Homeಮುಖಪುಟ2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

- Advertisement -
- Advertisement -

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ ಸಂಶೋಧನೆಗಳಲ್ಲಿ ತಿಳಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಆಸ್ಟ್ರೇಲಿಯಾ ಮೂಲದ ಚಿಂತಕರ ಚಾವಡಿ ಲೋವಿ ಇನ್‌ಸ್ಟಿಟ್ಯೂಟ್ ಇತ್ತೀಚೆಗೆ ತನ್ನ ವಾರ್ಷಿಕ ಏಷ್ಯಾ ಪವರ್ ಇಂಡೆಕ್ಸ್ ಅನ್ನು ಬಿಡುಗಡೆ ಮಾಡಿದೆ. ಇದು ವಿಶೇಷವಾಗಿ ಏಷ್ಯಾ ಖಂಡದಲ್ಲಿರುವ ರಾಷ್ಟ್ರಗಳು ತಮ್ಮ ಬಾಹ್ಯ ಪರಿಸರದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ.

ಅದರ ಶ್ರೇಯಾಂಕಗಳ ಪ್ರಕಾರ, ಭಾರತವು ತನ್ನ ಸಮಾನಸ್ಥರಿಗಿಂತ ಬಹಳ ಮುಂದಿದೆ ಎಂದು ಕಂಡುಬರುತ್ತದೆ. ಆದರೆ, ದೊಡ್ಡ ವ್ಯತ್ಯಾಸದೊಂದಿಗೆ ಚೀನಾಕ್ಕಿಂತ ಹಿಂದುಳಿದಿದೆ. ಭಾರತ ಮತ್ತು ಚೀನಾ ಎರಡೂ ವಿವಿಧ ಮೆಟ್ರಿಕ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿವೆ. ಮೊದಲಿಗಿಂತ ತಮ್ಮ ಸ್ಥಾನವನ್ನು ಸುಧಾರಿಸಿಕೊಂಡಿವೆ. ಆದರೆ, ಎರಡರ ನಡುವೆ ವಿಶಾಲ ಅಂತರವಿದೆ. 2019 ರ ನಂತರ ಮೊದಲ ಬಾರಿಗೆ ಏಷ್ಯಾದಲ್ಲಿ ರಷ್ಯಾ ತನ್ನ ಒಟ್ಟಾರೆ ಶಕ್ತಿಯನ್ನು ಸುಧಾರಿಸುತ್ತಿದೆ ಎಂದು ಕಂಡುಬರುತ್ತದೆ.

ವರದಿಯ ಮತ್ತೊಂದು ಗಮನಾರ್ಹ ವೈಶಿಷ್ಟ್ಯವೆಂದರೆ, ಭಾರತದ ಸ್ಥಿರವಾಗಿ ಬೆಳೆಯುತ್ತಿರುವ ಶಕ್ತಿ ಮತ್ತು 2025 ರಲ್ಲಿ, ಪ್ರಮುಖ ಶಕ್ತಿ ಸ್ಥಾನಮಾನಕ್ಕಾಗಿ ಏಷ್ಯಾ ಪವರ್ ಇಂಡೆಕ್ಸ್ ವ್ಯಾಖ್ಯಾನಿಸಿದ ಮಿತಿಯನ್ನು ದಾಟಿದೆ.

ಏಷ್ಯಾ ಪವರ್ ಇಂಡೆಕ್ಸ್‌ನ ಏಳನೇ ಆವೃತ್ತಿಯು ಏಷ್ಯಾದಾದ್ಯಂತ 27 ದೇಶಗಳು ಮತ್ತು ಪ್ರಾಂತ್ಯಗಳ ಶಕ್ತಿಯನ್ನು ಮೌಲ್ಯಮಾಪನ ಮಾಡುತ್ತದೆ, ಇದನ್ನು ಎಂಟು ವಿಷಯಾಧಾರಿತ ಸೂಕ್ಯಂಕದಲ್ಲಿ 131 ಸೂಚಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. ಅವುಗಳೆಂದರೆ, ಮಿಲಿಟರಿ ಸಾಮರ್ಥ್ಯ ಮತ್ತು ರಕ್ಷಣಾ ಜಾಲಗಳು, ಆರ್ಥಿಕ ಸಾಮರ್ಥ್ಯ ಮತ್ತು ಸಂಬಂಧಗಳು, ರಾಜತಾಂತ್ರಿಕ ಮತ್ತು ಸಾಂಸ್ಕೃತಿಕ ಪ್ರಭಾವ, ಹಾಗೆಯೇ ಸ್ಥಿತಿಸ್ಥಾಪಕತ್ವ ಮತ್ತು ಭವಿಷ್ಯದ ಸಂಪನ್ಮೂಲಗಳು ಸೇರಿವೆ.

