Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...