Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...