ಅಮೆರಿಕಾ 81.7 ಅಂಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ನಿರ್ವಿವಾದ ನಾಯಕನಾಗಿ ಉಳಿದಿದೆ. ಚೀನಾ 27 ರಲ್ಲಿ 2 ನೇ ಸ್ಥಾನದಲ್ಲಿದೆ, ಒಟ್ಟಾರೆ 100 ರಲ್ಲಿ 73.7 ಅಂಕಗಳೊಂದಿಗೆ, 2025 ರಲ್ಲಿ ಒಟ್ಟಾರೆ ಅಂಕಗಳಲ್ಲಿ ಶೇಕಡಾ 1 ರಷ್ಟು ಲಾಭ ಗುರುತಿಸುತ್ತದೆ.

ಭಾರತವು ಸಮಗ್ರ ಶಕ್ತಿಗಾಗಿ 27 ರಲ್ಲಿ 3 ನೇ ಸ್ಥಾನದಲ್ಲಿದೆ, ಒಟ್ಟಾರೆ 100 ರಲ್ಲಿ 40 ಅಂಕಗಳೊಂದಿಗೆ, ಇದು ಒಟ್ಟಾರೆ ಅಂಕಗಳಲ್ಲಿ ಶೇಕಡಾ 2 ರಷ್ಟು ಲಾಭವನ್ನು ಸೂಚಿಸುತ್ತದೆ. ಕೋವಿಡ್ ನಂತರದ ಅವಧಿಯಲ್ಲಿ ಬಲವಾದ ಆರ್ಥಿಕ ಚೇತರಿಕೆ ಮತ್ತು ಅದರ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಪ್ರಭಾವದ ಹಿನ್ನೆಲೆಯಲ್ಲಿ ಭಾರತದ ಹೆಚ್ಚುತ್ತಿರುವ ಪ್ರಾಬಲ್ಯ ಕಂಡುಬರುತ್ತದೆ.

“ಏಷ್ಯಾ ಪವರ್ ಇಂಡೆಕ್ಸ್‌ನ 2025 ರ ಆವೃತ್ತಿಯಲ್ಲಿ ಭಾರತದ ಆರ್ಥಿಕ ಮತ್ತು ಮಿಲಿಟರಿ ಸಾಮರ್ಥ್ಯ ಎರಡೂ ಹೆಚ್ಚಾಗಿದೆ. ಅದರ ಆರ್ಥಿಕತೆಯು ಬಲವಾಗಿ ಬೆಳೆಯುತ್ತಲೇ ಇದೆ. ಅದರ ಭೌಗೋಳಿಕ ರಾಜಕೀಯ ಪ್ರಸ್ತುತತೆಯ ವಿಷಯದಲ್ಲಿ ಸಣ್ಣ ಲಾಭಗಳನ್ನು ಗಳಿಸಿದೆ. ಅಂತರರಾಷ್ಟ್ರೀಯ ಹತೋಟಿ, ಸಂಪರ್ಕ ಮತ್ತು ತಂತ್ರಜ್ಞಾನದ ಪರಿಭಾಷೆಯಲ್ಲಿ ವ್ಯಾಖ್ಯಾನಿಸಲಾಗಿದೆ. ಭಾರತದ ಮಿಲಿಟರಿ ಸಾಮರ್ಥ್ಯವು ಸ್ಥಿರವಾಗಿ ಸುಧಾರಿಸಿದೆ” ಎಂದು ಲೋಲಿ ಇನ್ಸ್ಟಿಟ್ಯೂಟ್ ತನ್ನ ವರದಿಯಲ್ಲಿ ತಿಳಿಸಿದೆ.

