Homeಅಂತರಾಷ್ಟ್ರೀಯಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

ಭಾರತದ ಆಕ್ಷೇಪಗಳ ಹೊರತಾಗಿಯೂ ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್ ನೀಡಿದ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌!

- Advertisement -
- Advertisement -

ಭಾರತ ವ್ಯಕ್ತಪಡಿಸಿದ ಆಕ್ಷೇಪಗಳ ಹೊರತಾಗಿಯೂ ಏಷ್ಯನ್‌ ಅಭಿವೃದ್ಧಿ ಬ್ಯಾಂಕ್‌ (ADB) ಪಾಕಿಸ್ತಾನಕ್ಕೆ 800 ಮಿಲಿಯನ್ ಡಾಲರ್‌ ಹಣಕಾಸು ಪ್ಯಾಕೇಜ್‌ ಅನ್ನು ಅನುಮೋದಿಸಿದೆ ಎಂದು ವರದಿಗಳು ತಿಳಿಸಿವೆ. ಬ್ಯಾಂಕ್ ನೀಡಿರುವ ಒಟ್ಟು ಸಾಲದಲ್ಲಿ 300 ಮಿಲಿಯನ್ ಡಾಲರ್‌ ಅನ್ನು ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್ ಅನ್ನು ಕಾರ್ಯಕ್ರಮ ಆಧಾರಿತ ಗ್ಯಾರಂಟಿ(PBG)ಗಳಿಗೆ ನೀಡಲಾಗಿದೆ ಎಂದು ವರದಿ ಉಲ್ಲೇಖಿಸಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಪಾಕಿಸ್ತಾನವು ಅಂತರರಾಷ್ಟ್ರೀಯ ಹಣಕಾಸು ನಿಧಿಯಿಂದ (IMF) 1 ಬಿಲಿಯನ್ ಡಾಲರ್‌ (ಸುಮಾರು ರೂ. 8,500 ಕೋಟಿ) ಪ್ಯಾಕೇಜ್ ಅನ್ನು ಇತ್ತಿಚೆಗೆ ಪಡೆದಿತ್ತು. ಅದಾಗಿ ಒಂದು ತಿಂಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಪಾಕಿಸ್ತಾನ ಹಣಕಾಸು ಸಚಿವರ ಸಲಹೆಗಾರ ಖುರ್ರಾಮ್ ಶೆಹ್ಜಾದ್ ಸಾಮಾಜಿಕ ಮಾಧ್ಯಮದಲ್ಲಿ ನೀಡಿದ ಸಂಕ್ಷಿಪ್ತ ಹೇಳಿಕೆಯಲ್ಲಿ ಬ್ಯಾಂಕ್‌ನ ಪ್ಯಾಕೇಜ್‌ಗೆ ಸಂಬಂಧಿಸಿದ ಬೆಳವಣಿಗೆಯನ್ನು ದೃಢಪಡಿಸಿದ್ದಾರೆ. 300 ಮಿಲಿಯನ್ ಡಾಲರ್‌ ನೀತಿ ಆಧಾರಿತ ಸಾಲ (PBL) ಮತ್ತು 500 ಮಿಲಿಯನ್ ಡಾಲರ್‌ ಕಾರ್ಯಕ್ರಮ ಆಧಾರಿತ ಗ್ಯಾರಂಟಿ (PBG) ಅನ್ನು ಪ್ಯಾಕೇಜ್ ಒಳಗೊಂಡಿದೆ ಎಂದು ಅವರು ಹೇಳಿದ್ದಾರೆ.

ಬ್ಯಾಂಕಿನ ಪ್ಯಾಕೇಜ್ ಪಾಕಿಸ್ತಾನದ ಹಣಕಾಸಿನ ಸುಸ್ಥಿರತೆಯನ್ನು ಬಲಪಡಿಸುವ ಮತ್ತು ಸಮಗ್ರ ಸುಧಾರಣೆಗಳ ಮೂಲಕ ಸಾರ್ವಜನಿಕ ಹಣಕಾಸು ನಿರ್ವಹಣೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಪಾಕಿಸ್ತಾನದ ADB ನಿರ್ದೇಶಕಿ ಎಮ್ಮಾ ಫ್ಯಾನ್ ಅವರ ಹೇಳಿಕೆಯನ್ನು ಪಿಟಿಐ ಉಲ್ಲೇಖಿಸಿದೆ.

