Homeಅಂತರಾಷ್ಟ್ರೀಯಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

- Advertisement -
- Advertisement -

ಭಾರತ ವ್ಯಕ್ತಪಡಿಸಿದ ಆಕ್ಷೇಪಗಳ ಹೊರತಾಗಿಯೂ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ADB) ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್‌ ಹಣಕಾಸು ಪ್ಯಾಕೇಜ್‌ ಅನ್ನು ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ನೀಡಿರುವ ಒಟ್ಟು ಸಾಲದಲ್ಲಿ 300 ಮಿಲಿಯನ್ ಡಾಲರ್‌ ಅನ್ನು ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್ ಅನ್ನು ಕಾರ್ಯಕ್ರಮ ಆಧಾರಿತ ಗ್ಯಾರಂಟಿ(PBG)ಗಳಿಗೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 1 ಬಿಲಿಯನ್ ಡಾಲರ್‌ (ಸುಮಾರು ರೂ. 8,500 ಕೋಟಿ) ಪ್ಯಾಕೇಜ್ ಅನ್ನು ಇತ್ತಿಚೆಗೆ ಪಡೆದಿತ್ತು. ಅದಾಗಿ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಪಾಕಿಸ್ತಾನ ಹಣಕಾಸು ಸಚಿವರ ಸಲಹೆಗಾರ ಖುರ್ರಾಮ್ ಶೆಹ್ಜಾದ್ ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ಬ್ಯಾಂಕ್‌ನ ಪ್ಯಾಕೇಜ್‌ಗೆ ಸಂಬಂಧಿಸಿದ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. 300 ಮಿಲಿಯನ್ ಡಾಲರ್‌ ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್‌ ಕಾರ್ಯಕ್ರಮ ಆಧಾರಿತ ಗ್ಯಾರಂಟಿ (PBG) ಅನ್ನು ಪ್ಯಾಕೇಜ್ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿನ ಪ್ಯಾಕೇಜ್ ಪಾಕಿಸ್ತಾನದ ಹಣಕಾಸಿನ ಸುಸ್ಥಿರತೆಯನ್ನು ಬಲಪಡಿಸುವ ಮತ್ತು ಸಮಗ್ರ ಸುಧಾರಣೆಗಳ ಮೂಲಕ ಸಾರ್ವಜನಿಕ ಹಣಕಾಸು ನಿರ್ವಹಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪಾಕಿಸ್ತಾನದ ADB ನಿರ್ದೇಶಕಿ ಎಮ್ಮಾ ಫ್ಯಾನ್ ಅವರ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

ಸಾರ್ವಜನಿಕ ಖರ್ಚು ಮತ್ತು ನಗದು ನಿರ್ವಹಣೆಯನ್ನು ಹೆಚ್ಚಿಸುವಾಗ ತೆರಿಗೆ ನೀತಿ, ಆಡಳಿತ ಮತ್ತು ಅನುಸರಣೆಯನ್ನು ಸುಧಾರಿಸಲು ದೂರಗಾಮಿ ಸುಧಾರಣೆಗಳನ್ನು ಕಾರ್ಯಕ್ರಮದ ಅಡಿಯಲ್ಲಿ ನಡೆಸಲಾಗುತ್ತದೆ. ಇದು ಡಿಜಿಟಲೀಕರಣ, ಹೂಡಿಕೆ ಸೌಲಭ್ಯ ಮತ್ತು ಖಾಸಗಿ ವಲಯದ ಅಭಿವೃದ್ಧಿಯನ್ನು ಸಹ ಉತ್ತೇಜಿಸುತ್ತದೆ ಎಂದು ವರದಿ ಹೇಳಿದೆ.

ಅಲ್ಲದೆ, ಇದು ಪಾಕಿಸ್ತಾನದ ಹಣಕಾಸಿನ ಕೊರತೆ ಮತ್ತು ಸಾರ್ವಜನಿಕ ಸಾಲವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಸಾಮಾಜಿಕ ಮತ್ತು ಅಭಿವೃದ್ಧಿ ವೆಚ್ಚಗಳಿಗೆ ಸ್ಥಳಾವಕಾಶವನ್ನು ಸೃಷ್ಟಿಸುತ್ತವೆ ಎಂದು ವರದಿ ಹೇಳಿದೆ. ದೇಶೀಯ ಸಂಪನ್ಮೂಲ ಕ್ರೋಢೀಕರಣವನ್ನು ಹೆಚ್ಚಿಸುವುದು ಮತ್ತು ಹಣಕಾಸು ಸುಧಾರಣೆಗಳ ಮೂಲಕ ಆರ್ಥಿಕತೆಯನ್ನು ಸ್ಥಿರಗೊಳಿಸುವ ಗುರಿಯನ್ನು ಇದು ಹೊಂದಿದೆ ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು, ಆದಾಯವನ್ನು ಹೆಚ್ಚಿಸಲು ಮತ್ತು ಹಣಕಾಸಿನ ಶಿಸ್ತನ್ನು ಉತ್ತೇಜಿಸಲು ಬ್ಯಾಂಕ್‌ನ ಈ ಬೆಂಬಲವು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಶದ ಆದಾಯದ ಮೂಲವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಆರ್ಥಿಕ ಸ್ವಾವಲಂಬನೆಯತ್ತ ಪ್ರಮುಖ ಹೆಜ್ಜೆಯಿಡುವಂತೆ ಮಾಡುತ್ತದೆ ಎಂದು ಹೇಳಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...