Homeಅಂತರಾಷ್ಟ್ರೀಯಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

- Advertisement -
- Advertisement -

ಭಾರತ ವ್ಯಕ್ತಪಡಿಸಿದ ಆಕ್ಷೇಪಗಳ ಹೊರತಾಗಿಯೂ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ADB) ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್‌ ಹಣಕಾಸು ಪ್ಯಾಕೇಜ್‌ ಅನ್ನು ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ನೀಡಿರುವ ಒಟ್ಟು ಸಾಲದಲ್ಲಿ 300 ಮಿಲಿಯನ್ ಡಾಲರ್‌ ಅನ್ನು ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್ ಅನ್ನು ಕಾರ್ಯಕ್ರಮ ಆಧಾರಿತ ಗ್ಯಾರಂಟಿ(PBG)ಗಳಿಗೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 1 ಬಿಲಿಯನ್ ಡಾಲರ್‌ (ಸುಮಾರು ರೂ. 8,500 ಕೋಟಿ) ಪ್ಯಾಕೇಜ್ ಅನ್ನು ಇತ್ತಿಚೆಗೆ ಪಡೆದಿತ್ತು. ಅದಾಗಿ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಪಾಕಿಸ್ತಾನ ಹಣಕಾಸು ಸಚಿವರ ಸಲಹೆಗಾರ ಖುರ್ರಾಮ್ ಶೆಹ್ಜಾದ್ ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ಬ್ಯಾಂಕ್‌ನ ಪ್ಯಾಕೇಜ್‌ಗೆ ಸಂಬಂಧಿಸಿದ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. 300 ಮಿಲಿಯನ್ ಡಾಲರ್‌ ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್‌ ಕಾರ್ಯಕ್ರಮ ಆಧಾರಿತ ಗ್ಯಾರಂಟಿ (PBG) ಅನ್ನು ಪ್ಯಾಕೇಜ್ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿನ ಪ್ಯಾಕೇಜ್ ಪಾಕಿಸ್ತಾನದ ಹಣಕಾಸಿನ ಸುಸ್ಥಿರತೆಯನ್ನು ಬಲಪಡಿಸುವ ಮತ್ತು ಸಮಗ್ರ ಸುಧಾರಣೆಗಳ ಮೂಲಕ ಸಾರ್ವಜನಿಕ ಹಣಕಾಸು ನಿರ್ವಹಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪಾಕಿಸ್ತಾನದ ADB ನಿರ್ದೇಶಕಿ ಎಮ್ಮಾ ಫ್ಯಾನ್ ಅವರ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

ಸಾರ್ವಜನಿಕ ಖರ್ಚು ಮತ್ತು ನಗದು ನಿರ್ವಹಣೆಯನ್ನು ಹೆಚ್ಚಿಸುವಾಗ ತೆರಿಗೆ ನೀತಿ, ಆಡಳಿತ ಮತ್ತು ಅನುಸರಣೆಯನ್ನು ಸುಧಾರಿಸಲು ದೂರಗಾಮಿ ಸುಧಾರಣೆಗಳನ್ನು ಕಾರ್ಯಕ್ರಮದ ಅಡಿಯಲ್ಲಿ ನಡೆಸಲಾಗುತ್ತದೆ. ಇದು ಡಿಜಿಟಲೀಕರಣ, ಹೂಡಿಕೆ ಸೌಲಭ್ಯ ಮತ್ತು ಖಾಸಗಿ ವಲಯದ ಅಭಿವೃದ್ಧಿಯನ್ನು ಸಹ ಉತ್ತೇಜಿಸುತ್ತದೆ ಎಂದು ವರದಿ ಹೇಳಿದೆ.

ಅಲ್ಲದೆ, ಇದು ಪಾಕಿಸ್ತಾನದ ಹಣಕಾಸಿನ ಕೊರತೆ ಮತ್ತು ಸಾರ್ವಜನಿಕ ಸಾಲವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಸಾಮಾಜಿಕ ಮತ್ತು ಅಭಿವೃದ್ಧಿ ವೆಚ್ಚಗಳಿಗೆ ಸ್ಥಳಾವಕಾಶವನ್ನು ಸೃಷ್ಟಿಸುತ್ತವೆ ಎಂದು ವರದಿ ಹೇಳಿದೆ. ದೇಶೀಯ ಸಂಪನ್ಮೂಲ ಕ್ರೋಢೀಕರಣವನ್ನು ಹೆಚ್ಚಿಸುವುದು ಮತ್ತು ಹಣಕಾಸು ಸುಧಾರಣೆಗಳ ಮೂಲಕ ಆರ್ಥಿಕತೆಯನ್ನು ಸ್ಥಿರಗೊಳಿಸುವ ಗುರಿಯನ್ನು ಇದು ಹೊಂದಿದೆ ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು, ಆದಾಯವನ್ನು ಹೆಚ್ಚಿಸಲು ಮತ್ತು ಹಣಕಾಸಿನ ಶಿಸ್ತನ್ನು ಉತ್ತೇಜಿಸಲು ಬ್ಯಾಂಕ್‌ನ ಈ ಬೆಂಬಲವು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಶದ ಆದಾಯದ ಮೂಲವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಆರ್ಥಿಕ ಸ್ವಾವಲಂಬನೆಯತ್ತ ಪ್ರಮುಖ ಹೆಜ್ಜೆಯಿಡುವಂತೆ ಮಾಡುತ್ತದೆ ಎಂದು ಹೇಳಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...