Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...

‘ಆರ್‌ಎಸ್‌ಎಸ್-ಬಿಜೆಪಿಯ ರಕ್ತನಾಳಗಳಲ್ಲಿ ತಾರತಮ್ಯ ಹರಿಯುತ್ತಿದೆ’: ಖರ್ಗೆ ರ್ಯಾಲಿ ಸ್ಥಳದ ‘ಶುದ್ಧೀಕರಣ’ ಸಮರ್ಥಿಸಿಕೊಂಡ ಉತ್ತರಾಖಂಡ ಬಿಜೆಪಿ ರಾಜ್ಯಾಧ್ಯಕ್ಷನ ವಿರುದ್ಧ ಕಾಂಗ್ರೆಸ್ ಕಿಡಿ

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆಯ ನಂತರ ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಡೆದ ಸ್ಥಳೀಯ ‘ಶುದ್ಧೀಕರಣ’ ಸಮಾರಂಭದ ಸುತ್ತಲಿನ ರಾಜಕೀಯ ವಿವಾದವು ತೀವ್ರ ಸ್ವರೂಪ...

ಯುಜಿಸಿಇಟಿ ಸೀಟು ರದ್ದುಗೊಳಿಸಲು ರೂ.5,000 ಶುಲ್ಕ; ಕೆಇಎ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಯುಜಿಸಿಇಟಿ 2026ರ ಎರಡನೇ ಹಂತದ ಕೌನ್ಸಿಲಿಂಗ್‌ನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಗೊಳಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ರೂ.5,000 ದಂಡ ವಿಧಿಸುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನಿರ್ಧಾರವನ್ನು ವಿರೋಧಿಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಮಲ್ಲೇಶ್ವರದಲ್ಲಿರುವ ಕೆಇಎ...

162 ವರ್ಷಗಳ ಇತಿಹಾಸದಲ್ಲೇ ಪ್ರಥಮ: ಬಾಂಬೆ ಹೈಕೋರ್ಟ್ ವಕೀಲರ ಸಂಘಕ್ಕೆ ಮಹಿಳಾ ಅಧ್ಯಕ್ಷೆ! 

ಮುಂಬೈ: ಭಾರತೀಯ ನ್ಯಾಯಾಂಗ ರಂಗದ ಇತಿಹಾಸದಲ್ಲಿ ಅತ್ಯಂತ ಮಹತ್ವದ ಮತ್ತು ಕ್ರಾಂತಿಕಾರಿ ನಿರ್ಧಾರವೊಂದನ್ನು ಬಾಂಬೆ ಹೈಕೋರ್ಟ್‌ನ ಪ್ರತಿಷ್ಠಿತ ವಕೀಲರ ಸಂಘಟನೆಯಾದ 'ಅಸೋಸಿಯೇಷನ್‌ ಆಫ್‌ ಅಡ್ವೊಕೇಟ್ಸ್‌ ಆಫ್‌ ವೆಸ್ಟರ್ನ್ ಇಂಡಿಯಾ' (AAWI) ಕೈಗೊಂಡಿದೆ ಎಂದು...

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...