Homeಮುಖಪುಟ2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

- Advertisement -
- Advertisement -

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ ಸಂಶೋಧನೆಗಳಲ್ಲಿ ತಿಳಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಆಸ್ಟ್ರೇಲಿಯಾ ಮೂಲದ ಚಿಂತಕರ ಚಾವಡಿ ಲೋವಿ ಇನ್‌ಸ್ಟಿಟ್ಯೂಟ್ ಇತ್ತೀಚೆಗೆ ತನ್ನ ವಾರ್ಷಿಕ ಏಷ್ಯಾ ಪವರ್ ಇಂಡೆಕ್ಸ್ ಅನ್ನು ಬಿಡುಗಡೆ ಮಾಡಿದೆ. ಇದು ವಿಶೇಷವಾಗಿ ಏಷ್ಯಾ ಖಂಡದಲ್ಲಿರುವ ರಾಷ್ಟ್ರಗಳು ತಮ್ಮ ಬಾಹ್ಯ ಪರಿಸರದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ.

ಅದರ ಶ್ರೇಯಾಂಕಗಳ ಪ್ರಕಾರ, ಭಾರತವು ತನ್ನ ಸಮಾನಸ್ಥರಿಗಿಂತ ಬಹಳ ಮುಂದಿದೆ ಎಂದು ಕಂಡುಬರುತ್ತದೆ. ಆದರೆ, ದೊಡ್ಡ ವ್ಯತ್ಯಾಸದೊಂದಿಗೆ ಚೀನಾಕ್ಕಿಂತ ಹಿಂದುಳಿದಿದೆ. ಭಾರತ ಮತ್ತು ಚೀನಾ ಎರಡೂ ವಿವಿಧ ಮೆಟ್ರಿಕ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿವೆ. ಮೊದಲಿಗಿಂತ ತಮ್ಮ ಸ್ಥಾನವನ್ನು ಸುಧಾರಿಸಿಕೊಂಡಿವೆ. ಆದರೆ, ಎರಡರ ನಡುವೆ ವಿಶಾಲ ಅಂತರವಿದೆ. 2019 ರ ನಂತರ ಮೊದಲ ಬಾರಿಗೆ ಏಷ್ಯಾದಲ್ಲಿ ರಷ್ಯಾ ತನ್ನ ಒಟ್ಟಾರೆ ಶಕ್ತಿಯನ್ನು ಸುಧಾರಿಸುತ್ತಿದೆ ಎಂದು ಕಂಡುಬರುತ್ತದೆ.

ವರದಿಯ ಮತ್ತೊಂದು ಗಮನಾರ್ಹ ವೈಶಿಷ್ಟ್ಯವೆಂದರೆ, ಭಾರತದ ಸ್ಥಿರವಾಗಿ ಬೆಳೆಯುತ್ತಿರುವ ಶಕ್ತಿ ಮತ್ತು 2025 ರಲ್ಲಿ, ಪ್ರಮುಖ ಶಕ್ತಿ ಸ್ಥಾನಮಾನಕ್ಕಾಗಿ ಏಷ್ಯಾ ಪವರ್ ಇಂಡೆಕ್ಸ್ ವ್ಯಾಖ್ಯಾನಿಸಿದ ಮಿತಿಯನ್ನು ದಾಟಿದೆ.

ಏಷ್ಯಾ ಪವರ್ ಇಂಡೆಕ್ಸ್‌ನ ಏಳನೇ ಆವೃತ್ತಿಯು ಏಷ್ಯಾದಾದ್ಯಂತ 27 ದೇಶಗಳು ಮತ್ತು ಪ್ರಾಂತ್ಯಗಳ ಶಕ್ತಿಯನ್ನು ಮೌಲ್ಯಮಾಪನ ಮಾಡುತ್ತದೆ, ಇದನ್ನು ಎಂಟು ವಿಷಯಾಧಾರಿತ ಸೂಕ್ಯಂಕದಲ್ಲಿ 131 ಸೂಚಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. ಅವುಗಳೆಂದರೆ, ಮಿಲಿಟರಿ ಸಾಮರ್ಥ್ಯ ಮತ್ತು ರಕ್ಷಣಾ ಜಾಲಗಳು, ಆರ್ಥಿಕ ಸಾಮರ್ಥ್ಯ ಮತ್ತು ಸಂಬಂಧಗಳು, ರಾಜತಾಂತ್ರಿಕ ಮತ್ತು ಸಾಂಸ್ಕೃತಿಕ ಪ್ರಭಾವ, ಹಾಗೆಯೇ ಸ್ಥಿತಿಸ್ಥಾಪಕತ್ವ ಮತ್ತು ಭವಿಷ್ಯದ ಸಂಪನ್ಮೂಲಗಳು ಸೇರಿವೆ.