ಸಾರ್ವಜನಿಕ ಖರ್ಚು ಮತ್ತು ನಗದು ನಿರ್ವಹಣೆಯನ್ನು ಹೆಚ್ಚಿಸುವಾಗ ತೆರಿಗೆ ನೀತಿ, ಆಡಳಿತ ಮತ್ತು ಅನುಸರಣೆಯನ್ನು ಸುಧಾರಿಸಲು ದೂರಗಾಮಿ ಸುಧಾರಣೆಗಳನ್ನು ಕಾರ್ಯಕ್ರಮದ ಅಡಿಯಲ್ಲಿ ನಡೆಸಲಾಗುತ್ತದೆ. ಇದು ಡಿಜಿಟಲೀಕರಣ, ಹೂಡಿಕೆ ಸೌಲಭ್ಯ ಮತ್ತು ಖಾಸಗಿ ವಲಯದ ಅಭಿವೃದ್ಧಿಯನ್ನು ಸಹ ಉತ್ತೇಜಿಸುತ್ತದೆ ಎಂದು ವರದಿ ಹೇಳಿದೆ.

ಅಲ್ಲದೆ, ಇದು ಪಾಕಿಸ್ತಾನದ ಹಣಕಾಸಿನ ಕೊರತೆ ಮತ್ತು ಸಾರ್ವಜನಿಕ ಸಾಲವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದ್ದು, ಸಾಮಾಜಿಕ ಮತ್ತು ಅಭಿವೃದ್ಧಿ ವೆಚ್ಚಗಳಿಗೆ ಸ್ಥಳಾವಕಾಶವನ್ನು ಸೃಷ್ಟಿಸುತ್ತವೆ ಎಂದು ವರದಿ ಹೇಳಿದೆ. ದೇಶೀಯ ಸಂಪನ್ಮೂಲ ಕ್ರೋಢೀಕರಣವನ್ನು ಹೆಚ್ಚಿಸುವುದು ಮತ್ತು ಹಣಕಾಸು ಸುಧಾರಣೆಗಳ ಮೂಲಕ ಆರ್ಥಿಕತೆಯನ್ನು ಸ್ಥಿರಗೊಳಿಸುವ ಗುರಿಯನ್ನು ಇದು ಹೊಂದಿದೆ ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ತೆರಿಗೆ ವ್ಯವಸ್ಥೆಯನ್ನು ಸುಧಾರಿಸಲು, ಆದಾಯವನ್ನು ಹೆಚ್ಚಿಸಲು ಮತ್ತು ಹಣಕಾಸಿನ ಶಿಸ್ತನ್ನು ಉತ್ತೇಜಿಸಲು ಬ್ಯಾಂಕ್‌ನ ಈ ಬೆಂಬಲವು ಸಹಾಯ ಮಾಡುತ್ತದೆ. ಅಲ್ಲದೆ, ಇದು ದೇಶದ ಆದಾಯದ ಮೂಲವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಆರ್ಥಿಕ ಸ್ವಾವಲಂಬನೆಯತ್ತ ಪ್ರಮುಖ ಹೆಜ್ಜೆಯಿಡುವಂತೆ ಮಾಡುತ್ತದೆ ಎಂದು ಹೇಳಿದೆ. ಭಾರತದ ಆಕ್ಷೇಪಗಳ ಹೊರತಾಗಿಯೂ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಭೋಪಾಲ್ ಅನಿಲ ದುರಂತ: ತ್ಯಾಜ್ಯ ವಿಲೇವಾರಿ ವಿರುದ್ಧದ ತುರ್ತು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...