Homeಸಿನಿಮಾಕ್ರೀಡೆಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಶುಭಾರಂಭ: ನೇಪಾಳದ ವಿರುದ್ಧ ಮಹಿಳಾ ಟೇಬಲ್ ಟೆನಿಸ್ ಪಟುಗಳಿಗೆ ಗೆಲುವು

- Advertisement -
- Advertisement -

ಏಷ್ಯನ್ ಗೇಮ್ಸ್ ಗೇಮ್‌ನಲ್ಲಿ ಭಾರತ ಶುಭಾರಂಭ ಮಾಡಿದೆ. ಟೇಬಲ್ ಟೆನಿಸ್ ವಿಭಾಗದಲ್ಲಿ ಶನಿವಾರ ಭಾರತೀಯ ಮಹಿಳಾ ಪಟುಗಳಾದ ದಿಯಾ ಪರಾಗ್ ಚಿತಾಲೆ, ಆಯ್ಹಿಕಾ ಮುಖರ್ಜಿ ಹಾಗೂ ಸುತೀರ್ಥ ಮುಖರ್ಜಿ ನೇಪಾಳ ತಂಡದ ವಿರುದ್ಧ 3-0 ಅಂತರದಲ್ಲಿ ಸುಲಭ ಗೆಲುವು ಸಾಧಿಸಿದ್ದಾರೆ.

ಮೊದಲಿಗೆ ಭಾರತದ ದಿಯಾ ನೇಪಾಳದ ಸಿಕ್ಕಾ ಶ್ರೇಷ್ಠ ವಿರುದ್ಧ ಗೆಲುವು ದಾಖಲಿಸಿದರು. ಅವರು ಮೊದಲ ಪಂದ್ಯವನ್ನು 11-1 ಅಂತರದಲ್ಲಿ ಜಯಿಸಿದ್ದರು. ಅದೇ ಆತ್ಮವಿಶ್ವಾಸದಿಂದ ಆಟ ಮುಂದುವರಿಸಿದ ಅವರು, ಪಂದ್ಯವನ್ನು 7-2 ಅಂತರದೊಂದಿಗೆ ಜಯಿಸಿದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ನೇಪಾಳದ ಶ್ರೇಷ್ಠ ಅವರು ದಿಯಾಗೆ ತಿರುಗೇಟು ನೀಡಲು ಪ್ರಯತ್ನಿಸಿದರಾದರೂ, ದಿಯಾ ಎರಡನೆ ಪಂದ್ಯವನ್ನು 11-6 ಅಂತರದಲ್ಲಿ ಸುಲಭವಾಗಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ಭಾರತದ ದಿಯಾ ಮೇಲೆ ಒತ್ತಡ ಹೇರುವಲ್ಲಿ ವಿಫಲವಾದ ನೇಪಾಳದ ಶ್ರೇಷ್ಠ, ಪಂದ್ಯವನ್ನು 11-8 ಅಂತರದಲ್ಲಿ ಸೋತರು. ಇದರಿಂದ ಭಾರತಕ್ಕೆ ಆರಂಭಿಕ ಮುನ್ನಡೆ ದೊರೆಯಿತು.

ನಬಿತಾ ಶ್ರೇಷ್ಠ ವಿರುದ್ಧ ಎರಡನೆಯ ಪಂದ್ಯವಾಡಿದ ಆಯ್ಹಿಕಾ, ಮೊದಲಿಗೆ 2-1 ಮುನ್ನಡೆ ಸಾಧಿಸಿ, ನಂತರ ಪಂದ್ಯವನ್ನು 5-3 ಅಂತರಕ್ಕೆ ಕೊಂಡೊಯ್ದರು. ನಂತರ 11-3 ಅಂತರದಲ್ಲಿ ಮೊದಲ ಪಂದ್ಯವನ್ನು ಜಯಿಸಿದರು.

ಆಯ್ಹಿಕಾಗೆ ಎರಡನೆ ಪಂದ್ಯದಲ್ಲಿ ಪ್ರಬಲ ಪೈಪೋಟಿ ಒಡ್ಡಿದ ನಬಿತಾ, ಪ್ರತಿ ಪಾಯಿಂಟ್‌ಗೂ ಆಯ್ಹಿಕಾ ಹೋರಾಟ ನಡೆಸುವಂತೆ ಮಾಡಿದರು. ಹೀಗಿದ್ದೂ ಆಯ್ಹಿಕಾ ಎರಡನೆ ಪಂದ್ಯವನ್ನು 11-7 ಅಂತರದಲ್ಲಿ ಗೆದ್ದುಕೊಂಡರು. ಮೂರನೆಯ ಪಂದ್ಯದಲ್ಲಿ ನಬಿತಾ ಪೇಲವ ಆಟ ಪ್ರದರ್ಶಿಸಿದ್ದರಿಂದ ಆಯ್ಹಿಕಾ ಆ ಪಂದ್ಯವನ್ನು 11-2 ಅಂತರದಲ್ಲಿ ಜಯಿಸಿದರು. ಇದರಿಂದ ಭಾರತಕ್ಕೆ ನೇಪಾಳದ ವಿರುದ್ಧ 2-0 ಮುನ್ನಡೆ ದೊರೆಯಿತು.

ಮೂರನೆಯ ಪಂದ್ಯದಲ್ಲಿ ನೇಪಾಳದ ಇವಾನಾ ಥಾಪಾ ಮಗರ್ ಅವರನ್ನು ಎದುರಿಸಿದ ಸುತೀರ್ಥ, ಪಂದ್ಯವನ್ನು ಆದಷ್ಟೂ ಬೇಗ ಮುಗಿಸುವ ಧಾವಂತ ಪ್ರದರ್ಶಿಸಿದರು. ಇವಾನಾಗೆ ಯಾವುದೇ ಸಣ್ಣ ಅವಕಾಶವನ್ನೂ ನೀಡದ ಸುತೀರ್ಥ, ಮೊದಲ ಸುತ್ತಿನಲ್ಲಿ 8-0 ಅಂತರದ ಗೆಲುವು ಸಾಧಿಸಿದರು. ನಂತರ ಎರಡು ಮತ್ತು ಮೂರನೆಯ ಸುತ್ತನ್ನು ಕ್ರಮವಾಗಿ 11-5 ಹಾಗೂ 11-2ರ ಅಂತರದಲ್ಲಿ ಜಯಿಸಿದರು.

ಇದನ್ನೂ ಓದಿ: ಏಷ್ಯನ್ ಗೇಮ್ಸ್: ಅರುಣಾಚಲದ ಮೂವರು ವೂಶೂ ಆಟಗಾರ್ತಿಯರಿಗೆ ಚೀನಾ ಪ್ರವೇಶ ನಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...