ಅಮೆರಿಕಾ 81.7 ಅಂಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ನಿರ್ವಿವಾದ ನಾಯಕನಾಗಿ ಉಳಿದಿದೆ. ಚೀನಾ 27 ರಲ್ಲಿ 2 ನೇ ಸ್ಥಾನದಲ್ಲಿದೆ, ಒಟ್ಟಾರೆ 100 ರಲ್ಲಿ 73.7 ಅಂಕಗಳೊಂದಿಗೆ, 2025 ರಲ್ಲಿ ಒಟ್ಟಾರೆ ಅಂಕಗಳಲ್ಲಿ ಶೇಕಡಾ 1 ರಷ್ಟು ಲಾಭ ಗುರುತಿಸುತ್ತದೆ.

ಭಾರತವು ಸಮಗ್ರ ಶಕ್ತಿಗಾಗಿ 27 ರಲ್ಲಿ 3 ನೇ ಸ್ಥಾನದಲ್ಲಿದೆ, ಒಟ್ಟಾರೆ 100 ರಲ್ಲಿ 40 ಅಂಕಗಳೊಂದಿಗೆ, ಇದು ಒಟ್ಟಾರೆ ಅಂಕಗಳಲ್ಲಿ ಶೇಕಡಾ 2 ರಷ್ಟು ಲಾಭವನ್ನು ಸೂಚಿಸುತ್ತದೆ. ಕೋವಿಡ್ ನಂತರದ ಅವಧಿಯಲ್ಲಿ ಬಲವಾದ ಆರ್ಥಿಕ ಚೇತರಿಕೆ ಮತ್ತು ಅದರ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಪ್ರಭಾವದ ಹಿನ್ನೆಲೆಯಲ್ಲಿ ಭಾರತದ ಹೆಚ್ಚುತ್ತಿರುವ ಪ್ರಾಬಲ್ಯ ಕಂಡುಬರುತ್ತದೆ.

“ಏಷ್ಯಾ ಪವರ್ ಇಂಡೆಕ್ಸ್‌ನ 2025 ರ ಆವೃತ್ತಿಯಲ್ಲಿ ಭಾರತದ ಆರ್ಥಿಕ ಮತ್ತು ಮಿಲಿಟರಿ ಸಾಮರ್ಥ್ಯ ಎರಡೂ ಹೆಚ್ಚಾಗಿದೆ. ಅದರ ಆರ್ಥಿಕತೆಯು ಬಲವಾಗಿ ಬೆಳೆಯುತ್ತಲೇ ಇದೆ. ಅದರ ಭೌಗೋಳಿಕ ರಾಜಕೀಯ ಪ್ರಸ್ತುತತೆಯ ವಿಷಯದಲ್ಲಿ ಸಣ್ಣ ಲಾಭಗಳನ್ನು ಗಳಿಸಿದೆ. ಅಂತರರಾಷ್ಟ್ರೀಯ ಹತೋಟಿ, ಸಂಪರ್ಕ ಮತ್ತು ತಂತ್ರಜ್ಞಾನದ ಪರಿಭಾಷೆಯಲ್ಲಿ ವ್ಯಾಖ್ಯಾನಿಸಲಾಗಿದೆ. ಭಾರತದ ಮಿಲಿಟರಿ ಸಾಮರ್ಥ್ಯವು ಸ್ಥಿರವಾಗಿ ಸುಧಾರಿಸಿದೆ” ಎಂದು ಲೋಲಿ ಇನ್ಸ್ಟಿಟ್ಯೂಟ್ ತನ್ನ ವರದಿಯಲ್ಲಿ ತಿಳಿಸಿದೆ.

ಇತರ ಏಷ್ಯಾದ ರಾಷ್ಟ್ರಗಳಲ್ಲಿ, ಉತ್ತರ ಕೊರಿಯಾ ಮತ್ತು ಚೀನಾದಂತಹ ರಾಷ್ಟ್ರಗಳೊಂದಿಗೆ ರಕ್ಷಣಾ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಪಡೆದುಕೊಂಡಿರುವ ರಷ್ಯಾದ ಶಕ್ತಿಯು ಚೇತರಿಕೆಯತ್ತ ಸಾಗುತ್ತಿದೆ. ವಿವಿಧ ಮೆಟ್ರಿಕ್‌ಗಳ ಅಡಿಯಲ್ಲಿ ನಕಾರಾತ್ಮಕ ಫಲಿತಾಂಶಗಳನ್ನು ದಾಖಲಿಸಿದರೂ ಜಪಾನ್‌ನ ಶಕ್ತಿ ಸ್ಥಿರವಾಗಿದೆ. ಆದರೆ, ಇತರ ಆಗ್ನೇಯ ಏಷ್ಯಾದ ದೇಶಗಳು 2025 ರಲ್ಲಿ ತಮ್ಮ ಸಮಗ್ರ ಶಕ್ತಿಯಲ್ಲಿ ಸಣ್ಣ ಸುಧಾರಣೆಗಳನ್ನು ದಾಖಲಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...