Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...