Homeಮುಖಪುಟ2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

2025 ರ ಏಷ್ಯಾ ಪವರ್ ಇಂಡೆಕ್ಸ್‌: ಮೊದಲೆರಡು ಸ್ಥಾನದಲ್ಲಿ ಅಮೆರಿಕ-ಚೀನಾ, ಭಾರತಕ್ಕೆ ಮೂರನೇ ಶ್ರೇಯಾಂಕ

- Advertisement -
- Advertisement -

2025 ರ ಏಷ್ಯಾ ಪವರ್ ಇಂಡೆಕ್ಸ್‌ನಲ್ಲಿ ಭಾರತ ಮೂರನೇ ಶ್ರೇಯಾಂಕವನ್ನು ಪಡೆದುಕೊಂಡಿದೆ. ಆದರೆ, ಯುನೈಟೆಡ್ ಸ್ಟೇಟ್ಸ್-ಚೀನಾ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನವನ್ನು ಪಡೆದುಕೊಂಡಿವೆ ಎಂದು ಜಾಗತಿಕವಾಗಿ ಪ್ರಸಿದ್ಧವಾದ ಚಿಂತಕರ ಚಾವಡಿ ತನ್ನ ಸಂಶೋಧನೆಗಳಲ್ಲಿ ತಿಳಿಸಿದೆ ಎಂದು ‘ದಿ ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಆಸ್ಟ್ರೇಲಿಯಾ ಮೂಲದ ಚಿಂತಕರ ಚಾವಡಿ ಲೋವಿ ಇನ್‌ಸ್ಟಿಟ್ಯೂಟ್ ಇತ್ತೀಚೆಗೆ ತನ್ನ ವಾರ್ಷಿಕ ಏಷ್ಯಾ ಪವರ್ ಇಂಡೆಕ್ಸ್ ಅನ್ನು ಬಿಡುಗಡೆ ಮಾಡಿದೆ. ಇದು ವಿಶೇಷವಾಗಿ ಏಷ್ಯಾ ಖಂಡದಲ್ಲಿರುವ ರಾಷ್ಟ್ರಗಳು ತಮ್ಮ ಬಾಹ್ಯ ಪರಿಸರದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯವನ್ನು ನಿರ್ಣಯಿಸುತ್ತದೆ.

ಅದರ ಶ್ರೇಯಾಂಕಗಳ ಪ್ರಕಾರ, ಭಾರತವು ತನ್ನ ಸಮಾನಸ್ಥರಿಗಿಂತ ಬಹಳ ಮುಂದಿದೆ ಎಂದು ಕಂಡುಬರುತ್ತದೆ. ಆದರೆ, ದೊಡ್ಡ ವ್ಯತ್ಯಾಸದೊಂದಿಗೆ ಚೀನಾಕ್ಕಿಂತ ಹಿಂದುಳಿದಿದೆ. ಭಾರತ ಮತ್ತು ಚೀನಾ ಎರಡೂ ವಿವಿಧ ಮೆಟ್ರಿಕ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸಿವೆ. ಮೊದಲಿಗಿಂತ ತಮ್ಮ ಸ್ಥಾನವನ್ನು ಸುಧಾರಿಸಿಕೊಂಡಿವೆ. ಆದರೆ, ಎರಡರ ನಡುವೆ ವಿಶಾಲ ಅಂತರವಿದೆ. 2019 ರ ನಂತರ ಮೊದಲ ಬಾರಿಗೆ ಏಷ್ಯಾದಲ್ಲಿ ರಷ್ಯಾ ತನ್ನ ಒಟ್ಟಾರೆ ಶಕ್ತಿಯನ್ನು ಸುಧಾರಿಸುತ್ತಿದೆ ಎಂದು ಕಂಡುಬರುತ್ತದೆ.

ವರದಿಯ ಮತ್ತೊಂದು ಗಮನಾರ್ಹ ವೈಶಿಷ್ಟ್ಯವೆಂದರೆ, ಭಾರತದ ಸ್ಥಿರವಾಗಿ ಬೆಳೆಯುತ್ತಿರುವ ಶಕ್ತಿ ಮತ್ತು 2025 ರಲ್ಲಿ, ಪ್ರಮುಖ ಶಕ್ತಿ ಸ್ಥಾನಮಾನಕ್ಕಾಗಿ ಏಷ್ಯಾ ಪವರ್ ಇಂಡೆಕ್ಸ್ ವ್ಯಾಖ್ಯಾನಿಸಿದ ಮಿತಿಯನ್ನು ದಾಟಿದೆ.

ಏಷ್ಯಾ ಪವರ್ ಇಂಡೆಕ್ಸ್‌ನ ಏಳನೇ ಆವೃತ್ತಿಯು ಏಷ್ಯಾದಾದ್ಯಂತ 27 ದೇಶಗಳು ಮತ್ತು ಪ್ರಾಂತ್ಯಗಳ ಶಕ್ತಿಯನ್ನು ಮೌಲ್ಯಮಾಪನ ಮಾಡುತ್ತದೆ, ಇದನ್ನು ಎಂಟು ವಿಷಯಾಧಾರಿತ ಸೂಕ್ಯಂಕದಲ್ಲಿ 131 ಸೂಚಕಗಳ ಆಧಾರದ ಮೇಲೆ ನಡೆಸಲಾಗುತ್ತದೆ. ಅವುಗಳೆಂದರೆ, ಮಿಲಿಟರಿ ಸಾಮರ್ಥ್ಯ ಮತ್ತು ರಕ್ಷಣಾ ಜಾಲಗಳು, ಆರ್ಥಿಕ ಸಾಮರ್ಥ್ಯ ಮತ್ತು ಸಂಬಂಧಗಳು, ರಾಜತಾಂತ್ರಿಕ ಮತ್ತು ಸಾಂಸ್ಕೃತಿಕ ಪ್ರಭಾವ, ಹಾಗೆಯೇ ಸ್ಥಿತಿಸ್ಥಾಪಕತ್ವ ಮತ್ತು ಭವಿಷ್ಯದ ಸಂಪನ್ಮೂಲಗಳು ಸೇರಿವೆ.

