Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೇವನಹಳ್ಳಿ| ‘ಷರತ್ತುಗಳಿಲ್ಲದೆ ಭೂಸ್ವಾಧೀನ ಕೈಬಿಡಿ..’; ಚನ್ನರಾಯಪಟ್ಟಣ ರೈತರ ಆಗ್ರಹ

ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ...

ಹೈದರಾಬಾದ್| ರದ್ದಾದ ನೋಟುಗಳ ದುರುಪಯೋಗ; ಅಂಚೆ ಸಿಬ್ಬಂದಿಗೆ 2 ವರ್ಷ ಜೈಲು ಶಿಕ್ಷೆ

ನೋಟು ರದ್ದತಿಯ ಸಂದರ್ಭದಲ್ಲಿ 27.27 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ವಿಶೇಷ ಸಿಬಿಐ ನ್ಯಾಯಾಲಯವು ಅಂಚೆ ಇಲಾಖೆಯ ಇಬ್ಬರು ಅಧಿಕಾರಿಗಳಿಗೆ ತಲಾ 65,000 ರೂ.ಗಳ ದಂಡದೊಂದಿಗೆ ಎರಡು ವರ್ಷಗಳ ಕಠಿಣ ಜೈಲು...

ಮಹಿಳೆ ಮತ ಚಲಾಯಿಸುವಾಗ ಮತಗಟ್ಟೆ ಪ್ರವೇಶಿಸಿದ ಶಾಸಕ : ತನಿಖೆಗೆ ಆದೇಶ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯಲ್ಲಿ ಮಂಗಳವಾರ (ಡಿ.2) ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಸಂದರ್ಭದಲ್ಲಿ ಮಹಿಳೆಯೊಬ್ಬರು ಮತ ಚಲಾಯಿಸುತ್ತಿದ್ದಾಗ ಶಿವಸೇನಾ ಶಾಸಕ ಸಂತೋಷ್ ಬಂಗಾರ್ ಮತಗಟ್ಟೆಗೆ ಪ್ರವೇಶಿಸುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದ್ದು, ಈ ಕುರಿತು ಚುನಾವಣಾ...

ಅಸ್ಸಾಂ| ಕಾರು ಸಹಿತ ಮುಳುಗುತ್ತಿದ್ದ ಏಳು ಜೀವಗಳ ರಕ್ಷಣೆ; ಮಸೀದಿ ಧ್ವನಿವರ್ಧಕದ ಮೂಲಕ ಗ್ರಾಮಸ್ಥರನ್ನು ಎಚ್ಚರಿಸಿದ ಇಮಾಮ್

ನೀರಿನಲ್ಲಿ ಮುಳುಗುತ್ತಿರುವ ವಾಹನದಲ್ಲಿ ಸಿಲುಕಿದ್ದ ಏಳು ಜನರನ್ನು ರಕ್ಷಿಸಲು ಮುಂಜಾನೆ ಮಸೀದಿ ಮೈಕ್‌ ಬಳಸಿ ಇಡೀ ಗ್ರಾಮವನ್ನು ಎಚ್ಚರಿಸಿದ ಅಸ್ಸಾಂನ ಮುಸ್ಲಿಂ ಧರ್ಮಗುರು ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ. ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆ...

ಪ್ರತಿಪಕ್ಷಗಳ ಪ್ರತಿಭಟನೆಗೆ ಮಣಿದ ಕೇಂದ್ರ : ಡಿ.9ರಂದು ಸಂಸತ್ತಿನಲ್ಲಿ ಎಸ್‌ಐಆರ್ ಚರ್ಚೆ

ಸಂಸತ್ತಿನ ಉಭಯ ಸದನಗಳಲ್ಲಿ ಎರಡು ದಿನಗಳಿಂದ ಪ್ರತಿಪಕ್ಷಗಳು ನಡೆಸಿದ ತೀವ್ರ ಪ್ರತಿಭಟನೆಗೆ ಕೇಂದ್ರ ಸರ್ಕಾರ ಮಣಿದಿದೆ. ಡಿಸೆಂಬರ್ 9ರಂದು ಚುನಾವಣಾ ಸುಧಾರಣೆಗಳು ಎಂಬ ವಿಷಯದ ಅಡಿಯಲ್ಲಿ ಎಸ್‌ಐಆರ್ ಕುರಿತು ಚರ್ಚೆ ನಡೆಸಲು ಒಪ್ಪಿಕೊಂಡಿದೆ. ವರದಿಗಳ...

