Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...