Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಯಾವಾಗ ಕೊನೆಗೊಳ್ಳುತ್ತದೆ ಎಂಬುದನ್ನು ಇರಾನ್ ನಿರ್ಧರಿಸುತ್ತದೆ’: ಟ್ರಂಪ್ ‘ಅಲ್ಪಾವಧಿಯ ಸಂಘರ್ಷ’ ಹೇಳಿಕೆಗೆ ಇರಾನ್ ತಿರುಗೇಟು 

ಟೆಹ್ರಾನ್: ಇರಾನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಟೆಹ್ರಾನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಅಮೆರಿಕ ಮತ್ತು ಇಸ್ರೇಲಿ ಗುರಿಗಳ ವಿರುದ್ಧದ ಮಿಲಿಟರಿ ಕ್ರಮಗಳು ಯಾವಾಗ ನಿಂತವು ಎಂಬುದನ್ನು...

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...