ಅಮೆರಿಕಾ 81.7 ಅಂಕಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದು, ನಿರ್ವಿವಾದ ನಾಯಕನಾಗಿ ಉಳಿದಿದೆ. ಚೀನಾ 27 ರಲ್ಲಿ 2 ನೇ ಸ್ಥಾನದಲ್ಲಿದೆ, ಒಟ್ಟಾರೆ 100 ರಲ್ಲಿ 73.7 ಅಂಕಗಳೊಂದಿಗೆ, 2025 ರಲ್ಲಿ ಒಟ್ಟಾರೆ ಅಂಕಗಳಲ್ಲಿ ಶೇಕಡಾ 1 ರಷ್ಟು ಲಾಭ ಗುರುತಿಸುತ್ತದೆ.

ಭಾರತವು ಸಮಗ್ರ ಶಕ್ತಿಗಾಗಿ 27 ರಲ್ಲಿ 3 ನೇ ಸ್ಥಾನದಲ್ಲಿದೆ, ಒಟ್ಟಾರೆ 100 ರಲ್ಲಿ 40 ಅಂಕಗಳೊಂದಿಗೆ, ಇದು ಒಟ್ಟಾರೆ ಅಂಕಗಳಲ್ಲಿ ಶೇಕಡಾ 2 ರಷ್ಟು ಲಾಭವನ್ನು ಸೂಚಿಸುತ್ತದೆ. ಕೋವಿಡ್ ನಂತರದ ಅವಧಿಯಲ್ಲಿ ಬಲವಾದ ಆರ್ಥಿಕ ಚೇತರಿಕೆ ಮತ್ತು ಅದರ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಪ್ರಭಾವದ ಹಿನ್ನೆಲೆಯಲ್ಲಿ ಭಾರತದ ಹೆಚ್ಚುತ್ತಿರುವ ಪ್ರಾಬಲ್ಯ ಕಂಡುಬರುತ್ತದೆ.

“ಏಷ್ಯಾ ಪವರ್ ಇಂಡೆಕ್ಸ್‌ನ 2025 ರ ಆವೃತ್ತಿಯಲ್ಲಿ ಭಾರತದ ಆರ್ಥಿಕ ಮತ್ತು ಮಿಲಿಟರಿ ಸಾಮರ್ಥ್ಯ ಎರಡೂ ಹೆಚ್ಚಾಗಿದೆ. ಅದರ ಆರ್ಥಿಕತೆಯು ಬಲವಾಗಿ ಬೆಳೆಯುತ್ತಲೇ ಇದೆ. ಅದರ ಭೌಗೋಳಿಕ ರಾಜಕೀಯ ಪ್ರಸ್ತುತತೆಯ ವಿಷಯದಲ್ಲಿ ಸಣ್ಣ ಲಾಭಗಳನ್ನು ಗಳಿಸಿದೆ. ಅಂತರರಾಷ್ಟ್ರೀಯ ಹತೋಟಿ, ಸಂಪರ್ಕ ಮತ್ತು ತಂತ್ರಜ್ಞಾನದ ಪರಿಭಾಷೆಯಲ್ಲಿ ವ್ಯಾಖ್ಯಾನಿಸಲಾಗಿದೆ. ಭಾರತದ ಮಿಲಿಟರಿ ಸಾಮರ್ಥ್ಯವು ಸ್ಥಿರವಾಗಿ ಸುಧಾರಿಸಿದೆ” ಎಂದು ಲೋಲಿ ಇನ್ಸ್ಟಿಟ್ಯೂಟ್ ತನ್ನ ವರದಿಯಲ್ಲಿ ತಿಳಿಸಿದೆ.

ಇತರ ಏಷ್ಯಾದ ರಾಷ್ಟ್ರಗಳಲ್ಲಿ, ಉತ್ತರ ಕೊರಿಯಾ ಮತ್ತು ಚೀನಾದಂತಹ ರಾಷ್ಟ್ರಗಳೊಂದಿಗೆ ರಕ್ಷಣಾ ಮತ್ತು ಆರ್ಥಿಕ ಪಾಲುದಾರಿಕೆಯನ್ನು ಪಡೆದುಕೊಂಡಿರುವ ರಷ್ಯಾದ ಶಕ್ತಿಯು ಚೇತರಿಕೆಯತ್ತ ಸಾಗುತ್ತಿದೆ. ವಿವಿಧ ಮೆಟ್ರಿಕ್‌ಗಳ ಅಡಿಯಲ್ಲಿ ನಕಾರಾತ್ಮಕ ಫಲಿತಾಂಶಗಳನ್ನು ದಾಖಲಿಸಿದರೂ ಜಪಾನ್‌ನ ಶಕ್ತಿ ಸ್ಥಿರವಾಗಿದೆ. ಆದರೆ, ಇತರ ಆಗ್ನೇಯ ಏಷ್ಯಾದ ದೇಶಗಳು 2025 ರಲ್ಲಿ ತಮ್ಮ ಸಮಗ್ರ ಶಕ್ತಿಯಲ್ಲಿ ಸಣ್ಣ ಸುಧಾರಣೆಗಳನ್ನು ದಾಖಲಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...