ಇತರ ಏಷ್ಯಾದ ರಾಷ್ಟ್ರಗಳಲ್ಲಿ, ಉತ್ತರ ಕೊರಿಯಾ ಮತ್ತು ಚೀನಾದಂತಹ ರಾಷ್ಟ್ರಗಳೊಂದಿಗೆ ರಕ್ಷಣಾ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಪಡೆದುಕೊಂಡಿರುವ ರಷ್ಯಾದ ಶಕ್ತಿಯು ಚೇತರಿಕೆಯತ್ತ ಸಾಗುತ್ತಿದೆ. ವಿವಿಧ ಮೆಟ್ರಿಕ್‌ಗಳ ಅಡಿಯಲ್ಲಿ ನಕಾರಾತ್ಮಕ ಫಲಿತಾಂಶಗಳನ್ನು ದಾಖಲಿಸಿದರೂ ಜಪಾನ್‌ನ ಶಕ್ತಿ ಸ್ಥಿರವಾಗಿದೆ. ಆದರೆ, ಇತರ ಆಗ್ನೇಯ ಏಷ್ಯಾದ ದೇಶಗಳು 2025 ರಲ್ಲಿ ತಮ್ಮ ಸಮಗ್ರ ಶಕ್ತಿಯಲ್ಲಿ ಸಣ್ಣ ಸುಧಾರಣೆಗಳನ್ನು ದಾಖಲಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಮೂಹಿಕ ಶರಣಾಗತಿ ಘೋಷಿಸಿದ ಎಂಎಂಸಿ-ವಲಯ ಮಾವೋವಾದಿಗಳು; ಭದ್ರತೆ ಒದಗಿಸುವಂತೆ ಮನವಿ

ಮಹಾರಾಷ್ಟ್ರ-ಮಧ್ಯಪ್ರದೇಶ-ಛತ್ತೀಸ್‌ಗಢ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾವೋವಾದಿಗಳು ಜನವರಿ 1, 2026 ರಂದು ಸಾಮೂಹಿಕವಾಗಿ ಶರಣಾಗಲು ಸಿದ್ಧರಿರುವುದಾಗಿ ಘೋಷಿಸಿದ್ದಾರೆ. ಎಂಎಂಸಿ ವಲಯದ ವಕ್ತಾರ ಅನಂತ್ ಹೆಸರಿನಲ್ಲಿ ಹೊರಡಿಸಲಾದ ಪತ್ರದಲ್ಲಿ, ನಮ್ಮ ಗುಂಪು ವೈಯಕ್ತಿಕ ಶರಣಾಗತಿಗಳ ಬದಲಿಗೆ...

ಸಾವರ್ಕರ್ ಮಾನನಷ್ಟ ಮೊಕದ್ದಮೆ ಪ್ರಕರಣ: ಯೂಟ್ಯೂಬ್‌ನಿಂದ ರಾಹುಲ್ ಗಾಂಧಿ ಭಾಷಣ ಪ್ರದರ್ಶನದ ಮನವಿ ತಿರಸ್ಕರಿಸಿದ ಪುಣೆ ನ್ಯಾಯಾಲಯ

ಲಂಡನ್‌ನಲ್ಲಿ ನಡೆದ ಭಾಷಣದಲ್ಲಿ ಬಲಪಂಥೀಯ ನಾಯಕ ವಿನಾಯಕ ಸಾವರ್ಕರ್ ಅವರನ್ನು ಮಾನನಷ್ಟ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ನಡೆಯುತ್ತಿರುವ ಮಾನನಷ್ಟ ಮೊಕದ್ದಮೆಯ ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ, ಯೂಟ್ಯೂಬ್...

