Homeಅಂತರಾಷ್ಟ್ರೀಯಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

- Advertisement -
- Advertisement -

ಭಾರತ ವ್ಯಕ್ತಪಡಿಸಿದ ಆಕ್ಷೇಪಗಳ ಹೊರತಾಗಿಯೂ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ADB) ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್‌ ಹಣಕಾಸು ಪ್ಯಾಕೇಜ್‌ ಅನ್ನು ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ನೀಡಿರುವ ಒಟ್ಟು ಸಾಲದಲ್ಲಿ 300 ಮಿಲಿಯನ್ ಡಾಲರ್‌ ಅನ್ನು ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್ ಅನ್ನು ಕಾರ್ಯಕ್ರಮ ಆಧಾರಿತ ಗ್ಯಾರಂಟಿ(PBG)ಗಳಿಗೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 1 ಬಿಲಿಯನ್ ಡಾಲರ್‌ (ಸುಮಾರು ರೂ. 8,500 ಕೋಟಿ) ಪ್ಯಾಕೇಜ್ ಅನ್ನು ಇತ್ತಿಚೆಗೆ ಪಡೆದಿತ್ತು. ಅದಾಗಿ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಪಾಕಿಸ್ತಾನ ಹಣಕಾಸು ಸಚಿವರ ಸಲಹೆಗಾರ ಖುರ್ರಾಮ್ ಶೆಹ್ಜಾದ್ ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ಬ್ಯಾಂಕ್‌ನ ಪ್ಯಾಕೇಜ್‌ಗೆ ಸಂಬಂಧಿಸಿದ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. 300 ಮಿಲಿಯನ್ ಡಾಲರ್‌ ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್‌ ಕಾರ್ಯಕ್ರಮ ಆಧಾರಿತ ಗ್ಯಾರಂಟಿ (PBG) ಅನ್ನು ಪ್ಯಾಕೇಜ್ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿನ ಪ್ಯಾಕೇಜ್ ಪಾಕಿಸ್ತಾನದ ಹಣಕಾಸಿನ ಸುಸ್ಥಿರತೆಯನ್ನು ಬಲಪಡಿಸುವ ಮತ್ತು ಸಮಗ್ರ ಸುಧಾರಣೆಗಳ ಮೂಲಕ ಸಾರ್ವಜನಿಕ ಹಣಕಾಸು ನಿರ್ವಹಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪಾಕಿಸ್ತಾನದ ADB ನಿರ್ದೇಶಕಿ ಎಮ್ಮಾ ಫ್ಯಾನ್ ಅವರ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

ಸಾರ್ವಜನಿಕ ಖರ್ಚು ಮತ್ತು ನಗದು ನಿರ್ವಹಣೆಯನ್ನು ಹೆಚ್ಚಿಸುವಾಗ ತೆರಿಗೆ ನೀತಿ, ಆಡಳಿತ ಮತ್ತು ಅನುಸರಣೆಯನ್ನು ಸುಧಾರಿಸಲು ದೂರಗಾಮಿ ಸುಧಾರಣೆಗಳನ್ನು ಕಾರ್ಯಕ್ರಮದ ಅಡಿಯಲ್ಲಿ ನಡೆಸಲಾಗುತ್ತದೆ. ಇದು ಡಿಜಿಟಲೀಕರಣ, ಹೂಡಿಕೆ ಸೌಲಭ್ಯ ಮತ್ತು ಖಾಸಗಿ ವಲಯದ ಅಭಿವೃದ್ಧಿಯನ್ನು ಸಹ ಉತ್ತೇಜಿಸುತ್ತದೆ ಎಂದು ವರದಿ ಹೇಳಿದೆ.

ಅಲ್ಲದೆ, ಇದು ಪಾಕಿಸ್ತಾನದ ಹಣಕಾಸಿನ ಕೊರತೆ ಮತ್ತು ಸಾರ್ವಜನಿಕ ಸಾಲವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಸಾಮಾಜಿಕ ಮತ್ತು ಅಭಿವೃದ್ಧಿ ವೆಚ್ಚಗಳಿಗೆ ಸ್ಥಳಾವಕಾಶವನ್ನು ಸೃಷ್ಟಿಸುತ್ತವೆ ಎಂದು ವರದಿ ಹೇಳಿದೆ. ದೇಶೀಯ ಸಂಪನ್ಮೂಲ ಕ್ರೋಢೀಕರಣವನ್ನು ಹೆಚ್ಚಿಸುವುದು ಮತ್ತು ಹಣಕಾಸು ಸುಧಾರಣೆಗಳ ಮೂಲಕ ಆರ್ಥಿಕತೆಯನ್ನು ಸ್ಥಿರಗೊಳಿಸುವ ಗುರಿಯನ್ನು ಇದು ಹೊಂದಿದೆ ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು, ಆದಾಯವನ್ನು ಹೆಚ್ಚಿಸಲು ಮತ್ತು ಹಣಕಾಸಿನ ಶಿಸ್ತನ್ನು ಉತ್ತೇಜಿಸಲು ಬ್ಯಾಂಕ್‌ನ ಈ ಬೆಂಬಲವು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಶದ ಆದಾಯದ ಮೂಲವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಆರ್ಥಿಕ ಸ್ವಾವಲಂಬನೆಯತ್ತ ಪ್ರಮುಖ ಹೆಜ್ಜೆಯಿಡುವಂತೆ ಮಾಡುತ್ತದೆ ಎಂದು ಹೇಳಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...