ್‌ನ ಉಪಾಧ್ಯಕ್ಷ ಖಾಲಿದ್ ಅಲ್ ಝರೂನಿ ಈ ವೇಳೆ ಉಪಸ್ಥಿತರಿದ್ದರು. ನಖ್ವಿ ಬದಲಾಗಿ ಅವರಿಂದ ಟ್ರೋಫಿ ಪಡೆಯಲು ಭಾರತ ತಂಡ ಸಿದ್ದ ಇತ್ತು. ಆದರೆ, ನಖ್ವಿ ತಾನೇ ಟ್ರೋಫಿ ಹಸ್ತಾಂತರಿಸಬೇಕೆಂದು ಹಠ ಹಿಡಿದರು.

ಸುಮಾರು ಒಂದು ಗಂಟೆಯ ಗೊಂದಲಮಯ ಪರಿಸ್ಥಿತಿಯ ನಂತರ, ಟ್ರೋಫಿಯನ್ನು ಸದ್ದಿಲ್ಲದೆ ವೇದಿಕೆಯಿಂದ ವಾಪಸ್ ತೆಗೆದುಕೊಂಡು ಹೋಗಲಾಯಿತು. ಚಾಂಪಿಯನ್ ಟ್ರೋಫಿ ಬಿಟ್ಟು, ಇತರ ವೈಯಕ್ತಿಕ ಪ್ರಶಸ್ತಿಗಳನ್ನು ವಿತರಿಸಲಾಗಿದ್ದರೂ, ಭಾರತೀಯ ತಂಡದ ಸಂಭ್ರಮಾಚರಣೆ ಅಪೂರ್ಣವಾಗಿ ಉಳಿಯಿತು. ಕ್ರಿಕೆಟ್ ಇತಿಹಾಸದಲ್ಲಿ ಈ ರೀತಿಯ ಘಟನೆ ನಡೆದಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದೆ.

ಸ್ನೇಹ, ಸೌಹಾರ್ದತೆಯನ್ನು ವೃದ್ದಿಸಬೇಕಾದ ಪಂದ್ಯಾವಳಿಯಾದ್ಯಂತ ಎರಡು ತಂಡಗಳು ಪರಸ್ಪರ ಶತ್ರುಗಳಂತೆ ಸೆಣಸಾಡಿದವು. ಭಾರತೀಯ ಆಟಗಾರರು ಈ ಹಿಂದೆ ಪಂದ್ಯಕ್ಕೂ ಮುನ್ನ ಹಸ್ತಲಾಘವ, ಪಾಕಿಸ್ತಾನಿ ಸಹ ಆಟಗಾರರೊಂದಿಗೆ ಫೋಟೋ ತೆಗೆಯುವುದನ್ನು ತಪ್ಪಿಸಿದ್ದರು. ಅಲ್ಲದೆ, ನಖ್ವಿ ಅವರೊಂದಿಗೆ ಯಾವುದೇ ಔಪಚಾರಿಕ ಮಾತುಕತೆಯನ್ನು ನಿರಾಕರಿಸಿದ್ದರು.

ಕ್ರೀಡಾಂಗಣದಲ್ಲಿ ಅಭಿಮಾನಿಗಳು, ಮುಖ್ಯವಾಗಿ ಭಾರತೀಯ ಬೆಂಬಲಿಗರು ನಖ್ವಿ ವಿರುದ್ದ ತಮ್ಮ ಅಸಮ್ಮತಿಯನ್ನು ಜೋರಾಗಿ ಮತ್ತು ಸ್ಪಷ್ಟವಾಗಿ ವ್ಯಕ್ತಪಡಿಸುತ್ತಿದ್ದರು. ನಖ್ವಿ ಅವರನ್ನು ಅಪಹಾಸ್ಯ ಮಾಡುತ್ತಾ, ದೇಶಭಕ್ತಿಯ ಘೋಷಣೆಗಳನ್ನು ಕೂಗುತ್ತಾ ಇದ್ದರು. ಪಂದ್ಯದ ನಂತರ ಪಾಕಿಸ್ತಾನ ತಂಡವು ಸುಮಾರು ಒಂದು ಗಂಟೆ ಕಾಲ ಡ್ರೆಸ್ಸಿಂಗ್ ಕೋಣೆಯಲ್ಲಿಯೇ ಇತ್ತು, ಅವರ ಕ್ರಿಕೆಟ್ ಮಂಡಳಿಯ ಅಧ್ಯಕ್ಷರು ವೇದಿಕೆಯಲ್ಲಿ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದರು.