ಆನ್‌ಲೈನ್ ರೈಲು ಬುಕಿಂಗ್‌ಗಳಿಗೆ ಮಾತ್ರ ಅಪಘಾತ ವಿಮೆ ಏಕೆ: ಸುಪ್ರೀಂ ಕೋರ್ಟ್ ಪ್ರಶ್ನೆ

ಆನ್‌ಲೈನ್‌ನಲ್ಲಿ ಟಿಕೆಟ್ ಖರೀದಿಸುವ ಪ್ರಯಾಣಿಕರಿಗೆ ಮಾತ್ರ ಅಪಘಾತ ವಿಮಾ ರಕ್ಷಣೆಯನ್ನು ಏಕೆ ಒದಗಿಸಲಾಗುತ್ತಿದೆ? ಆಫ್‌ಲೈನ್ ಟಿಕೆಟ್ ಖರೀದಿಸುವವರಿಗೆ ಏಕೆ ವಿಸ್ತರಿಸುತ್ತಿಲ್ಲ ಎಂಬುದರ ಕುರಿತು ಸುಪ್ರೀಂ ಕೋರ್ಟ್ ಭಾರತೀಯ ರೈಲ್ವೆಯಿಂದ ವಿವರಣೆ ಕೇಳಿದೆ. ರೈಲ್ವೆ ವ್ಯವಸ್ಥೆ...

ಇಸ್ರೇಲ್ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶ ಕುರಿತ ವಿಶ್ವಸಂಸ್ಥೆಯ ವಿಚಾರಣಾ ಆಯೋಗದ ಅಧ್ಯಕ್ಷರಾಗಿ ಎಸ್. ಮುರಳೀಧರ್

ಪೂರ್ವ ಜೆರುಸಲೆಮ್ ಮತ್ತು ಇಸ್ರೇಲ್ ಸೇರಿದಂತೆ ಆಕ್ರಮಿತ ಪ್ಯಾಲೆಸ್ತೀನ್ ಪ್ರದೇಶದ ಕುರಿತಾದ ವಿಶ್ವಸಂಸ್ಥೆಯ ಸ್ವತಂತ್ರ ಅಂತರರಾಷ್ಟ್ರೀಯ ವಿಚಾರಣಾ ಆಯೋಗದ ಅಧ್ಯಕ್ಷರನ್ನಾಗಿ ಹಿರಿಯ ವಕೀಲ ಮತ್ತು ಒರಿಸ್ಸಾ ಹೈಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್....

ಲೈಂಗಿಕ ದೌರ್ಜನ್ಯ: ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ದೂರು ದಾಖಲು

ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ ನಂತರ ಕೇರಳ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ...

ಉತ್ತರ ಪ್ರದೇಶ-ಮಹಾರಾಷ್ಟ್ರದಲ್ಲಿ ಜನನ ಪ್ರಮಾಣಪತ್ರಕ್ಕೆ ಆಧಾರ್ ಮಾನ್ಯವಲ್ಲ: ಹೊಸ ಮಾರ್ಗಸೂಚಿ

ಜನನ ಪ್ರಮಾಣಪತ್ರಗಳನ್ನು ನೀಡಲು ಆಧಾರ್ ಕಾರ್ಡ್‌ಗಳನ್ನು ಇನ್ನು ಮುಂದೆ ಮಾನ್ಯ ಪುರಾವೆಯಾಗಿ ಅಥವಾ ಜನ್ಮ ದಿನಾಂಕದ ಪುರಾವೆಯಾಗಿ ಸ್ವೀಕರಿಸಲಾಗುವುದಿಲ್ಲ ಎಂದು ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ಘೋಷಿಸಿವೆ. ಈ ಉದ್ದೇಶಕ್ಕಾಗಿ ಆಧಾರ್ ಬಳಸುವುದನ್ನು...

ಉತ್ತರಾಖಂಡ| 150 ವರ್ಷಗಳ ಜಾತಿ ತಡೆಗೋಡೆ ಮುರಿದು ತಮ್ಮದೇ ಮುಖ್ಯಸ್ಥರ ಆಯ್ಕೆ ಮಾಡಿಕೊಂಡ ದಲಿತರು

ಉತ್ತರಾಖಂಡದ ದೂರದ ಜೌನ್ಸರ್-ಬವಾರ್ ಪ್ರದೇಶದ ಬಿಜ್ನು ಬಿಜ್ನಾಡ್ ಗ್ರಾಮದ ದಲಿತ ಸಮುದಾಯವು ಸುಮಾರು 150 ವರ್ಷಗಳಲ್ಲಿ ಮೊದಲ ಬಾರಿಗೆ ತನ್ನದೇ ಆದ 'ಸೈನಾ' (ಗ್ರಾಮದ ಮುಖ್ಯಸ್ಥ) ಆಯ್ಕೆ ಮಾಡುವ ಮೂಲಕ ಐತಿಹಾಸಿಕ ಹೆಜ್ಜೆ...

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...