‘ಸಂಚಾರ್ ಸಾಥಿ ಆ್ಯಪ್’ ಕಡ್ಡಾಯವಲ್ಲ, ಅಳಿಸಬಹುದು: ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ  

‘ಸಂಚಾರ್ ಸಾಥಿ’ ಅಪ್ಲಿಕೇಶನ್ ಅನ್ನು ಸಕ್ರಿಯಗೊಳಿಸುವುದು ಕಡ್ಡಾಯವಲ್ಲ, ನಿಮಗೆ ಬೇಡವೆಂದಾಗ ಅದನ್ನು ಅಳಿಸಬಹುದು ಎಂದು ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಸ್ಪಷ್ಟನೆ ನೀಡಿದ್ದಾರೆ.  ನವೆಂಬರ್ 28 ರಂದು, ಟೆಲಿಕಾಂ ಇಲಾಖೆ ಭಾರತದಲ್ಲಿ...

ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ 'ಬೀಫ್‌ ಕರಿ' ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ...

‘ಸಂಚಾರ್ ಸಾಥಿ’ ಆ್ಯಪ್ ಕಡ್ಡಾಯ | ಕೇಂದ್ರದ ಆದೇಶ ವಿರೋಧಿಸಲು ಮುಂದಾದ ಆ್ಯಪಲ್ : ವರದಿ

ಸ್ಮಾರ್ಟ್‌ಫೋನ್ ತಯಾರಕರು ಎಲ್ಲಾ ಹೊಸ ಮೊಬೈಲ್‌ ಫೋನ್‌ಗಳಲ್ಲಿ ಸರ್ಕಾರಿ ಸ್ವಾಮ್ಯದ 'ಸಂಚಾರ್ ಸಾಥಿ' ಆ್ಯಪ್ ಪ್ರಿ ಇನ್‌ಸ್ಟಾಲ್ (Pre-Install) ಮಾಡಬೇಕು ಮತ್ತು ಬಳಕೆದಾರರು ಅದನ್ನು ಡಿಲಿಟ್ ಮಾಡದಂತೆ ನೋಡಿಕೊಳ್ಳಬೇಕು ಎಂಬ ಕೇಂದ್ರ ಸರ್ಕಾರದ...

ಬಾಂಗ್ಲಾದೇಶಿಗರು ಎಂಬ ಆರೋಪ : ಬಂಗಾಳದ ನಾಲ್ವರು ಮುಸ್ಲಿಂ ವ್ಯಾಪಾರಿಗಳಿಗೆ ಒಡಿಶಾ ತೊರೆಯಲು 72 ಗಂಟೆಗಳ ಗಡುವು

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ನಾಲ್ವರು ಮುಸ್ಲಿಂ ವ್ಯಾಪಾರಿಗಳನ್ನು ಬಾಂಗ್ಲಾದೇಶಿಯರು ಮತ್ತು ರೋಹಿಂಗ್ಯಾ ವಲಸಿಗರು ಎಂದು ಆರೋಪಿಸಿ ಒಡಿಶಾದ ನಯಾಗಢವನ್ನು ತೊರೆಯಲು 72 ಗಂಟೆಗಳ ಗಡುವು ನೀಡಲಾಗಿದೆ ಎಂದು ದಿ ಟೆಲಿಗ್ರಾಫ್ ಮಂಗಳವಾರ...

‘ನಮ್ಮಲ್ಲಿ ಭಿನ್ನಾಭಿಪ್ರಾಯಗಳಿಲ್ಲ, ಒಗ್ಗಟ್ಟಿನಿಂದ ಇದ್ದೇವೆ: ನಾನು, ಡಿ.ಕೆ. ಶಿವಕುಮಾರ್ ಸಹೋದರರಿದ್ದಂತೆ’: ಸಿಎಂ ಸಿದ್ದರಾಮಯ್ಯ

‘ನಾನು ಹಾಗೂ ಉಪಮುಖ್ಯಮಂತ್ರಿಗಳು ಸಹೋದರರಿದ್ದಂತೆ, ಒಂದೇ ಪಕ್ಷದಲ್ಲಿದ್ದು, ಒಂದೇ ಸಿದ್ಧಾಂತ ನಂಬಿಕೊಂಡಿದ್ದೇವೆ, 2028ರ ಚುನಾವಣೆಯಲ್ಲಿಯೂ ಒಟ್ಟಿಗೆ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 2, ಮಂಗಳವಾರ ಉಪಮುಖ್ಯಮಂತ್ರಿ...