ನಖ್ವಿ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಸೇರಿದಂತೆ ಇತ್ತೀಚಿನ ವಿವಾದಗಳ ಹಿನ್ನೆಲೆಯಲ್ಲಿ, ಅವರು ಟ್ರೋಫಿಯನ್ನು ಪ್ರದಾನ ಮಾಡಿದರೆ ಅದನ್ನು ಸ್ವೀಕರಿಸುವುದಿಲ್ಲ ಎಂದು ಭಾರತವು ಎಸಿಸಿಗೆ ಮೊದಲೇ ತಿಳಿಸಿತ್ತು ಎಂದು ವರದಿಗಳು ಹೇಳಿವೆ.

ನಖ್ವಿಯವರು ಈ ಹಿಂದೆ ಕ್ರಿಸ್ಟಿಯಾನೊ ರೊನಾಲ್ಡೊ ಅವರ ವಿಮಾನ ಅಪಘಾತ ಸಂಭ್ರಮಾಚರಣೆಯ ಕ್ರಿಪ್ಟಿಕ್ ವೀಡಿಯೊಗಳನ್ನು ಪೋಸ್ಟ್ ಮಾಡಿದ್ದರು, ಇದು ‘ಆಪರೇಷನ್ ಸಿಂಧೂರ’ ಸಮಯದಲ್ಲಿ ಆರು ಭಾರತೀಯ ಜೆಟ್‌ಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಗೆ ನೇರ ಉಲ್ಲೇಖವಾಗಿದೆ.

ಅಲ್ಲದೆ, ಸೂರ್ಯಕುಮಾರ್‌ ಭಾರತೀಯ ಸೇನೆಯನ್ನು ಬೆಂಬಲಿಸಿದ್ದಕ್ಕಾಗಿ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಲಿಪಶುಗಳೊಂದಿಗೆ ಒಗ್ಗಟ್ಟು ತೋರಿಸಿದ್ದಕ್ಕಾಗಿ, ಅವರ ವಿರುದ್ದ ಐಸಿಸಿಯಿಂದ ಲೆವೆಲ್ 4 ಅಪರಾಧದ ಆರೋಪ ಹೊರಿಸಬೇಕೆಂದು ಒತ್ತಾಯಿಸಿದ್ದರು.

ಎಐ ಮೊರೆ ಹೋದ ಆಕ್ಸೆಂಚರ್: 11,000 ಉದ್ಯೋಗಿಗಳ ವಜಾ, ಇನ್ನಷ್ಟು ಉದ್ಯೋಗ ಕಡಿತದ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...

ಖಮೇನಿ ಮೇಲಿನ ದಾಳಿಯು ‘ಸಂಪೂರ್ಣ ಯುದ್ಧ’ಕ್ಕೆ ಕಾರಣವಾಗುತ್ತದೆ: ಇರಾನ್ ಅಧ್ಯಕ್ಷರ ಎಚ್ಚರಿಕೆ

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿ ಮೇಲಿನ ಯಾವುದೇ ದಾಳಿಯನ್ನು ಇರಾನ್ ರಾಷ್ಟ್ರದ ವಿರುದ್ಧ "ಸಂಪೂರ್ಣ ಯುದ್ಧ" ಘೋಷಣೆ ಎಂದು ಪರಿಗಣಿಸಲಾಗುತ್ತದೆ ಎಂದು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಎಚ್ಚರಿಸಿದ್ದಾರೆ. "ಇರಾನ್‌ನಲ್ಲಿ ಹೊಸ ನಾಯಕತ್ವವನ್ನು...